Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ: ಯುವತಿಯ ಮೊಬೈಲ್ ಫೋನ್ ಎಗರಿಸಿ...

ಶಿವಮೊಗ್ಗ: ಯುವತಿಯ ಮೊಬೈಲ್ ಫೋನ್ ಎಗರಿಸಿ ಮರವೇರಿದ ಮಂಗ!

ಮೊಬೈಲ್ ಮರಳಿ ಪಡೆಯಲು ನಡೆಯಿತು ಒಂದು ಗಂಟೆಯ ಹರಸಾಹಸ: ಬಾಳೆಹಣ್ಣಿನ ಆಸೆಗೆ ಸಿಕ್ತು ಮೊಬೈಲ್!

ವಾರ್ತಾಭಾರತಿವಾರ್ತಾಭಾರತಿ11 Jun 2025 3:57 PM IST
share
ಶಿವಮೊಗ್ಗ: ಯುವತಿಯ ಮೊಬೈಲ್ ಫೋನ್ ಎಗರಿಸಿ ಮರವೇರಿದ ಮಂಗ!

ಶಿವಮೊಗ್ಗ, ಜೂ.11: ಯುವತಿಯೊಬ್ಬಳ ಮೊಬೈಲ್ ಫೋನ್ ಎಗರಿಸಿದ ಮಂಗವೊಂದು ಮರವೇರಿ ಕುಳಿತ ಘಟನೆ ಶಿವಮೊಗ್ಗದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿರುವ ಯುವತಿ ತನ್ನ ಮೊಬೈಲ್ ಅನ್ನು ಕಿಟಕಿಯ ಬಳಿ ಇಟ್ಟು ಕೆಲಸ ಮಾಡುತ್ತಿದ್ದರು. ಆ ವೇಳೆ ಮಂಗವೊಂದು ಕಿಟಕಿಯ ಪಕ್ಕದಲ್ಲಿದ್ದ ಮೊಬೈಲನ್ನು ತೆಗೆದುಕೊಂಡು ಆಸ್ಪತ್ರೆಯ ಪಕ್ಕದಲ್ಲಿದ್ದ ದೊಡ್ಡ ಮರವನ್ನೇರಿ ಕುಳಿತಿದೆ.

ಮಂಗ ಆಗಾಗ ಮೊಬೈಲನ್ನು ಎದೆಗೆ ಅವಚಿಕೊಳ್ಳುತ್ತಿತ್ತು. ಕೆಲವೊಮ್ಮೆ ಮೊಬೈಲ್ ಪರದೆ ಗಮನಿಸುತಿತ್ತು. ಇನ್ನು ಕೆಲವೊಮ್ಮೆ ಮೊಬೈಲ್ ಪರದೆ ಮೇಲೆ ಬೆರಳು ಆಡಿಸುತ್ತಾ, ಮೊಬೈಲ್ ಕಿವಿಗೆ ಹಿಡಿದು ಕುಳಿತಿತ್ತು.

ಇದನ್ನು ಗಮನಿಸಿದ ಜನರು ಮಂಗನಿಗೆ ಬಾಳೆಹಣ್ಣು ನೀಡಿ ಮೊಬೈಲ್ ಪಡೆಯುವ ಪ್ರಯತ್ನವನ್ನು ಮಾಡಿದರು. ಆದರೆ ಮಂಗ ಮೊಬೈಲ್ನ್ನು ಗಟ್ಟಿಯಾಗಿಯೇ ಹಿಡಿದು ಅಲ್ಲೇ ಕುಳಿತಿತ್ತು. ಹೀಗೆ ಸುಮಾರು ಒಂದು ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ ಗೆ ಕರೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ ಹಿಂಪಡೆಯುವ ಸಾಕಷ್ಟು ಪ್ರಯತ್ನಗಳು ನಡೆದವು. ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಚೇಷ್ಟೆ ಮಾಡುತ್ತಿತ್ತು. ಅಷ್ಟರಲ್ಲಿ ಇದನ್ನು ನೋಡಲು ರಸ್ತೆಯಲ್ಲಿ ಹಲವಾರು ಜನ ಕೂಡಾ ಸೇರಿದ್ದರು. ಇದರಿಂದ ಕೆಲಕಾಲ ರಸ್ತೆಯಲ್ಲಿ ಸಂಚಾರ ದಟ್ಟಣೆಯೂ ಸಹ ಆಯಿತು. ಜನರ ಗುಂಪನ್ನು ನೋಡಿ ಭಯಭೀತಗೊಂಡ ಮಂಗ ಮರದಿಂದ ಕೆಳಗೆ ಬರಲೇ ಇಲ್ಲ. ಕೊನೆಗೆ ಮಂಗ ಬಾಳೆಹಣ್ಣನ್ನು ನೊಡಿ ಆಸ್ಪತ್ರೆಯ ಸ್ಲ್ಯಾಬ್ ಮೇಲೆ ಬಂದಿತು. ಆಗ ಯುವಕರು ಪಟಾಕಿ ಸಿಡಿಸಿದರು. ಇದರಿಂದ ಬೆದರಿದ ಮಂಗ ಮೊಬೈಲ್ ಅನ್ನು ಅಲ್ಲೇ ಬಿಟ್ಟು ಬಾಳೆಹಣ್ಣು ತೆಗೆದುಕೊಂಡು ಓಡಿ ಹೋಯಿತು.

Tags

shimogaMobileMonkey
share
ವಾರ್ತಾಭಾರತಿ
ವಾರ್ತಾಭಾರತಿ
Next Story
X