Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಸನ್ ಸ್ಟ್ರೋಕ್ ಬಗ್ಗೆ ಎಚ್ಚರಿಕೆಯಿರಲಿ

ಸನ್ ಸ್ಟ್ರೋಕ್ ಬಗ್ಗೆ ಎಚ್ಚರಿಕೆಯಿರಲಿ

ಡಾ. ಮುರಳಿ ಮೋಹನ್ಡಾ. ಮುರಳಿ ಮೋಹನ್13 May 2024 10:09 AM IST
share
ಸನ್ ಸ್ಟ್ರೋಕ್ ಬಗ್ಗೆ ಎಚ್ಚರಿಕೆಯಿರಲಿ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್ ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ.

ನಮ್ಮ ದೇಹದಲ್ಲಿ ಚಯಾಪಚಯ ಜೈವಿಕ ಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಈ ಜೈವಿಕ ಕ್ರಿಯೆಯ ಸಂದರ್ಭದಲ್ಲಿ ದೇಹದಲ್ಲಿ ಶಾಖ ಉತ್ಪಾದನೆಯಾಗುತ್ತದೆ. ಈ ಶಾಖ ಚರ್ಮದ ಮುಖಾಂತರ, ಶಾಖದ ವಿಕಿರಣದಿಂದ ಅಥವಾ ಬೆವರುವಿಕೆಯಿಂದ ದೇಹದಿಂದ ಹೊರ ಹಾಕಲ್ಪಡುತ್ತದೆ. ಆದರೂ ಕೆಲವೊಮ್ಮೆ ತೀವ್ರವಾದ ಸೂರ್ಯನ ಶಾಖ ಮತ್ತು ಬಿಸಿಲಿನ ಧಗೆಯನ್ನು ಲೆಕ್ಕಿಸದೆ ಮಾಡುವ ದೈಹಿಕ ಪರಿಶ್ರಮದ ಕೆಲಸದ ಸಂದರ್ಭದಲ್ಲಿ, ದೇಹಕ್ಕೆ ತನ್ನೊಳಗೆ ಉಂಟಾದ ಶಾಖವನ್ನು ಹೊರ ಹಾಕಲು ಸಾಧ್ಯವಾಗದೇ ಇರಬಹುದು. ಆಗ ದೇಹದ ಉಷ್ಣತೆಯು 106oಈ ಅಥವಾ 41.1 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಬಹುದು. ಇದಲ್ಲದೆ ಕೆಲವೊಮ್ಮೆ ದೇಹಕ್ಕೆ ಬೇಕಾದ ಸೂಕ್ತ ಪ್ರಮಾಣದ ನೀರಿನಾಂಶ ದೊರಕದೆ ಇದ್ದಾಗ ದೇಹ ನಿರ್ಜಲೀಕರಣಗೊಳ್ಳುತ್ತದೆ. ಈ ಕಾರಣದಿಂದ ನೀರಿನ ಕೊರತೆಯಿಂದ ವ್ಯಕ್ತಿಯ ಬೆವರುವಿಕೆ ಕಡಿಮೆಯಾಗಿ ದೇಹದೊಳಗೆ ಉತ್ಪಾದನೆಯಾದ ಶಾಖ ಪರಿಣಾಮಕಾರಿಯಾಗಿ ಹೊರ ಹಾಕಲು ಸಾಧ್ಯವಾಗದೇ ದೇಹದ ಉಷ್ಣತೆ ಹೆಚ್ಚಾಗಿ, ಸನ್ ಸ್ಟ್ರೋಕ್ಗೆ ಕಾರಣವಾಗಬಹುದು.

ಶಾಖಾಘಾತದ ಲಕ್ಷಣಗಳು ಏನು?

1. ವಿಪರೀತ ಆಯಾಸ, ಸುಸ್ತು, ವಾಂತಿ, ವಾಕರಿಕೆ, ಕಿರಿಕಿರಿ, ದೌರ್ಬಲ್ಯ, ತಲೆನೋವು, ತಲೆಸುತ್ತುವುದು, ಸ್ನಾಯು ಸೆಳೆತ ಮತ್ತು ಸ್ನಾಯುಗಳಲ್ಲಿ ನೋವು ಕಂಡು ಬರುತ್ತದೆ. ವ್ಯಕ್ತಿಯ ದೇಹದ ಪ್ರಕೃತಿ, ದೇಹದ ತೂಕ ಮತ್ತು ವ್ಯಕ್ತಿಯ ವಯಸ್ಸಿಗೆ ಅನುಗುಣವಾಗಿ ಲಕ್ಷಣಗಳು ವಿಭಿನ್ನ ವ್ಯಕ್ತಿಗಳಲ್ಲಿ ವಿಭಿನ್ನವಾಗಿ ಪ್ರಕಟಗೊಳ್ಳಬಹುದಾಗಿದೆ.

2. ಉಸಿರಾಟದ ತೀವ್ರತೆ ಮತ್ತು ಹೃದಯದ ಬಡಿತ ಹೆಚ್ಚಳವಾಗುತ್ತದೆ. ದೇಹದ ಉಷ್ಣತೆ ಏರುವುದು.

3. ನಾಡಿ ಬಡಿತ ಜೋರಾಗಬಹುದು, ರಕ್ತದೊತ್ತಡ ಕಡಿಮೆಯಾಗುವುದು, ಉಸಿರಾಟದ ತೊಂದರೆ ಕಂಡು ಬರುವುದು.

