Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಗೀತಾ ಶಿವರಾಜಕುಮಾರ್ ಸೋಲಿನ ಹೊಣೆ...

ಗೀತಾ ಶಿವರಾಜಕುಮಾರ್ ಸೋಲಿನ ಹೊಣೆ ನನ್ನದು:‌ ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ10 Jun 2024 6:31 PM IST
share
ಗೀತಾ ಶಿವರಾಜಕುಮಾರ್ ಸೋಲಿನ ಹೊಣೆ ನನ್ನದು:‌ ಸಚಿವ ಮಧುಬಂಗಾರಪ್ಪ

ಶಿವಮೊಗ್ಗ: ಗೀತಾ ಶಿವರಾಜಕುಮಾರ್ ಅವರ ಸೋಲಿನ ಹೊಣೆ ನನ್ನದು. ಆದರೆ, ಇಲ್ಲಿ ಗೀತಕ್ಕ 5.30 ಲಕ್ಷ ಮತ ಪಡೆದು ಕ್ಷೇತ್ರದ ಜನರ ಹೃದಯ ಗೆದ್ದಿದ್ದಾರೆ. ಇದು ಖಂಡಿತ ಸೋಲಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಮಧುಬಂಗಾರಪ್ಪ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಆರ್ಯ ಈಡಿಗ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಪೂರ್ತಿ ಆಗಲಿದೆ. ಮತ ನೀಡಿ ಹರಸಿದ ಎಲ್ಲಾ ಮತದಾರರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ ಅವರು, ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ ಎಂದರು.

ಗೀತಾ ಶಿವರಾಜಕುಮಾರ ಅವರು ಕ್ಷೇತ್ರದಲ್ಲಿ ಸೋತಿರಬಹುದು. ಆದರೆ, ಜನರ ಮನಸ್ಸು ಗೆದ್ದಿದ್ದಾರೆ. ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ. ಆದರೆ, ಜನರು ಗೀತಕ್ಕ ಅವರ ಕೈ ಹಿಡಿಯಲಿಲ್ಲ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ ಎಂದರು.

ಬಿಜೆಪಿ ವಾಮ ಮಾರ್ಗ ಅನುಸರಿಸಿ ಅಧಿಕಾರಕ್ಕೆ ಬಂದಿದೆ. ಅದೇ ಕಾರಣಕ್ಕೆ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಮಾಡಿದ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ. ಇದರಿಂದ, ಜನರೂ ಸಹ ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದು ತಿಳಿಯುತ್ತಿದೆ. ವಾಮ ಮಾರ್ಗದಿಂದ ಆಡಳಿತಕ್ಕೆ ಬಂದ ಬಿಜೆಪಿಗೆ ಜನರು ಪಾಠ ಕಲಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ಚುನಾವಣೆ ಪೂರ್ವ ಕ್ಷೇತ್ರದ ಎಲ್ಲಾ ಭಾಗದಲ್ಲಿ ಸಂಚರಿಸಿ, ಜನರಿಗೆ ಹತ್ತಿರ ಆಗಿದ್ದೇವೆ. ಇದು ದಣಿವಲ್ಲ. ಕ್ಷೇತ್ರದ ಜನರನ್ನು ಸಂಪರ್ಕಿಸಲು ಸಿಕ್ಕ ಅವಕಾಶ. ಇದರಿಂದ ಜನ 5.30 ಲಕ್ಷಗಳ ಮತ ನೀಡಿ, ಆಶೀರ್ವದಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲಾ ಮತದಾರರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಸೋಲು ಗೆಲುವನ್ನು ಸಮನಾಂತರವಾಗಿ ಸ್ವೀಕರಿಸಬೇಕು. ಇಲ್ಲಿ ಸೋಲಿಗೆ ಎದೆಗುಂದಕೂಡದು. ಇದು ನನ್ನ ಅನುಭವದ ಮಾತು. ಆದ್ದರಿಂದ ಸೋಲಿಗೆ ಕಾರಣಗಳನ್ನು ಕಂಡುಕೊಂಡು, ಜನ ಸಾಮಾನ್ಯರಿಗೆ ಹತ್ತಿರವಾಗಿ ಸೇವೆ ಸಲ್ಲಿಸಬೇಕು ಎಂದರು.

ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕಿರುವುದು ಕುರ್ಚಿ ಮಾತ್ರ, ಕುರ್ಚಿಯ ಕಾಲು ಬೇರೆಯವರ ಬಳಿ ಇದೆ. ಕಾಂಗ್ರೆಸ್ ಸೈಂದ್ಧಾಂತಿಕ ನಿಲುವನ್ನು ತೆಗೆದುಕೊಂಡಿದೆ. ಇಲ್ಲಿ ಬಿಜೆಪಿ ಪಕ್ಷದ ಸಿದ್ಧಾಂತಳಿಂದ ದೇಶಕ್ಕೆ ಭವಿಷ್ಯ ಇಲ್ಲ. ಬಿಜೆಪಿಯವರು ಸಂವಿಧಾನ ಬದಲಿಸುವ ಚಿಂತನೆ ನಡೆಸುತ್ತಿದ್ದಾರೆ. ನರೇಂದ್ರ ಮೋದಿ ಅವರು, ಸಂವಿಧಾನಕ್ಕೆ ನಮಸ್ಕರಿಸುವುದು ನಾಟಕ ಮಾತ್ರ. ಅದ್ದರಿಂದ, ದೇಶದ ಜನರು ಎಚ್ಚರಗೊಳ್ಳಬೇಕು. ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ಸ್ಥಾನ ಪಡೆಯಬೇಕಿದೆ. ಇಲ್ಲವಾದರೆ, ಕಾಂಗ್ರೆಸ್ ಅಸ್ಥಿತ್ವ ಕಳೆದುಕೊಳ್ಳಲಿದೆ. ಆದ್ದರಿಂದ, ಕಾರ್ಯಕರ್ತರು ಸಜ್ಜಾಗಬೇಕು ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಗೌರವಯುತ ಸೋಲಾಗಿದೆ. ಈ ಸೋಲು ರಾಜಕೀಯದ ಅಂತ್ಯ ಖಂಡಿತ ಅಲ್ಲ. ದೇಶದಲ್ಲಿ 400 ಸ್ಥಾನ ಪಡೆಯುತ್ತೇನೆ ಎನ್ನುತ್ತಿದ್ದ ಬಿಜೆಪಿ ಬಹುಮತ ಕೂಡ ಗಳಿಸಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದರು. ಆದರೆ, ಆ ಕ್ಷೇತ್ರದಲ್ಲಿ ಶ್ರೀ ರಾಮನೇ ಬಿಜೆಪಿಯನ್ನು ಸೋಲಿಸಿದನು. ಆದ್ದರಿಂದ, ಬಿಜೆಪಿಯ ಅಂತ್ಯ ಆರಂಭಗೊಂಡಿದೆ ಎಂದರು.

ದೇಶದಲ್ಲಿ ಆದಷ್ಟು ಬೇಗ ಬಿಜೆಪಿ ಸರ್ಕಾರ ಕುಸಿದು ಬೀಳಲಿದೆ. ಮುಂದಿನ ಎರಡು ವರ್ಷದಲ್ಲಿ ಮತ್ತೊಂದು ಚುನಾವಣೆ ಎದುರಿಸಲಿದ್ದೇವೆ. ಅದ್ದರಿಂದ, ಇದಕ್ಕೆ ಸಿದ್ಧತೆ ಅಗತ್ಯ. ಲೋಕಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರನನ್ನು ದ್ವೇಷಿಸುವುದಿಲ್ಲ. ಈ ಸೋಲನ್ನು ಪ್ರೀತಿಯಿಂದ ಸ್ವೀಕರಿಸುತ್ತೇವೆ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್,ಎಸ್.ರವಿಕುಮಾರ್, ಬಲ್ಕೀಸ್ ಭಾನು, ಆರ್.ಎಂ.ಮಂಜುನಾಥ ಗೌಡ, ಎಚ್.ಸಿ.ಯೋಗೀಶ್, ನಾಗರಾಜ್ ಗೌಡ, ಎಂ.ಶ್ರೀಕಾಂತ್, ಬಿ.ಕೆ.ಮೋಹನ್, ಜಿ.ಪಲ್ಲವಿ, ಎನ್.ರಮೇಶ್,ಜಿ.ಡಿ.ಮಂಜುನಾಥ, ಎಸ್.ಕೆ.ಮರಿಯಪ್ಪ, ಚಂದ್ರಭೂಪಾಲ್, ಅನಿತಾ ಕುಮಾರಿ, ಮುಡುಬ ರಾಘವೇಂದ್ರ ಸೇರಿ ಕಾರ್ಯಕರ್ತರು ಇದ್ದರು.

