Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಶಿವಮೊಗ್ಗ: ‘ನಮ್ಮ ನಡಿಗೆ ಶಾಂತಿಯ ಕಡೆಗೆ...

ಶಿವಮೊಗ್ಗ: ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಶಾಂತಿಯ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ13 Sept 2024 12:03 PM IST
share
ಶಿವಮೊಗ್ಗ:  ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಶಾಂತಿಯ ಮೆರವಣಿಗೆ

ಶಿವಮೊಗ್ಗ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ ಸಮಿತಿ’ ವತಿಯಿಂದ ಗುರುವಾರ ‘ಸೌಹಾರ್ದವೇ ಹಬ್ಬ’ ಶೀರ್ಷಿಕೆ ಅಡಿಯಲ್ಲಿ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈನ್ಸ್ ಮೈದಾನದವರೆಗೆ ಶಾಂತಿಯ ಮೆರವಣಿಗೆ ನಡೆಯಿತು.

ಶಾಂತಿ ನಡಿಗೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ ಸಿಮ್ಸ್‌ ಆವರಣದಲ್ಲಿ ಚಾಲನೆ ನೀಡಿದರು. ಅಶೋಕ ವೃತ್ತ, ಬಿ.ಎಚ್‌.ರಸ್ತೆ, ಅಮೀರ್‌ ಅಹಮ್ಮದ್‌ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘದ ಮಾರ್ಗವಾಗಿ ಸಾಗಿದ ನಡಿಗೆಯು ಸೈನ್ಸ್‌ ಮೈದಾನ ತಲುಪಿತು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಅವರು,ಜಗಳವೇ ‘ಬ್ರ್ಯಾಂಡ್‌ ಶಿವಮೊಗ್ಗ’ ಎಂಬಂತಾಗಿದೆ. ಅದನ್ನು ಬದಲಿಸುವ ಬಹುದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಎಲ್ಲರೂ ಪರಸ್ಪರ ಎದುರಾದಾಗ ನಗು ಬೀರಿ. ಹಗೆ ಬೇಡ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯವಾಗುತ್ತದೆ. ನಾಡು ಸರ್ವಜನಾಂಗದ ಶಾಂತಿಯ ತೋಟವಾಗಿ ಪರಿಣಮಿಸುತ್ತದೆ. ರಾಜಕಾರಣಿಗಳು ಹೇಳುವ ಧಾರ್ಮಿಕ ವಿಚಾರಗಳ ಬಗ್ಗೆ ಯಾರೂ ತೀರ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಇದರಿಂದ ಧಾರ್ಮಿಕ ಸಾಮರಸ್ಯಗಳು ಹಾಳಾಗುತ್ತವೆ. ಧರ್ಮದ ಬಗ್ಗೆ ಮಾತಾಡುವುದಕ್ಕೆಂದೇ ಧಾರ್ಮಿಕ ಗುರುಗಳಿದ್ದಾರೆ ಎಂದರು.

ಮೌಲಾನಾ ಶಾಹುಲ್‌ ಹಮೀದ್‌ ಮಾತನಾಡಿ,ಇಡೀ ರಾಜ್ಯದಲ್ಲಿ ಶಿವಮೊಗ್ಗ ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಬೇಕು. ಆಯಾ ಧರ್ಮದವರಿಗೆ ಧಾರ್ಮಿಕ ಆಚರಣೆಗಳನ್ನು ಯಾವುದೇ ಭಯವಿಲ್ಲದೇ ಆಚರಿಸಲು ಅವಕಾಶ ಮಾಡಿಕೊಡುವುದು ಸೌಹಾರ್ದತೆಯಾಗಿದೆ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆರಂಭವಾಗಿದೆ. ಬರುವ ದಿನಗಳಲ್ಲಿ ಹೆಚ್ಚೆಚ್ಚು ಕೈಗಾರಿಕೆಗಳು ಬರಬೇಕು. ಉದ್ಯೋಗ ಸೃಷ್ಟಿಯಾಗಬೇಕು. ಈ ಬ್ರ್ಯಾಂಡ್‌ ಶಿವಮೊಗ್ಗಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾ. ಕ್ಲಿಫರ್ಡ್‌ ರೋಶನ್‌ ಪಿಂಟೊ ಮಾತನಾಡಿ, ಕೋಮುಗಲಭೆಯಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತದೆ. ಆದ್ದರಿಂದ ಎಲ್ಲರೂ ಭಾತೃತ್ವ ಭಾವನೆಯಿಂದ ಇರಬೇಕು. ಎಲ್ಲರೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಡೆ ಮಠದ ಮಹಾಂತ ಸ್ವಾಮೀಜಿ, ಮೂಲೆಗದ್ದೆ ಮಠದ ಅಭಿನವ ಸ್ವಾಮೀಜಿ, ಸೌಹಾರ್ದ ಹಬ್ಬದ ಪ್ರಮುಖರಾದ ಎಚ್‌.ಆರ್‌.ಬಸವರಾಜಪ್ಪ, ಕೆ.ಪಿ.ಶ್ರೀಪಾಲ್‌, ಎಂ.ಗುರುಮೂರ್ತಿ, ಫಾದರ್‌ ಪಿಯುಶ್‌ ಡಿಸೋಜ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯಾರ ಹೊಟ್ಟೆಯ ಮೇಲೆ ಹೊಡೆದು ಯಾವ ಧರ್ಮ ಉಳಿಯಬೇಕಿದೆ? ಧರ್ಮ ಉಳಿಯಬೇಕಿರುವುದು ಅವುಗಳಲ್ಲಿಉತ್ತಮ ಅಂಶಗಳನ್ನು ಮೈಗೂಡಿಸಿಕೊಂಡು ಬದುಕುವುದರಲ್ಲಿ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಇನ್ನೊಬ್ಬರ ಹೊಟ್ಟೆಯ ಮೇಲೆ ಹೊಡೆಯುವುದು ದೊಡ್ಡ ಅರ್ಧಮ. ಅಂತಹದಕ್ಕೆ ಶಿವಮೊಗ್ಗ ವೇದಿಕೆ ಆಗಬಾರದು.

-ಡಾ.ಬಸವ ಮರುಳಸಿದ್ದ ಸ್ವಾಮೀಜಿ. ಬಸವಕೇಂದ್ರ

ವೈಮನಸ್ಸುಗಳನ್ನು ಬುಡಮಟ್ಟದಲ್ಲೇ ಚಿವುಟಿ ಹಾಕಬೇಕು. ವಿಶಿಷ್ಟತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮದಾಗಿದ್ದು, ಎಲ್ಲರೂ ಸಹಬಾಳ್ವೆಯಿಂದ ಬಾಳೋಣ.

- ಶ್ರೀ ಸಾಯಿನಾಥ ಸ್ವಾಮೀಜಿ,ಆದಿಚುಂಚನಗಿರಿ ಶಾಖಾ ಮಠ

ಸೌಹಾರ್ದತೆಯಿಂದ ಶಿವಮೊಗ್ಗದ ಹೆಸರು ಪ್ರಖ್ಯಾತಿಗೆ ಬರಬೇಕೇ ವಿನಾ ಕೋಮುಗಲಭೆಗಳಿಂದ ಅಲ್ಲ.

ಮೌಲಾನ ಅಕೀಲ್‌ ಅಹ್ಮದ್,ಜಾಮೀಯಾ ಮಸೀದಿ




Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X