Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ತೀರ್ಥಹಳ್ಳಿ | ಹೆಗ್ಗೋಡು ಗ್ರಾಮಸ್ಥರಿಂದ...

ತೀರ್ಥಹಳ್ಳಿ | ಹೆಗ್ಗೋಡು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ : ಗ್ರಾಮ ಪ್ರವೇಶಿಸದಂತೆ ರಾಜಕಾರಣಿಗಳಿಗೆ ಎಚ್ಚರಿಕೆ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಜನರು

ವಾರ್ತಾಭಾರತಿವಾರ್ತಾಭಾರತಿ20 March 2024 4:33 PM IST
share
ತೀರ್ಥಹಳ್ಳಿ | ಹೆಗ್ಗೋಡು ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ : ಗ್ರಾಮ ಪ್ರವೇಶಿಸದಂತೆ ರಾಜಕಾರಣಿಗಳಿಗೆ ಎಚ್ಚರಿಕೆ

ಶಿವಮೊಗ್ಗ: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಗ್ರಾಮದ ಗ್ರಾಮಸ್ಥರು ಮುಂಬರುವ ಲೋಕಸಭಾ ಚುನಾವಣೆಯಗೆ ಬಹಿಷ್ಕಾರ ಹಾಕಿದ್ದಾರೆ.ಅಲ್ಲದೇ ಯಾವುದೇ ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸಿದರೆ ಮಹಿಳೆಯರಿಂದ ಪೊರಕೆ ಉಪಚಾರ ಮಾಡಿಸುತ್ತೇವೆ ಎಂದು ಬ್ಯಾನರ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಜಲ ಜೀವನ್ ಮಿಷನ್ ಅಡಿಯಲ್ಲಿ 36 ಗ್ರಾಮ ಪಂಚಾಯಿತಿಗಳಿಗೆ ಅನುಕೂಲವಾಗುವಂತೆ ರೂ.348 ಕೋಟಿ ವೆಚ್ಚದಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಅನುಮೋದಿತ ಯೋಜನೆಯಂತೆ ತುಂಗಾ ಮತ್ತು ಮಾಲತಿ ನದಿಗಳು ಸೇರುವ ಭೀಮನಕಟ್ಟೆಯಲ್ಲಿ ನೀರನ್ನು ಲಿಫ್ಟ್ ಮಾಡಲಾಗುವುದು. ಅಲ್ಲಿಂದ ಪೈಪ್‌ಲೈನ್ ಮೂಲಕ 36 ಗ್ರಾಮ ಪಂಚಾಯಿತಿಗಳ ಎಲ್ಲಾ ಗ್ರಾಮಗಳಿಗೆ ನೀರು ಸರಬರಾಜು ಮಾಡುವಂತಹ ಬೃಹತ್ ಯೋಜನೆ ಇದಾಗಿದೆ.

ಆದರೆ ಈ ನದಿ ತೀರದ ಜನರ ಅಭಿಪ್ರಾಯದಂತೆ ಈ ಯೋಜನೆಯೇ ಅವೈಜ್ಞಾನಿಕ ಎನ್ನಲಾಗಿದೆ. ತುಂಗಾ ಮತ್ತು ಮಾಲತಿ ನದಿಗಳು ಮಾರ್ಚ್ ಮತ್ತು ಜೂನ್ ನಡುವೆ ಒಣಗುತ್ತವೆ. ತಾಲ್ಲೂಕಿನ ಸಂಪೂರ್ಣ ಜನತೆ ಕೇಂದ್ರೀಕೃತ ಪಂಪಿಂಗ್ ಸ್ಟೇಷನ್ ಅವಲಂಬಿತವಾಗುವಂತೆ ಮಾಡಿದರೆ ಬೇಸಿಗೆಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಅದಲ್ಲದೆ ನದಿಯ ಎರಡೂ ಬದಿಯಲ್ಲಿ ನೂರಾರು ರೈತರು ನದಿ ನೀರನ್ನು ನಂಬಿ ಕೃಷಿ ಮಾಡುತ್ತಿದ್ದಾರೆ. ಕುಡಿಯುವ ನೀರು ಸರಬರಾಜು ಯೋಜನೆಯು ಬೇಸಿಗೆಯ ತಿಂಗಳುಗಳಲ್ಲಿ ತಮ್ಮ ನೀರಿನ ಮೂಲವನ್ನು ಕಸಿದುಕೊಳ್ಳಬಹುದು ಎಂಬ ಆತಂಕ ಸುತ್ತಲಿನ ಗ್ರಾಮಸ್ಥರಲ್ಲಿದೆ. ಅಡಿಕೆ ಬೆಳೆಯೇ ಇಲ್ಲಿನ ಜನರ ಮೂಲ ಕಸುಬಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆ ಕೈಗೆತ್ತುಕೊಂಡದ್ದೇ ಆದರೆ ಇಲ್ಲಿನ ನೂರಾರು ಗ್ರಾಮಸ್ಥರ ಬದುಕೇ ಬೀದಿ ಪಾಲಾಗಲಿದೆ ಎಂಬ ಆತಂಕ ಎದುರಾಗಿದೆ.

