Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Shivamogga | ಭೂತನಗೂಡಿ ವೃದ್ಧ ದಂಪತಿ...

Shivamogga | ಭೂತನಗೂಡಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ತಿರುವು; ಮೃತರ ಸಂಬಂಧಿಕನಿಂದಲೇ ಕೊಲೆ

ವಾರ್ತಾಭಾರತಿವಾರ್ತಾಭಾರತಿ21 Jan 2026 9:26 PM IST
share
Shivamogga | ಭೂತನಗೂಡಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ತಿರುವು; ಮೃತರ ಸಂಬಂಧಿಕನಿಂದಲೇ ಕೊಲೆ
ಆರೋಪಿಯ ಬಂಧನ

ಶಿವಮೊಗ್ಗ: ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗೂಡಿಯಲ್ಲಿ ವೃದ್ಧ ದಂಪತಿ ನಿಗೂಢ ಸಾವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಭೂತನಗೂಡಿಯಲ್ಲಿ ಮಂಗಳವಾರ ಸಂಜೆ ಎರಡು ಮೃತದೇಹಗಳು ಪತ್ತೆಯಾಗಿತ್ತು. ಪರಿಶೀಲನೆ ನಡೆಸಿದಾಗ ಚಂದ್ರಪ್ಪ(82)ಮತ್ತು ಜಯಮ್ಮ(72) ಎಂಬವರ ಮೃತದೇಹ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿತ್ತು. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಎಂದು ಯು.ಡಿ.ಆರ್. ದಾಖಲಿಸಲಾಗಿತ್ತು. ನಂತರ ತನಿಖೆ ಆರಂಭಿಸಿದಾಗ ಮೃತ ದಂಪತಿಯ ಸಂಬಂಧಿಕನಿಂದಲೇ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ಇಂಜೆಕ್ಷನ್ ನೀಡಿ ಬಚಾವ್ ಆಗಲು ಮುಂದಾಗಿದ್ದ ವೈದ್ಯ: ಶಿವಮೊಗ್ಗದಲ್ಲಿ ಬಿಎಎಂಎಸ್ ವೈದ್ಯನಾಗಿ ಎರಡು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದ ಮಲ್ಲೇಶ್ ಬಹಳ ಸಾಲ ಮಾಡಿಕೊಂಡಿದ್ದ. ಮೃತ ಚಂದ್ರಪ್ಪನವರಿಗೆ ಆರೋಗ್ಯ ಸಮಸ್ಯೆ ಇತ್ತು ಎಂಬುದು ಮಲ್ಲೇಶ್ ನಿಗೆ ಗೊತ್ತಿತ್ತು. ಮನೆಗೆ ಬಂದವನು ಇಬ್ಬರ ಆರೋಗ್ಯ ವಿಚಾರಿಸಿದ್ದಾನೆ. ಹಳೆಯ ಮೆಡಿಕಲ್ ರಿಪೋರ್ಟ್‌ನ್ನು ಕೇಳಿ ಪಡೆದಿದ್ದಾನೆ. ಅವರಿಗೆ ಕೈ-ಕಾಲು ಗಂಟಿನ ನೋವು ಕಡಿಮೆಯಾಗಲು ಇಂಜೆಕ್ಷನ್ ನೀಡುವುದಾಗಿ ತಿಳಿಸಿ ಚಿಕಿತ್ಸೆ ನೀಡುವ ನೆಪದಲ್ಲಿ ಚಂದ್ರಪ್ಪ ಮತ್ತು ಅವರ ಪತ್ನಿಗೆ ತಲಾ 50 ಎಂ.ಜಿ. ಪ್ರೊಫೋಫೋಲ್ ಎಂಬ ಅರಿವಳಿಕೆ ಇಂಜೆಕ್ಷನ್ ನೀಡಿದ್ದಾನೆ.