ಶಕ್ತಿ ಧಾಮ ನಿರ್ಮಿಸುವೆ: ಗೀತಾ ಶಿವರಾಜಕುಮಾರ್

ಶಿವಮೊಗ್ಗದಲ್ಲಿ ಶಕ್ತಿಧಾಮ ನಿರ್ಮಾಣ ಮಾಡುತ್ತೇವೆ. ಶೋಷಿತ ವರ್ಗಗಳಿಗೆ ನೆರಳಾಗಿರುತ್ತೇವೆ. ಅದೇ ರೀತಿ ಕ್ಷೇತ್ರದ ಜನರಿಗೆ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ. ಜಿಲ್ಲೆಯಲ್ಲಿ ಮನೆ ಇಲ್ಲ ಎನ್ನುವ ಆರೋಪ ನಮ್ಮ ಮೇಲಿದೆ. ಇದಕ್ಕೆ ಉತ್ತರವಾಗಿ ಖಂಡಿತ ಮನೆ ನಿರ್ಮಾಣ ಮಾಡುತ್ತೇವೆ. ಕ್ಷೇತ್ರಕ್ಕೆ ಸಾಮಾಜಿಕ ಕೊಡುಗೆ ನೀಡಲು ಹೆಚ್ಚಿನ ಶ್ರಮ ಹಾಕುತ್ತೇವೆ- ಗೀತಾ ಶಿವರಾಜಕುಮಾರ, ಪರಾಜಿತ ಅಭ್ಯರ್ಥಿ.

ಗೀತಾ ರಾಜಕೀಯಕ್ಕೆ ಬಂದಿದ್ದು ತಪ್ಪೇ?: ಶಿವಣ್ಣ ಪ್ರಶ್ನೆ

ಚುನಾವಣೆಯಲ್ಲಿ ಪತ್ನಿ ಗೀತಾ ಪರ ಕಾರ್ಯಕರ್ತನಾಗಿ ಪ್ರಚಾರ ಮಾಡಿದ್ದೇನೆ. ಕೆಲವರು ನಾಟಕ ಎಂದು ಬಿಂಬಿಸುತ್ತಿದ್ದಾರೆ. ಇದಕ್ಕೆ ಉತ್ತರ ಕೊಡುವ ಅನಿವಾರ್ಯತೆ ಇಲ್ಲ. ನಿಜ ಜೀವನದಲ್ಲಿ ನಾಟಕ ಮಾಡಿ ಅಭ್ಯಾಸ ನಮಗಿಲ್ಲ. ಕೂಲಿ ಕೆಲಸ ಮಾಡಿ, ಬೇಕಾದರೂ ಹೆಂಡತಿ ಮಕ್ಕಳನ್ನು ಸಾಕುತ್ತೇನೆ. ಆದರೆ, ನಾನು ಹೆದರುವುದಿಲ್ಲ. 50 ದಿನ ಕ್ಷೇತ್ರದ ಜನರೊಂದಿಗೆ ಹೆಜ್ಜೆ ಹಾಕಿದ್ದೇನೆ. ಈ ಬಗ್ಗೆ ಖುಷಿ ಇದೆ. ಗೀತಾರನ್ನು ರಾಜಕೀಯಕ್ಕೆ ಕಳುಹಿಸಿದ್ದು, ತಪ್ಪಾ? ಪ್ರತಿಯೊಬ್ಬರಿಗೂ ಒಂದೊಂದು ಕ್ಷೇತ್ರದಲ್ಲಿ ಆಸಕ್ತಿ ಇರುತ್ತದೆ. ಆದರೆ, ಕೆಲವರ ಟೀಕೆಗಳಿಂದ ಬೇಸರವಾಗಿದೆ ಎಂದು ಶಿವರಾಜಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X