Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಪ್ರಧಾನಿ ಮೋದಿ ಮಾಂಗಲ್ಯವನ್ನು ಎಳತಂದು ಮತ...

ಪ್ರಧಾನಿ ಮೋದಿ ಮಾಂಗಲ್ಯವನ್ನು ಎಳತಂದು ಮತ ಕೇಳುತ್ತಿರುವುದು ಕೀಳು ಮಟ್ಟದ ರಾಜಕಾರಣ : ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ23 April 2024 11:01 PM IST
share
ಪ್ರಧಾನಿ ಮೋದಿ ಮಾಂಗಲ್ಯವನ್ನು ಎಳತಂದು ಮತ ಕೇಳುತ್ತಿರುವುದು ಕೀಳು ಮಟ್ಟದ ರಾಜಕಾರಣ : ಮಧು ಬಂಗಾರಪ್ಪ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಮಾಂಗಲ್ಯವನ್ನು ಮಧ್ಯ ತಂದು ಮತ ಕೇಳುವ ಮಟ್ಟಕ್ಕೆ ಹೋಗಿರುವುದು ಅತ್ಯಂತ ಅಪಾಯಕಾರಿ ಮತ್ತು ಕೀಳು ಮಟ್ಟದ ರಾಜಕಾರಣ ಎಂದು ಸಚಿವ ಮಧು ಬಂಗಾರಪ್ಪ ಟೀಕಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮಹಿಳೆಯರಿಗೆ ಗೌರವ ಕೊಡುತ್ತದೆ ಎಂಬ ಮಾತು ಸುಳ್ಳಾಗಿದೆ. ಪ್ರಧಾನಿ ಮೋದಿ ನಾನು ಈ ದೇಶದ ಪ್ರಧಾನಿ ಎಂಬುವುದನ್ನು ಮರೆತು ಮಹಿಳೆಯರನ್ನು ಮಧ್ಯ ತಂದು ಮಾಂಗಲ್ಯದ ವಿಷಯ ಪ್ರಸ್ತಾಪಿಸುತ್ತಾರೆ. ತಾಳಿ ಎನ್ನುವುದು ತುಂಬ ಪವಿತ್ರವಾದದ್ದು, ತಾಳ್ಮೆ ಇಲ್ಲದೆ ಅವರು ಮಾತನಾಡಿರುವುದು ಖಂಡನೀಯ ಎಂದರು.

ಜಾತಿ, ಧರ್ಮ, ರಾಮ, ಹಣ ಮುಂತಾದ ಆಟಗಳೆಲ್ಲ ಈಗ ಮುಗಿದ ಅಧ್ಯಾಯ. ಬಿಜೆಪಿ ಆಡಳಿತದಲ್ಲಿಯೇ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಹೆಚ್ಚಾಗಿರುವುದನ್ನು ಅಂಕಿ ಅಂಶಗಳೇ ಹೇಳುತ್ತಿವೆ. ಅದರಲ್ಲೂ ಗುಜರಾತ್ ಮೊದಲ ಸ್ಥಾನದಲ್ಲಿದೆ. ಎಲ್ಲಾ ಸರ್ಕಾರ ಇರುವಾಗಲೂ ಅಪರಾಧ ಚಟುವಟಿಕೆಗಳು ಇದ್ದೇ ಇದೆ. ರಾಜ್ಯದಲ್ಲೂ ಕೂಡ ಬಿಜೆಪಿ ಸರ್ಕಾರವಿದ್ದಾಗ ಹೆಚ್ಚಿನ ಅಪರಾಧಗಳು ಆಗಿವೆ. ನಮ್ಮ ಸರ್ಕಾರ ಬಂದ ನಂತರ ನಾವು ಕಾನೂನನ್ನು ಬಿಗಿಯಾಗಿ ತೆಗೆದುಕೊಂಡಿದ್ದೇವೆ ಎಂದರು.

ಬರ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿಹಿಡಿದಿದೆ. ನಮಗೆ ಬರಬೇಕಾದ ಹಣವನ್ನು ಅವರು ಕೊಡಲಿಲ್ಲ. ಕರ್ನಾಟಕದ ಯಾವ ಸಂಸದರು ಬರದ ಬಗ್ಗೆ ಮಾತನಾಡಲಿಲ್ಲ. ಈಗ ಸುಪ್ರೀಂ ಕೋರ್ಟ್ ಹೇಳಿದ ಮೇಲೆ ತೆಪ್ಪಗಾಗಿದ್ದರೆ ಎಂದರು.

ರೋಡ್ ಶೋ: ಕಾಂಗ್ರೆಸ್ ಶಿವಮೊಗ್ಗ ಜಿಲ್ಲೆಯಲ್ಲಿ ತನ್ನ ಪ್ರಚಾರವನ್ನು ಚುರುಕುಗೊಳಿಸಿದೆ. ಗೀತಾ ಶಿವರಾಜ್ ಕುಮಾರ್ ಅವರಿಗೆ ಕ್ರಮ ಸಂಖ್ಯೆ 1 ಸಿಕ್ಕಿದೆ. ಈಗಾಗಲೇ ಅವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಗೀತಾ ಮತ್ತು ಶಿವರಾಜ್ ಕುಮಾರ್ ಅವರು ಈಗಾಗಲೇ ಪಂಚಾಯ್ತಿ ಮಟ್ಟಕ್ಕೆ ಹೋಗಿ 3.5 ಲಕ್ಷ ಜನ ರೊಂದಿಗೆ ಮುಖಾಮುಖಿ ಯಾಗಿದ್ದಾರೆ. ಮುಂದಿನ ದಿನಗಳಲ್ಲಿ ರೋಡ್ ಶೋ, ಸಭೆ ಹೀಗೆ ವಿವಿಧ ರೀತಿಯಲ್ಲಿ ಇನ್ನೂ 4 ಲಕ್ಷ ಜನರ ತಲುಪುತ್ತೇವೆ. ಕಾರ್ಯಕರ್ತರು ನೀಟಾಗಿ ಕೆಲಸ ಮಾಡುತ್ತಿದ್ದಾರೆ. ಬೈಂದೂರು ಭಾಗದಲ್ಲಿ ರೋಡ್ ಶೋಗಳು ಕೂಡ ನಡೆಯಲಿವೆ ಎಂದರು.

ಹಿರಿತನ ಅರಿತು ಮಾತಾಡಲಿ:

ಈಶ್ವರಪ್ಪ ಅವರು ಹಿರಿಯ ರಾಜಾಕಾರಣಿ ಒಂದು ಕಡೆ ಗೀತಾ ನನ್ನ ಸಹೋದರಿ ಎನ್ನುತ್ತಾರೆ. ಮತ್ತೊಂದು ಕಡೆ ಕೀಳಾಗಿ ಮಾತನಾಡುತ್ತಾರೆ. ಡಮ್ಮಿ ಅಭ್ಯರ್ಥಿ ಎನ್ನುತ್ತಾರೆ. ಈ ವಯಸ್ಸಿಗೆ ಈಶ್ವರಪ್ಪನವರು ಈ ರೀತಿ ಮಾತನಾಡುವುದು ಸರಿಯಲ್ಲ . ಪುತ್ರನಿಗೆ ಟಿಕೆಟ್ ಕೊಡಿಸಲಾಗದ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಲಘುವಾಗಿ ಮಾತಾಡುವುದನ್ನು ಅವರು ನಿಲ್ಲಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X