Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ...

ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ ಅರಿವಿಲ್ಲದ ನಳಿನ್ ಕುಮಾರ್ ಸಂಸದ ಸ್ಥಾನಕ್ಕೆ ಅಪಚಾರ: ರಾಜ್ಯ ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ16 July 2023 1:21 PM IST
share
ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ ಅರಿವಿಲ್ಲದ ನಳಿನ್ ಕುಮಾರ್ ಸಂಸದ ಸ್ಥಾನಕ್ಕೆ ಅಪಚಾರ: ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು, ಜು.16: ತಮ್ಮದೇ ಸರಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಕಟೀಲು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಟೀಕಿಸಿದೆ

ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಆಹಾರ ಸಿದ್ಧಪಡಿಸುವ ವೇಳೆ ಪಾಲಿಸಬೇಕಾದ ನಿಯಮಗಳು ಕುರಿತಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಹೊಸ ಮಾರ್ಗಸೂಚಿಯನ್ನು ಬಿಜೆಪಿ ರಾಜ್ಯಾಧ್ಷಕ್ಷರೂ ಆಗಿರುವ ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಟೀಕಿಸಿದ್ದರು. ಇದಕ್ಕೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಕಟೀಲು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ ಎಂದು ಮೂರು ವರ್ಷ ಹಿಂದಿನ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದೆ.

ನಳಿನ್ ಕುಮಾರ್ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲು ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ ಎಂದು ವ್ಯಂಗ್ಯವಾಡಿದೆ.

ನಳಿನ್ ಕುಮಾರ್ ಹೇಳಿದ್ದೇನು?

ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಪಾಲಿಸಬೇಕಾದ ನೂತನ ಶಿಷ್ಟಾಚಾರಗಳ ಪಟ್ಟಿಯನ್ನು ರಾಜ್ಯ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಅದರಲ್ಲಿ ʼಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದು ತಿಳಿಸಿದೆ. ಇದನ್ನು ವಿರೋಧಿಸಿ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲು, "ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ. ʼಬಿಸಿಯೂಟ ಕಾರ್ಯಕರ್ತೆಯರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ" ಎಂದು ಹೇಳಿದ್ದಾರೆ.


ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ.

ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ
ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೆ ಆದೇಶ ಹೊರಡಿಸಿದೆ.@nalinkateel… https://t.co/siQiQTd67q pic.twitter.com/DbehQiNR4L

— Karnataka Congress (@INCKarnataka) July 16, 2023


ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ.

ʼಬಿಸಿಯೂಟ ಕಾರ್ಯಕರ್ತೆಯರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ?

ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ.

1/2

— Nalinkumar Kateel (@nalinkateel) July 15, 2023


Tags

Nalin Kumar kateel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X