Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ...

ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ, ದೈಹಿಕ ಶಿಕ್ಷಕರ ನೇಮಕ ಮಾಡಲಾಗುವುದು : ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ21 Dec 2025 2:19 PM IST
share
ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ, ದೈಹಿಕ ಶಿಕ್ಷಕರ ನೇಮಕ ಮಾಡಲಾಗುವುದು : ಮಧುಬಂಗಾರಪ್ಪ

ಶಿವಮೊಗ್ಗ : ದ್ವೇಷ ಭಾಷಣ ತಡೆ ಮಸೂದೆ ರಾಜ್ಯದ, ದೇಶದ ಭವಿಷ್ಯದ ಪೀಳಿಗೆಯ ದೃಷ್ಟಿಯಿಂದ ಬಹಳ ಒಳ್ಳೆಯ ನಿರ್ಧಾರವಾಗಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಬಂದಿದ್ದನ್ನು ಹಿಡಿದು ಸದನದಲ್ಲಿ ಕೆಲವರು ಪ್ರಶ್ನೆ ಮಾಡುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವುದೆಲ್ಲಾ ನಿಜವೇ ಎಂಬುದನ್ನು ಅರಿಯಬೇಕಿದೆ. ಕರಾವಳಿ ಭಾಗದ ಕೆಲ ಬಿಜೆಪಿ ಮುಖಂಡರು ಸೇರಿದಂತೆ ಹಲವಾರು ಮುಖಂಡರು ದ್ವೇಷ ಭಾಷಣ ಮಾಡಿಕೊಂಡೆ ಬದುಕುತ್ತಿದ್ದಾರೆ ಎಂದು ಆರೋಪಿಸಿದ ಅವರು, ರಾಜ್ಯದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವೇಷ ಭಾಷಣ ತಡೆ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದರು.

ನರೇಗಾ ಯೋಜನೆಯಲ್ಲಿ ಮಹಾತ್ಮ ಗಾಂಧಿ ಹೆಸರೇ ಕೈಬಿಟ್ಟಿದ್ದಾರೆ. ಇದರಂತಹ ನೀಚ ಕೆಲಸ ಮತ್ತೊಂದಿಲ್ಲ. ಮಹಾತ್ಮ ಗಾಂಧೀಜಿಯವರು ದುಡಿಯುವ ಕೈಗೆ ಕೆಲಸ ಕೊಡಿ ಎಂದಿದ್ದರು. ಆದರೆ ಬಿಜೆಪಿಯವರು ಅವರ ಹೆಸರನ್ನೆ ನರೇಗಾ ಯೋಜನೆಯಲ್ಲಿ ಕೈಬಿಟ್ಟಿದ್ದಾರೆ ಎಂದು ಕಿಡಿಕಾರಿದರು.

ಅಡಿಕೆ ಸಂಶೋಧನೆಗೆ 45 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂಬ ಸಂಸದ ರಾಘವೇಂದ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಸಂದರ್ಭದಲ್ಲಿ ಮನವಿ ಪತ್ರ ಕೊಡುವುದೇ ಇವರಿಗೆ ಕೆಲಸ. ಅಧಿವೇಶನಕ್ಕೂ ಮೊದಲು ಒಂದಷ್ಟು ಪತ್ರಗಳನ್ನು ತಯಾರು ಮಾಡಿಕೊಂಡು ಕೇಂದ್ರದ ಮಂತ್ರಿಗಳಿಗೆ ಮನವಿ ಕೊಟ್ಟು ಫೋಟೋ ಹೊಡೆಸಿಕೊಂಡು ಪತ್ರಿಕೆಗಳಲ್ಲಿ ಹಾಕಿಸಿಕೊಳ್ಳೋದು ಸಂಸದ ರಾಘವೇಂದ್ರ ಅವರ ಕೆಲಸವಾಗಿದೆ. ಅರ್ಜಿ ಕೊಟ್ಟ ತಕ್ಷಣ ಅಲ್ಲಿ ಕೆಲಸ ಆಗಲ್ಲ. ಈ ವಿಚಾರವಾಗಿ ಸಂಸದ ರಾಘವೇಂದ್ರ ಸುಳ್ಳು ಹೇಳಿದ್ದಾರೆ ಎಂದರು.

ಬಿಜೆಪಿಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸದನದಲ್ಲಿ ಅವಮಾನ ಮಾಡಿದ್ದಾರೆ. ಸರಿಯಾಗಿ ಹೇಳಿದ್ದರೂ ಕೂಡ ಅವರಿಗೆ ಅವಮಾನಿಸಲಾಯ್ತು. ನನ್ನ ಪಕ್ಕ ಕೂತು ಅವರು ಪಾಪ ಕಣ್ಣೀರು ಹಾಕಿದರು. ಅಧಿಕಾರಿಗಳು ನನಗೆ ಗೊಂದಲ ಮಾಡಿದರು ಅಂತಾ ಹೇಳಿದ್ದರು. ಗೃಹಲಕ್ಷ್ಮಿ ಯೋಜನೆಗೆ ವಿರೋಧ ಮಾಡಿದ ಬಿಜೆಪಿಯವರೇ ಇವತ್ತು ಹಣ ಬಂದಿಲ್ಲವೆಂದು ಆರೋಪಿಸುತ್ತಿದ್ದಾರೆ. ನಮ್ಮ ಸರಕಾರದ ಯೋಜನೆಗಳಿಗೆ ಅವರೇ ಮೊದಲು ಹೋಗಿ ಅರ್ಜಿ ಹಾಕುತ್ತಾರೆ ಎಂದು ಕುಟುಕಿದರು.

ಸಂಗೀತ, ದೈಹಿಕ ಶಿಕ್ಷಕರ ನೇಮಕ :

ಶಿಕ್ಷಣ ಇಲಾಖೆಯಲ್ಲಿ ಹಣದ ಕೊರತೆ ಇಲ್ಲ. ಕೆಪಿಎಸ್ ಶಾಲೆ ಎಲ್.ಕೆ.ಜಿ. ಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷಗಳ ಕಾಲ ಮಕ್ಕಳು ಒಂದೇ ಕಡೆ ವ್ಯಾಸಂಗ ಮಾಡಬಹುದಾಗಿದೆ. ಮುಂದಿನ ವರ್ಷದಿಂದ ಎಲ್.ಕೆ.ಜಿ. ಯಿಂದ ದ್ವಿತೀಯ ಪಿಯುಸಿ ವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ ದೈಹಿಕ ಶಿಕ್ಷಕರ ನೇಮಕ ಮಾಡಲಾಗುವುದು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯನವರ ಗಮನ ಸೆಳೆಯಲಾಗುವುದು ಎಂದರು.

ಶಿವಮೊಗ್ಗ ಕಮಿಷನೆರೇಟ್ ಮಾಡಬೇಕೆಂಬ ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗಾಂಜಾ, ಅಫೀಮು, ಅನೈತಿಕ ಚಟುವಟಿಕೆ ಬಗ್ಗೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ. ಕಮಿಷನರೇಟ್ ಮಾಡುವ ಹೊರತಾಗಿಯೂ ಇದಕ್ಕೆಲ್ಲಾ ಕಡಿವಾಣ ಹಾಕಲು ನಾನು ಸೂಚಿಸಿದ್ದೇನೆ ಎಂದು ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X