ಶಿವಮೊಗ್ಗ : ಮರಕ್ಕೆ ಕಾರು ಢಿಕ್ಕಿ; ಚಾಲಕ ಮೃತ್ಯು

ಶಿವಮೊಗ್ಗ: ಕಾರು ಮರಕ್ಕೆ ಢಿಕ್ಕಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಸಮೀಪ ಸಂಭವಿಸಿದೆ.
ಶ್ರೀಧರ್ (55) ಮೃತ ಚಾಲಕ. ಇವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ರಸ್ತೆ ಬದಿಗೆ ಇಳಿದಿದೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶ್ರೀಧರ್ ಅವರನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ಶ್ರೀಧರ್ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Next Story