Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಎಮ್ಮೇಹಟ್ಟಿ| ಅಪಘಾತದಲ್ಲಿ ಮೃತಪಟ್ಟವರ...

ಎಮ್ಮೇಹಟ್ಟಿ| ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಶಿವರಾಜ್ ಕುಮಾರ್ ದಂಪತಿ

ವಾರ್ತಾಭಾರತಿವಾರ್ತಾಭಾರತಿ9 July 2024 12:06 AM IST
share
ಎಮ್ಮೇಹಟ್ಟಿ| ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಶಿವರಾಜ್ ಕುಮಾರ್ ದಂಪತಿ

ಶಿವಮೊಗ್ಗ: ಹಾವೇರಿ ಬಳಿ ನಡೆದ ಬೀಕರ ಅಪಘಾತದಲ್ಲಿ ಮೃತಪಟ್ಟ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಕುಟುಂಬಸ್ಥರ ಮನೆಗಳಿಗೆ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸೋಮವಾರ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಅವರು,ಮೃತರ ಕುಟುಂಬಗಳಿಗೆ ನಗದು ಹಣ ವಿತರಿಸಿದರು.

ಈ ಸಂದರ್ಭದಲ್ಲಿ ಸಾಂತ್ವಾನ ಸಭೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ಅಲ್ಲದೆ ಘಟನೆಯಲ್ಲಿ ತೀರ್ವವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌತಮ್ ಮತ್ತು ಪರಷುರಾಮ್ ರವರಿಗೆ ತಲಾ 1.5 ಲಕ್ಷ ನೀಡಿ ಮಾನವಿಯತೆ ಮೆರೆದರು.

ಅಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಜವಬ್ದಾರಿಯನ್ನು ಹೊರುವುದಾಗಿ ಶಿವಣ್ಣ ದಂಪತಿಗಳು ತಿಳಿಸಿದರು. ಅಲ್ಲದೇ ಈಗಾಗಲೇ ಚಿಕಿತ್ಸೆ ಪಡೆದು ಮನೆಗೆ ಬಂದಂತಹ ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ತಾವೇ ಬರಿಸುವುದಾಗಿ ತಿಳಿಸಿದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಈ ರೀತಿಯ ಘಟನೆ ಎಲ್ಲಿಯೂ ನಡೆಯಬಾರದು. ದೇವರು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ, ನಾವು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಹಾಯ ಮಾಡಬೇಕಾದಲ್ಲಿ ಅದಕ್ಕೂ ಸಿದ್ದರಿದ್ದೇವೆ ಎಂದು ತಿಳಿಸಿದರು.

ನಟ ಶಿವರಾಜ್ ಕುಮಾರ್ ಮಾತನಾಡಿ,ದುರ್ಘಟನೆ ನೋಡಿ ಬರೋಕೆ ಧೈರ್ಯವಾಗಲಿಲ್ಲ. ಇಲ್ಲಿಗೆ ಬರುವ ದೈರ್ಯ ಮಾಡುವುದಕ್ಕೆ ತುಂಬಾನೆ ಕಷ್ಟವಾಗಿತ್ತು. ಕೇವಲ ಒಂದು ನಿಮಿಷದಲ್ಲಿ ೧೩ ಜನ ಸಾವನಪ್ಪಿದ್ದರು. ಸಾವಿನ ದುಃಖ ತಡೆದುಕೊಳ್ಳಲು ದೇವರು ಆ ಕುಟುಂಬಸ್ಥರಿಗೆ ಶಕ್ತಿ ಕೊಡಲಿ. ಅದರಲ್ಲಿಯು ಮಾನಸರನ್ನ ಕಳೆದುಕೊಂಡಿದ್ದು ತುಂಬಾ ದೊಡ್ಟ ನಷ್ಟವಾಗಿದೆ. ಊರಿನವರ ಜೊತೆಗೆ ಕುಟುಂಬಸ್ಥರಿಗೆ ನೆರವು ನೀಡಲು ಬಂದಿದ್ದೇನೆ. ನಮ್ಮ ಕೈ ಯಲ್ಲಿ ಆದಷ್ಟು ಸಹಾಯ ಮಾಡಿದ್ದೇವೆ ಎಂದರು.

ಕುಟುಂಬಸ್ಥರಿಗೆ ಸಮಾಧಾನ ಮಾಡೋದು ಕಷ್ಟ, ಊರಿನ ಗ್ರಾಮಸ್ಥರು ಆ ಕುಟುಂಬದ ಜೊತೆ ನಿಂತಿದ್ದಾರೆ ವಿಶೇಷ ಚೇತನ ಅರ್ಪಿತಾಗೆ ದೇವರು ಶಕ್ತಿ ಕೊಡಲಿ ಎಂದರು.

ಈ ಸಂದರ್ಭದಲ್ಲಿ ಭದ್ರಾವತಿ ಶಾಸಕರಾದ ಸಂಗಮೇಶ್, ಜಿಲ್ಲಾಧ್ಯಕ್ಷರಾದ ಆರ್. ಪ್ರಸನ್ನಕುಮಾರ್,ಪ್ರಮುಖರಾದ ಕಲಗೋಡು ರತ್ನಾಕರ್,ಜಿ,ಡಿ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಉದ್ಯೋಗಕ್ಕೆ ಮನವಿ

ಈ ಸಂದರ್ಭದಲ್ಲಿ ಮೃತರಾದ ಅರುಣ್ ಪತ್ನಿ ರೇಣುಕಾ ಮಾತನಾಡಿ, ನನ್ನ ಪತಿಯೇ ನನಗೆ ಆಶ್ರಯವಾಗಿದ್ದರು. ನಾನು ೩ ತಿಂಗಳ ಬಾಣಂತಿ, ನನ್ನ ಮಗುವಿನ ಭವಿಷ್ಯಕ್ಕೆ ನನಗೆ ಉದ್ಯೋಗ ಬೇಕಾಗಿದೆ. ಹಿಂದೆ ಕೂಡ ನಾನು ನನಗೆ ಉದ್ಯೋಗ ಕೊಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೆ. ಸಚಿವ ಮಧುಬಂಗಾರಪ್ಪ ಮತ್ತು ಇದೀಗ ಗೀತಾ ಶಿವರಾಜ್ ಕುಮಾರ್ ಅವರು ಕೂಡ ಭರವಸೆ ನೀಡಿದ್ದಾರೆ. ಮುಂದಿನ ಭವಿಷ್ಯಕ್ಕೂ ಸಹಕಾರ ನೀಡುವುದಾಗಿ ಅವರ ವೈಯುಕ್ತಿಕ ದೂರವಾಣಿ ನಂಬರ್‌ನ್ನು ನೀಡಿದ್ದು, ಯಾವುದೇ ಸಂದರ್ಭ ದಲ್ಲೂ ಕೂಡ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X