Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ | ಕಳ್ಳು–ಬಳ್ಳಿಗಳ ಅನುಬಂಧದ...

ಶಿವಮೊಗ್ಗ | ಕಳ್ಳು–ಬಳ್ಳಿಗಳ ಅನುಬಂಧದ ವೇದಿಕೆಯಾದ ʼದೀವರ ಸಾಂಸ್ಕೃತಿಕ ವೈಭವʼ

ವಾರ್ತಾಭಾರತಿವಾರ್ತಾಭಾರತಿ15 Dec 2024 11:45 PM IST
share
Photo of Program

ಶಿವಮೊಗ್ಗ : ಹಸೆ ಚಿತ್ತಾರ, ಬೂಮಣ್ಣಿ ಬುಟ್ಟಿ, ಡೊಳ್ಳು ಕುಣಿತ, ಕೋಲಾಟ, ಅಂಟಿಕೆ-ಪಿಂಟಿಕೆ, ದೀವರ ಕಲೆ ಆಚಾರ ವಿಚಾರ, ಸಂಪ್ರದಾಯಗಳು ಸೇರಿದಂತೆ ಕಳ್ಳು–ಬಳ್ಳಿಗಳ ಅನುಬಂಧದ ವೇದಿಕೆಯಾಗಿ ದೀವರ ಸಾಂಸ್ಕೃತಿಕ ವೈಭವ ರೂಪುಗೊಂಡಿತ್ತು.

ಧೀರ ದೀವರ ಬಳಗ, ಹಳೆಪೈಕ ದೀವರ ಸಂಸ್ಕೃತಿ ಸಂವಾದ ಬಳಗ ಸೇರಿ ನಡೆಸಿದ ಈ ಹಬ್ಬದಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಬಂದಿದ್ದ ಈಡಿಗ ಸಮುದಾಯದ ಪ್ರತಿನಿಧಿಗಳು ದಿನವಿಡೀ ನಕ್ಕು, ನಲಿದು ಸಂಭ್ರಮಿಸಿದರು.

ದೀವರ ಸಾಂಸ್ಕೃತಿಕ ವೈಭವದ ಕುರುಹುಗಳಾದ ಡೊಳ್ಳು, ಕೋಲಾಟ, ಅಂಟಿಕೆ–ಪಿಂಟಿಕೆ, ಸಂಪ್ರದಾಯದ ಹಾಡುಗಳು ಸಮಾರಂಭದಲ್ಲಿ ಮೇಳೈಸಿದವು. ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಚಾಲನೆ ನೀಡಿದರು.

ನಂತರ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಕುಮಾರ್ ಬಂಗಾರಪ್ಪ,ನಮ್ಮ ಕಲೆಗೆ ಪ್ರಕೃತಿಯೇ ಸ್ಪೂರ್ತಿ. ಅದಕ್ಕಿಂತ ದೊಡ್ಡದು ಯಾವುದು ಇಲ್ಲ. ಪ್ರಕೃತಿ ದತ್ತ ಸಂಪತ್ತಿನ ಒಳಗೆ ಜಾನಪದ ಕಲೆಗಳು ಮತ್ತು ನಮ್ಮ ಮುಂದಿನ ಪೀಳಿಗೆ ನೋಡುವ ಶಕ್ತಿ, ಯುಕ್ತಿ, ಮಾರ್ಗದರ್ಶನ ಎಲ್ಲವೂ ಪ್ರಕೃತಿಯಲ್ಲಿದೆ ಎಂದರು.

