Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. Sagara | ಕಸ್ತೂರಿ ರಂಗನ್ ವರದಿ ಕರಡು...

Sagara | ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ವಿರೋಧ; ರೈತ ಸಂಘದಿಂದ ಸಾಗರದಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Aug 2026 12:32 AM IST
share
Sagara | ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ವಿರೋಧ; ರೈತ ಸಂಘದಿಂದ ಸಾಗರದಲ್ಲಿ ಬೃಹತ್ ಪ್ರತಿಭಟನೆ

ಸಾಗರ : ಕಸ್ತೂರಿ ರಂಗನ್ ವರದಿ 7ನೇ ಕರಡು ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಮಹಾಗಣಪತಿ ದೇವಸ್ಥಾನದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂತಿಮವಾಗಿ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ, ಕಸ್ತೂರಿ ರಂಗನ್ ವರದಿ ಅನುಷ್ಠಾನ ಹೆಸರಿನಲ್ಲಿ ಮಲೆನಾಡು ರೈತರ ಬದುಕಿಗೆ ಕೊಳ್ಳಿ ಇಡುವ ಸಂಸ್ಕೃತಿಯನ್ನು ಯಾವತ್ತೂ ಸಹಿಸುವುದಿಲ್ಲ. ರಾಜ್ಯದ 20,668 ಎಕರೆ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುತ್ತಿದ್ದು, 1,449 ಹಳ್ಳಿಗಳು ಸೇರುತ್ತಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ 449 ಹಳ್ಳಿಗಳೂ ಸೇರುತ್ತಿದೆ. ಮಲೆನಾಡು ಭಾಗದ ರೈತರು ಇದನ್ನು ಗಂಭೀರವಾಗಿ ಗಮನಿಸಬೇಕೆಂದು ಸಲಹೆ ನೀಡಿದರು.

ಕೇರಳಂ ರಾಜ್ಯದಲ್ಲಿ ಸರಕಾರ, ಪಕ್ಷಗಳು, ಸರಕಾರಿ ನೌಕರರು ಒಟ್ಟಾಗಿ ವರದಿ ವಿರುದ್ಧ ಧ್ವನಿ ಎತ್ತಿದ್ದರಿಂದ ಪರಿಷ್ಕೃತ ವರದಿ ಜಾರಿಗೊಳಿಸಲಾಗಿತ್ತು. ಅಲ್ಲಿ ದೈಹಿಕವಾಗಿ ಸಮೀಕ್ಷೆ ನಡೆಸಿ ಸಾಕಷ್ಟು ಪ್ರದೇಶವನ್ನು ಕೈಬಿಡಲಾಗಿತ್ತು. ಕರ್ನಾಟಕದಲ್ಲಿಯೂ ಎಲ್ಲರೂ ಒಟ್ಟಾಗಿ ವರದಿ ವಿರುದ್ಧ ಧ್ವನಿ ಎತ್ತಬೇಕೆಂದು ಹಾಲಪ್ಪ ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಕಸ್ತೂರಿ ರಂಗನ್ ವರದಿ ಅನುಷ್ಠಾನ ಜಿಲ್ಲೆಗೆ ಶಾಪವಾಗಲಿದೆ. ಕಸ್ತೂರಿ ರಂಗನ್ ವರದಿ ಯಥಾವತ್ತು ಜಾರಿಯಾದರೆ ಮಲೆನಾಡು ಜನರಿಗೆ ಮರಣ ಶಾಸನವಾಗಲಿದೆ. ಯೋಜನೆ ವಿರೋಧಿಸಿ ನಿರಂತರ ಹೋರಾಟ ಇದ್ದು, ರೈತ ಸಂಘ ಎಲ್ಲ ಹೋರಾಟಕ್ಕೂ ಕೈಜೋಡಿಸಲಿದೆ. ಪಕ್ಷಬೇಧ ಮರೆತು ಹೋರಾಟ ಮಾಡಿದರೆ ಮಾತ್ರ ಕಸ್ತೂರಿ ರಂಗನ್ ವರದಿಯಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.