ನೂರಾರು ರೈತರ ಬದುಕು ಮುಳುಗಿಸಿ ತಾಲ್ಲೂಕಿಗೆ ಕುಡಿಯುವ ನೀರು ಕೊಡುತ್ತೇವೆ ಎಂಬುದು ಎಷ್ಟು ವೈಜ್ಞಾನಿಕ ಎಂದು ಪ್ರಶ್ನಿಸಿರುವ ಗ್ರಾಮಸ್ಥರು, ಈ ಅವೈಜ್ಞಾನಿಕ ಯೋಜನೆ ಕೈಬಿಡಬೇಕು.ರಾಜಕಾರಣಿಗಳು ಗ್ರಾಮದೊಳಗೆ ಪ್ರವೇಶಿಸಿದರೆ ಮಹಿಳೆಯರಿಂದ ಪೊರಕೆ ಸೇವೆ ನೀಡುವುದಾಗಿ ಬ್ಯಾನರ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ರಾಜಕಾರಣಿಗಳು ತೀರ್ಥಹಳ್ಳಿ ತಾಲ್ಲೂಕಿನ ಆಲಗೇರಿ, ಹೆಗ್ಗೋಡು ಗ್ರಾಮಕ್ಕೆ ಬರುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಮುಳುಬಾಗಿಲು, ಹೊಸಹಳ್ಳಿ, ತೀರ್ಥಮುತ್ತೂರು ಸೇರಿದಂತೆ ತುಂಗಾ ಹಾಗೂ ಮಾಲತಿ ನದಿ ತೀರದ 15 ಗ್ರಾ.ಪಂ. ವ್ಯಾಪ್ತಿಯಲ್ಲಿಯೂ ಪ್ರವೇಶ ನಿರ್ಬಂಧಕ್ಕೆ ತೀರ್ಮಾನಿಸಲಾಗಿದೆ ಎಂದು ಹೋರಾಟ ಸಮಿತಿಯ ರೈತ ಮುಖಂಡ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೋಡ್ಲು ವೆಂಕಟೇಶ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟಗಾರರಾದ ಕಂಬಳಿಗೆರೆ ರಾಜೇಂದ್ರ, ಅಭಿಲಾಶ್ ಸೌಳಿ, ಬಿಕ್ಕೊಳ್ಳಿ ಮಂಜುನಾಥ್ ಮುಂತಾದವರಿದ್ದರು.

ತಾಲೂಕು ರೈತ ಸಂಘ ಬೆಂಬಲ:

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡು ಗ್ರಾಮದ ಗ್ರಾಮಸ್ಥರು ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದನ್ನು ತಾಲೂಕು ರೈತ ಸಂಘ ಬೆಂಬಲಿಸಿದೆ.

ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಂಘವು, ತೀರ್ಥಹಳ್ಳಿ ತಾಲ್ಲೂಕಿನ ಉದ್ದೇಶಿತ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯು ಅವೈಜ್ಞಾನಿಕ. ಮತ್ತು ನದಿಗಳೂ ಸೇರಿದಂತೆ ಜಲಮೂಲಗಳ ನೀರಿನ ಮೇಲಿನ ಜನಸಾಮಾನ್ಯರ ಹಕ್ಕನ್ನು ಕಸಿದು ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಒತ್ತೆ ಇಡುವ ಕೇಂದ್ರೀಕೃತ ಯೋಜನೆಗಳನ್ನು ರೂಪಿಸಬಾರದೆಂದು ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X