ಅತಿಯಾದ ಡೋಸ್‌ನಿಂದ ದಂಪತಿ ಸಾವನ್ನಪ್ಪುತ್ತಿದ್ದಂತೆಯೇ, ಅವರ ಮೈಮೇಲಿದ್ದ ಸುಮಾರು 80 ಗ್ರಾಂ ಚಿನ್ನಾಭರಣಗಳನ್ನು ದೋಚಿದ್ದಾನೆ. ಒಂದೇ ದಿನದಲ್ಲಿ ಕೊಲೆ ಮಾಡಿ, ಚಿನ್ನವನ್ನು ಅಡವಿಟ್ಟು ಸಾಲ ತೀರಿಸಲು ಮುಂದಾಗಿದ್ದ. ಖಾತೆಯಲ್ಲಿ 50 ಸಾವಿರ ರೂ. ಇಟ್ಟುಕೊಂಡಿದ್ದಾನೆ. ಇದು ಪ್ರೀ ಪ್ಲ್ಯಾನ್ ಕೋಲ್ಡ್ ಬ್ಲಡಡ್ ಮರ್ಡರ್ ಆಗಿದೆ ಎಂದು ಮಾಹಿತಿ ನೀಡಿದ ಎಸ್ಪಿ, ತನಿಖೆಯಲ್ಲಿ ಪಾಲ್ಗೊಂಡ ತಂಡಕ್ಕೆ ನಗದು ಬಹುಮಾನ ಘೋಷಿಸಿ ಅಭಿನಂದನೆ ಸಲ್ಲಿಸಿದರು.

ಸುದ್ದಿಗೋಷ್ಟಿಯಲ್ಲಿ ಹೆಚ್ಚುವರಿ ಎಸ್ಪಿ ಕಾರಿಯಪ್ಪ, ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್, ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆ ವೃತ್ತ ನಿರೀಕ್ಷಕಿ ನಾಗಮ್ಮ, ಉಪನಿರೀಕ್ಷಕ ಸುನೀಲ್ ಇದ್ದರು

ಮಗ ಕರೆ ಮಾಡಿದಾಗ ಪ್ರಕರಣ ಬೆಳಕಿಗೆ

ವೃದ್ಧ ದಂಪತಿ ಭದ್ರಾವತಿಯ ಭೂತನಗುಡಿ ಏರಿಯಾದಲ್ಲಿರುವ ಮನೆಯಲ್ಲಿ ವಾಸವಾಗಿದ್ದು, ಎಂದಿನಂತೆ ಅವರ ಮಗ ವಿಶ್ವನಾಥ್ ದೂರವಾಣಿ ಸಂಪರ್ಕಿಸಲು ಪ್ರಯತ್ನಿಸಿದಾಗ ವೃದ್ಧ ದಂಪತಿ ಕರೆ ಸ್ವೀಕರಿಸದ ಕಾರಣ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಸುತ್ತಲೂ ಪರಿಚಿತರಿರುವ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಸಾವಿಗೀಡಾಗಿರುವುದು ಕಂಡು ಬಂದಿದೆ.

ಆರೋಪಿಯ ಬಂಧನ

ಘಟನೆ ಸಂಬಂಧ ಡಾ.ಮಲ್ಲೇಶ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಮೃತ ಚಂದ್ರಪ್ಪ ಅವರ ತಮ್ಮ ಪಾಲಾಕ್ಷಪ್ಪ ಎಂಬವರ ಮಗ. ವೃತ್ತಿಯಲ್ಲಿ ಬಿಎಎಂಎಸ್ ವೈದ್ಯನಾಗಿರುವ ಮಲ್ಲೇಶ್ ವಿಪರೀತ ಸಾಲದ ಸುಳಿಯಲ್ಲಿ ಸಿಲುಕಿದ್ದ. ಅದನ್ನು ತೀರಿಸಲು ಚಂದ್ರಪ್ಪ ಅವರ ಬಳಿ 15 ಲಕ್ಷ ರೂ. ಸಾಲ ಕೇಳಿದ್ದ. ಆದರೆ, ಅವರು ಹಣ ನೀಡಲು ನಿರಾಕರಿಸಿದ್ದರು. ಇದೇ ದ್ವೇಷ ಹಾಗೂ ಹಣದ ಹಪಾಹಪಿಯಿಂದ ದಂಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ಎಂದು ತನಿಖೆಯಲ್ಲಿ ಬಯಲಾಗಿದೆ ಎಂದು ಎಸ್ಪಿ ನಿಖಿಲ್ ಮಾಹಿತಿ ನೀಡಿದರು.

Tags

shivamoggaMurder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X