Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ,...

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ, ತಾಕತ್ತಿದ್ದರೆ ವಿಜಯೇಂದ್ರ ಸರ್ಕಾರ ಬೀಳಿಸಲಿ: ಬೇಳೂರು ಗೋಪಾಲಕೃಷ್ಣ ಸವಾಲು

ವಾರ್ತಾಭಾರತಿವಾರ್ತಾಭಾರತಿ6 Jan 2025 10:43 PM IST
share
ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ, ತಾಕತ್ತಿದ್ದರೆ ವಿಜಯೇಂದ್ರ ಸರ್ಕಾರ ಬೀಳಿಸಲಿ: ಬೇಳೂರು ಗೋಪಾಲಕೃಷ್ಣ ಸವಾಲು

ಶಿವಮೊಗ್ಗ : ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ, ಧಮ್ಮು, ತಾಕತ್ತು ಇದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರ ಬೀಳಿಸಲಿ ನೋಡೋಣ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲು ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಾಭಾವಿಕವಾಗಿ ಮನೆಗೆ ಔತಣಕೂಟಕ್ಕೆ ಕರೆದಿದ್ದಾರೆ ಅಂತ ಹೋಗಿದ್ದಾರೆ, ಡಿಸಿಎಂ ಹೊರ ದೇಶಕ್ಕೆ ಹೋಗಿರುವ ಹಿನ್ನಲೆ ಈ ರೀತಿಯ ಗೊಂದಲ ಸೃಷ್ಠಿ ಆಗಿದೆ. ವಿಜಯೇಂದ್ರ ಏನು ಭವಿಷ್ಯ ಹೇಳ್ತಾರಾ, ವಿಜಯೇಂದ್ರನ ಬುಡವೇ ಅಲ್ಲಾಡುತ್ತಿದೆ. ಅವರ ಪಕ್ಷದವರೇ ಅವರ ವಿರುದ್ದ ಹೋರಾಟ ಮಾಡುತ್ತಿದ್ದಾರೆ. ಧಮ್ಮು, ತಾಕತ್ತು ಇದ್ರೆ ವಿಜಯೇಂದ್ರ ಸರ್ಕಾರ ಬೀಳಿಸಲಿ ನೋಡೋಣ. ವಿಜಯೇಂದ್ರನಿಗೆ ಇನ್ನು ಎಳೆ ವಯಸ್ಸು ಎಳೆ ವಯಸ್ಸಿನ ಹಿನ್ನೆಲೆ ಏನ್ ಏನೋ ಮಾತಾಡುತ್ತಿದ್ದಾರೆ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.

ಇನ್ನು ಸಿ.ಟಿ.ರವಿ ದತ್ತಪೀಠದಲ್ಲಿ ದತ್ತಮಾಲೆ ಹಾಕಿಕೊಂಡು ಭಿಕ್ಷೆ ಬೇಡಿ, ಹೆಣ್ಣು ಮಕ್ಕಳಿಗೆ ಗೌರವ ಕೊಡದೇ ಮಾತನಾಡಿದ್ದಾರೆ, ಹಿಂದುತ್ವದ ಹೆಸರಿನಲ್ಲಿ ಇದೇ ಸಂಸ್ಕೃತಿ ಸಿ.ಟಿ.ರವಿ ಕಲಿತ್ತಿದ್ದ ಎಂದು ಪ್ರಶ್ನಿಸಿದರು.

ಬಿಜೆಪಿಯವರು ನಾರಿಗೆ ಗೌರವ ಕೊಡುತ್ತೇವೆ ಎನ್ನುತ್ತಾರೆ, ಇದೇನಾ ಇವರು ಕೊಡುವ ಗೌರವ ಎಂದು ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ಈಶ್ವರಪ್ಪ ಪಕ್ಷ ಸೇರಲು ಇನ್ನಿಲ್ಲದ ಕಸರತ್ತು ಮಾಡ್ತಾ ಇದ್ದಾರೆ ಹಾಗಾಗಿ ಬ್ರಿಗೇಡ್‌ ಚಾಲ್ತಿ ಮಾಡಿದ್ದಾರೆ ಎಂದರು.

ಸಾರಿಗೆ ಬಸ್ ದರ ಎಲ್ಲಾ ಕಡೆ ಹೆಚ್ಚಳ ಮಾಡ್ತಾರೆ. ಗ್ಯಾಸ್ ದರ ಏರಿಕೆ ಆಗಿಲ್ವ, ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿಲ್ವ ಎಂದು ಪ್ರಶ್ನೆ ಮಾಡಿದರು. ಕೆಎಸ್ಸಾರ್ಟಿಸಿ ಹಾಳು ಮಾಡಿದ್ದೇ ಈ ಹಿಂದಿನ ಬಿಜೆಪಿ ಸರ್ಕಾರ. ಶಕ್ತಿ ಯೋಜನೆಯಿಂದ ನಮಗೆ ಲಾಸ್ ಆಗಿಲ್ಲ, ನಾವು ಸಾಕಷ್ಟು ಹೊಸ ಬಸ್ ಖರೀದಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆ ಅಭಿವೃದ್ದಿ ಅಲ್ವ, ಅದರಿಂದ ಜನರಿಗೆ ಅನುಕೂಲ ಆಗಿದೆ ಎಂದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತನಾಡಿದ ಅವರು, ನಾನೂ ಆಕಾಂಕ್ಷಿ, ನಾನೇನು ರಾಜಕೀಯ ಸನ್ಯಾಸಿ ಅಲ್ಲ. ಆ ಸಂದರ್ಭ ಬಂದಾಗ ಕೇಳುತ್ತೇನೆ. ಕೊಡುವುದು ಬಿಡುವುದು ಹೈ ಕಮಾಂಡ್ ಗೆ ಬಿಟ್ಟಿದ್ದು. ಈಗ ಯಾವುದೇ ಸಂಪುಟ ಬದಲಾವಣೆ ಚೆರ್ಚೆ ಆಗಿಲ್ಲ ಎಂದರು.

ಮಲೆನಾಡಿನ ಹಿರಿಯ ಸಾಹಿತಿ ಡಾ. ನಾ.ಡಿಸೋಜ ನಿಧನಕ್ಕೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ ಸೂಚಿಸಿದ್ದಾರೆ. ಹೆಮ್ಮೆಯ ಸಾಹಿತಿಗಳು ನಿಧನದ ವಿಷಯ ಕೇಳಿ ಬಹಳ ಬೇಸರ ಆಯಿತು. ಅತ್ಯಂತ ಯಶಸ್ವಿಯಾಗಿ ಸಾಹಿತಿ ಕ್ಷೇತ್ರಕ್ಕೆ ಕೊಡುಗೆ ಕೊಟ್ಟವರು ನಾ.ಡಿಸೋಜ ಅವರು, ಡಿಸೋಜ ಅವರು 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು, ರಾಜ್ಯದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಯಶಸ್ವಿಯಾಗಿದ್ದರು. ಅವರ ನಿಧನ ಬಹಳ ನೋವು ತಂದಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X