ಕಸ್ತೂರಿ ರಂಗನ್ ವರದಿ ಕುರಿತು ಪುನರ್ ಪರಿಶೀಲನೆ ಮಾಡಬೇಕು. ಜನವಸತಿ ಪ್ರದೇಶವನ್ನು ಹೊರಗಿಟ್ಟು ದೈಹಿಕವಾಗಿ ಸಮೀಕ್ಷೆ ನಡೆಸಿ ವರದಿ ತಯಾರಿಸಬೇಕು. ಕೇಂದ್ರ ಸರಕಾರಕ್ಕೆ ವರದಿ ಜಾರಿಯಾದರೆ ರಾಜ್ಯದಲ್ಲಿ ಆಗುವ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಮುಖ್ಯಮಂತ್ರಿಯವರು ಮನವಿ ಮಾಡಿಕೊಡಬೇಕೆಂದು ದಿನೇಶ್ ಶಿರವಾಳ ಒತ್ತಾಯಿಸಿದರು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಭಟನಾ ರ್ಯಾಲಿಗೆ ಚಾಲನೆ ನೀಡಿದರು. ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಹಕ್ರೆ, ಟಿ.ಡಿ.ಮೇಘರಾಜ್, ಚೇತನರಾಜ ಕಣ್ಣೂರು, ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ ಮನೆಘಟ್ಟ, ಶಿವು ಮೈಲಾರಿಕೊಪ್ಪ, ಪ್ರಸನ್ನ ಕೆರೆಕೈ, ಸೋಮಶೇಖರ್, ಸಂತೋಷ್ ಚಿಕ್ಕನೆಲ್ಲೂರು, ಸುನೀಲ್, ಚಂದ್ರು ಪೂಜಾರಿ ಹಾಗೂ ಇತರರು ಭಾಗವಹಿಸಿದ್ದರು.

"ಕಸ್ತೂರಿ ರಂಗನ್ ವರದಿ ಕುರಿತು ಮುಖ್ಯಮಂತ್ರಿಯವರು ವಿಶೇಷ ಅಧಿವೇಶನ ಕರೆಯುತ್ತೇನೆ ಎಂದಿರುವುದನ್ನು ನಾನು ಸ್ವಾಗತಿಸುತ್ತೇನೆ. ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸದರೆ ಮತ್ತೊಂದು ರೂಪದಲ್ಲಿ ನಮ್ಮನ್ನು ಸುತ್ತುವರಿಯುತ್ತದೆ. ಜನ ವಸತಿ, ಕೃಷಿ ಚಟುವಟಿಕೆ ಸೇರಿ ಉಪಯೋಗಕ್ಕೆ ಬರುವ ಭೂಮಿಯನ್ನು ಹೊರತುಪಡಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಿ, ಮಲೆನಾಡು ರೈತರ ಆತಂಕ ದೂರ ಮಾಡಬೇಕು"

ಎಚ್.ಹಾಲಪ್ಪ, ಮಾಜಿ ಸಚಿವ

ಬ್ಯಾರಿಕೇಡ್ ಕಿತ್ತೆಸೆದ ರೈತರು

ಪ್ರತಿಭಟನಾ ಮೆರವಣಿಗೆ ಉಪ ವಿಭಾಗಾಧಿಕಾರಿ ಕಚೇರಿ ಬಾಗಿಲಿಗೆ ಬರದಂತೆ ಪೊಲೀಸ್ ಇಲಾಖೆ ಆವರಣದಲ್ಲಿ ಬ್ಯಾರಿಕೇಡ್ ಹಾಕಿತ್ತು. ಇದರಿಂದ ಅಕ್ರೋಶಗೊಂಡ ರೈತರು ಬ್ಯಾರಿಕೇಡ್ ಕಿತ್ತೆಸೆದು ಆಕ್ರೋಶ ವ್ಯಕ್ತಪಡಿಸಿದರು. ರೈತರನ್ನು ಬ್ಯಾರಿಕೇಡ್ ಹಾಕಿ ಅವಮಾನಿಸಲಾಗುತ್ತಿದೆ ಎಂದ ರೈತರು, ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

Tags

sagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X