Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ,...

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

ಉಕ್ಕು ಪ್ರಾಧಿಕಾರ ಅಧಿಕಾರಿಗಳ ಜತೆ ಚರ್ಚೆ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ30 Jun 2024 7:54 PM IST
share
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

ಶಿವಮೊಗ್ಗ : ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ರವಿವಾರ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿದರು.

ದಿಲ್ಲಿಯಿಂದ ಬೆಳಗ್ಗೆಯೇ ಭದ್ರಾವತಿಯ ಕಾರ್ಖಾನೆ ತಲುಪಿದ ಕೇಂದ್ರ ಸಚಿವರು, ಬಹಳ ಹೊತ್ತು ಇಡೀ ಕಾರ್ಖಾನೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು.

ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್ ಸೇರಿದಂತೆ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಕಾರ್ಖಾನೆಯ ವಿಸ್ತೃತ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸಚಿವರಿಗೆ ಯಂತ್ರಗಳ ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಕುಮಾರಸ್ವಾಮಿ ಅವರು, "ಹಿಂದೆ ಭದ್ರಾವತಿ, ಶಿವಮೊಗ್ಗ ಜಿಲ್ಲೆಗೆ ಮಾತ್ರವಲ್ಲ, ಇಡೀ ಕರ್ನಾಟಕದ ಕೀರ್ತಿ, ಗರಿಣೆಗೆ ಹೆಗ್ಗುರುತಾಗಿತ್ತು ಈ ಕಾರ್ಖಾನೆ. ಸರ್.ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪನೆ ಮಾಡಿದ ಕಾರ್ಖಾನೆ ಇದು.ಮೈಸೂರು ಮಹಾರಾಜರ ಕೊಡುಗೆ ಇದು. ಮೈಸೂರು ಮಹಾರಾಜರಾಗಿದ್ದ ಕೃಷ್ಣರಾಜ ಒಡೆಯರ್ ಅವರ ಮಾರ್ಗದರ್ಶನದಲ್ಲಿ ವಿಶ್ವೇಶ್ವರಯ್ಯ ಅವರು 1923ರಲ್ಲಿ ಸ್ಥಾಪನೆ ಮಾಡಿದ್ದರು. ಇಂತಹ ಪರಂಪರೆ ಇರುವ ಕಾರ್ಖಾನೆ, ಲಕ್ಷಾಂತರ ಜನರಿಗೆ ಅನ್ನ ಕೊಟ್ಟ ಕಾರ್ಖಾನೆ, ಶಿವಮೊಗ್ಗ ಮತ್ತು ಕರ್ನಾಟಕದ ಹೆಮ್ಮೆ ಆಗಿದ್ದ ಈ ಕಾರ್ಖಾನೆಯನ್ನು ಉಳಿಸಲು ಪ್ರಯತ್ನ ಆಗಬೇಕಿದೆ" ಎಂದು ಹೇಳಿದರು.

Delete Edit

Tags

HD KumaraswamyVisvesvaraya Iron and Steel FactoryBhadravati
share
ವಾರ್ತಾಭಾರತಿ
ವಾರ್ತಾಭಾರತಿ
Next Story
X