ಶಿವಮೊಗ್ಗ: ತೋಟಕ್ಕೆ ಉರುಳಿದ ಆಟೋ; ಐದು ಮಂದಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಪಕ್ಕದ ತೋಟಕ್ಕೆ ಉರುಳಿದ್ದು, ಐವರು ಗಾಯಗೊಂಡಿರುವ ಘಟನೆ ತಾಲೂಕಿನ ನಿದಿಗೆ ಕೆರೆ ಬಳಿ ಸೋಮವಾರ ಸಂಭವಿಸಿದೆ.
ಶಿವಮೊಗ್ಗದಿಂದ ಭದ್ರಾವತಿಗೆ ಮದುವೆ ಮನೆಗೆ ಕುಟುಂಬಸ್ಥರು ಆಟದಲ್ಲಿ ತೆರಳುತ್ತಿದ್ದರು. ಈ ವೇಳೆ ನಿದಿಗೆ ಕೆರೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ಕೆರೆಯ ವಿರುದ್ಧ ದಿಕ್ಕಿನಲ್ಲಿರುವ ಅಡಿಕೆ ತೋಟಕ್ಕೆ ಉರುಳಿದೆ.
ಸದ್ಯ ಆಟೋ ಚಾಲಕ ಪರಾರಿಯಾಗಿದ್ದಾನೆ.
Next Story