Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ʼಗ್ಯಾರಂಟಿʼ ಯೋಜನೆಗಳು ಜನಸಾಮಾನ್ಯರ...

ʼಗ್ಯಾರಂಟಿʼ ಯೋಜನೆಗಳು ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ : ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ18 Feb 2024 5:31 PM IST
share
ʼಗ್ಯಾರಂಟಿʼ ಯೋಜನೆಗಳು ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮನೆ ಒಡತಿಗೆ 2000 ರೂ.ಗಳ ಸಹಾಯಧನ ನೀಡುವ ಗೃಹಲಕ್ಷ್ಮಿ, ರಾಜ್ಯದ ಪ್ರತಿ ಮನೆ ಮನೆಗೆ ಉಚಿತ ವಿದ್ಯುತ್ ಒದಗಿಸುವ ಗೃಹಜ್ಯೋತಿ, ಮುಂತಾದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ರವಿವಾರ ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ಅವರು, ʼಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕಾಂಗ್ರೆಸ್‌ ಸರಕಾರ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದರು.

ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ, ಆರಾಧನಾ, ಗ್ರಾಮೀಣ ಕೃಪಾಕದಂತಹ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದರು. ಮೂರು ದಶಕಗಳ ಹಿಂದೆ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಗೆ ತರಲಾಗಿತ್ತು.‌ ಅದು ಇಂದು ಕೂಡ ಚಾಲ್ತಿಯಲ್ಲಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಶಿಕಾರಿಪುರ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 53708, ಗೃಹಜ್ಯೋತಿ ಯೋಜನೆ ಅಡಿ 5843, ಅನ್ನಭಾಗ್ಯ ಯೋಜನೆಯಲ್ಲಿ 55,947, ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಅಡಿ ಸುಮಾರು 13 ಲಕ್ಷ ಜನ ಪ್ರಯಾಣಿಸಿದ್ದು ಅದಕ್ಕಾಗಿ 5.50 ಕೋಟಿ ರೂಪಾಯಿಗಳ ವೆಚ್ಚವನ್ನು ಸರಕಾರ ಭರಿಸಿದೆ. ಯುವನಿಧಿ ಯೋಜನೆಯಲ್ಲಿ ಶಿಕಾರಿಪುರ ತಾಲೂಕಿನ 600ಕ್ಕೂ ಹೆಚ್ಚು ವಿದ್ಯಾವಂತ ನಿರುದ್ಯೋಗಿ ಯುವಕರು ಹೆಸರು ನೋಂದಾಯಿಸಿದ್ದಾರೆ. ಅಲ್ಲದೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ನಾಗರಾಜ್ ಗೌಡ ,ಗೋಣಿ ಮಾಲತೇಶ್, ವೈ.ಹೆಚ್ ನಾಗರಾಜ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ಹಲವರಿದ್ದರು.

Tags

Madhu BangarappaGuarantee schemesಮಧು ಬಂಗಾರಪ್ಪ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X