ಸಮಾರೋಪದ ಅಧ್ಯಕ್ಷತೆ ವಹಿಸಿದ್ದ ಧೀರರ ಸಾಂಸ್ಕೃತಿಕ ವೈಭವದ ಸಂಚಾಲಕ ನಾಗರಾಜ ನೇರಿಗೆ ಪ್ರಾಸ್ತವಿಕವಾಗಿ ಮಾತನಾಡಿದರು. ರಾಜಪ್ಪ ಮಾಸ್ತರ್, ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್, ಚಲನಚಿತ್ರ ನಿರ್ದೇಶಕ ರಾಜಗುರು, ಧೀರ ಧೀವರ ಬಳಗದ ಸಂಚಾಲಕ ಸುರೇಶ್ ಬಾಳೆಗುಂಡಿ, ಗಣಪತಿಯಪ್ಪ ಮಡೆನೂರು, ಕಣ್ಣೂರು ಟಾಕಪ್ಪ, ಲಕ್ಷ್ಮೀ ಗಡೆಮನೆ, ಮೋಹನ್ ಚಂದ್ರಗುತ್ತಿ, ತಬಲಿ ಬಂಗಾರಪ್ಪ, ಶ್ರೀಧರ್ ಹುಲ್ತಿಕೊಪ್ಪ, ಗೀತಾಂಜಲಿ ದತ್ತಾತ್ರೇಯ, ಐಎಎಸ್ ಅಧಿಕಾರಿ ಜಿ.ಜಗದೀಶ್, ಪುರುಷೋತ್ತಮ್, ಲಕ್ಷ್ಮಣ್ ಕೊಡಸೆ, ಜಿಪಂ ಉಪಕಾರ್ಯದರ್ಶಿ ಕೆ.ಆರ್.ಸುಜಾತಾ ಮತ್ತಿತರರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರಧಾನ :

ಖ್ಯಾತ ಸಮಾಜವಾದಿ ಹೋರಾಟಗಾರ ಈಡೂರು ಪರಶುರಾಮಪ್ಪರ ಪತ್ನಿ ರಾಧಮ್ಮ ಈಡೂರು ಪರಶುರಾಮಪ್ಪ, ಸಮಾಜವಾದಿ ಹೋರಾಟಗಾರ ಬಿ.ಎಸ್.ಪುರುಷೋತ್ತಮ, ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಲಕ್ಷ್ಮಣ್ ಕೊಡಸೆ, ಸಾಮಾಜಿಕ ಹೋರಾಟಗಾರ ರಾಜಪ್ಪ ಮಾಸ್ತರ್ ಮತ್ತು ಮುಡುಬಾದ ನಾಟಿ ವೈದ್ಯ ಈಶ್ವರ ನಾಯ್ಕ್ ಅವರಿಗೆ ಈ ಬಾರಿಯ ಧೀರ ದೀವರು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಮ್ಮ ಸಮಾಜದ ನನ್ನ ತಮ್ಮನೇ ಜಿಲ್ಲೆಗೆ ಸಚಿವರಾಗಿದ್ದಾರೆ. ಇದು ಸಂತೋಷದ ವಿಷಯ. ಅವರಿಂದ ನಮ್ಮ ಸಮಾಜಕ್ಕೆ, ಜಿಲ್ಲೆಗೆ ಸೇವೆ ಆಗಬೇಕು. ಅವರ ಅಧಿಕಾರವಧಿಯಲ್ಲಿ ದೀವರ ಸಮಾಜಕ್ಕೆ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಅವರ ಕೊಡುಗೆ ಸಿಗಲಿ. ಮುಂದಿನ ದಿನಗಳಲ್ಲಿ ಅರ್ಧಕ್ಕೆ ನಿಂತಿರುವ ಸಮಾಜದ ಸಮುದಾಯಗಳ ಭವನಗಳ ಅಭಿವೃದ್ಧಿಯನ್ನು ಸರ್ಕಾರ ಮಾಡಲಿ. ವಿದ್ಯಾರ್ಥಿ ನಿಲಯ, ನಾರಾಯಣಗುರು ವಸತಿ ಶಾಲೆಗಳನ್ನು ಮುಂದುವರೆಸಲಿ. ಮೀಸಲಿನ ಹಕ್ಕುಗಳು ಸಿಗುವಂತಾಗಲಿ.

-ಕುಮಾರ್‌ ಬಂಗಾರಪ್ಪ, ಮಾಜಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X