4. ಭ್ರಮೆ, ಗೊಂದಲ, ತಳಮಳ, ದಿಗ್ಭ್ರಮೆ, ವಿಚಿತ್ರವಾದ ನಡವಳಿಕೆ ಕಂಡು ಬರುವುದು.

5. ಯಾವುದೇ ಚಿಕಿತ್ಸೆ ತಕ್ಷಣವೇ ದೊರಕದೇ ಇದ್ದಲ್ಲಿ ವ್ಯಕ್ತಿ ಹಠಾತ್ತನೆ ಕೋಮಾಕ್ಕೆ ಜಾರುವ ಸಾಧ್ಯತೆ ಇರುತ್ತದೆ.

ಯಾರಲ್ಲಿ ಹೆಚ್ಚು ಕಂಡುಬರುತ್ತದೆ?

1. ಶಿಶುಗಳು ಮತ್ತು ಹೆಚ್ಚು ವಯಸ್ಸಾದವರಲ್ಲಿ ಈ ಸನ್ಸ್ಟ್ರೋಕ್ ಹೆಚ್ಚು ಕಂಡುಬರುತ್ತದೆ. ಹೃದಯ ಸಂಬಂಧಿ ಕಾಯಿಲೆ ಇರುವವರು, ಶ್ವಾಸಕೋಶದ ಕಾಯಿಲೆ ಇರುವವರು, ಮೂತ್ರ ಪಿಂಡದ ಸಮಸ್ಯೆ ಇರುವವರು ಮತ್ತು ದೇಹದ ರಕ್ಷಣಾ ವ್ಯವಸ್ಥೆ ಕುಸಿದವರಲ್ಲಿ ಶಾಖಾಘಾತ ಹೆಚ್ಚು ಕಂಡುಬರುತ್ತದೆ.

2. ಹೊರಾಂಗಣ ಆಟದಲ್ಲಿ ತೊಡಗಿಸಿಕೊಳ್ಳುವ ಕ್ರೀಡಾಪಟುಗಳಲ್ಲಿ ಹೆಚ್ಚು ಕಂಡುಬರಬಹುದು.

3. ಹೊರಾಂಗಣದಲ್ಲಿ ಸೂರ್ಯನ ಶಾಖ ತಡೆದುಕೊಂಡು ಕೆಲಸ ಮಾಡುವವರು ಮತ್ತು ಸೂರ್ಯನ ಕೆಳಗೆ ದೈಹಿಕ ಶ್ರಮವುಳ್ಳ ಕೆಲಸ ಮಾಡುವವರಲ್ಲಿ ಶಾಖಾಘಾತ ಬಹಳ ಸಾಮಾನ್ಯ.

ತಡೆಗಟ್ಟುವುದು ಹೇಗೆ?

1. ದೇಹದ ತಾಪಮಾನವನ್ನು ತಗ್ಗಿಸಲು ಬೇಸಿಗೆ ಸಮಯದಲ್ಲಿ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು.

2. ಚರ್ಮ ಹೆಚ್ಚು ಬಿಸಿಯಾಗಿದ್ದರೆ ಒದ್ದೆ ಬಟ್ಟೆಯಿಂದ ಮೈಯನ್ನು ಚೆನ್ನಾಗಿ ಒರೆಸಬೇಕು, ದೇಹವನ್ನು ತಂಪಾಗಿಸಬೇಕು.

3. ಬೇಸಿಗೆ ಕಾಲದಲ್ಲಿ ಹೆಚ್ಚು ದಪ್ಪಗಿರುವ ಮತ್ತು ಬಿಗಿಯಾಗಿರುವ ಬಟ್ಟೆ ಧರಿಸಬಾರದು. ಜಾಸ್ತಿ ತೆಳುವಾದ ಹತ್ತಿ ಬಟ್ಟೆಯನ್ನು ಧರಿಸಿ ತಂಪುಗಾಳಿ ದೇಹಕ್ಕೆ ತಲುಪುವಂತೆ ಬಟ್ಟೆ ಧರಿಸಬೇಕು. ಗಾಢ ಬಣ್ಣದ ಮತ್ತು ಕಪ್ಪು ಬಟ್ಟೆಗಳನ್ನು ಬಳಸುವುದು ಸೂಕ್ತವಲ್ಲ, ಯಾಕೆಂದರೆ ಅವುಗಳು ಶಾಖವನ್ನು ಹೀರಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ.

4. ಆಲ್ಕೋಹಾಲ್ ಮತ್ತು ಕೆಫಿನ್ಯುಕ್ತ ಪಾನೀಯಗಳನ್ನು ಬೇಸಿಗೆಯಲ್ಲಿ ಬಳಸಲೇಬೇಡಿ. ನೈಸರ್ಗಿಕ ಪೇಯಗಳನ್ನು ಹೆಚ್ಚು ಬಳಸಿ. ದೇಹವನ್ನು ತಂಪಾಗಿರಿಸಬೇಕೆಂದು ಅತಿಯಾದ ಐಸ್ಕ್ರೀಮ್ ತಿನ್ನುವುದು ಮತ್ತು ಹೆಚ್ಚು ಕೃತಕ ಸಕ್ಕರೆ ಹಾಕಿದ ಸಿದ್ಧ ಪಾನೀಯವನ್ನು ಸೇವಿಸುವುದು ಮೂರ್ಖತನ.

5. ಬೇಸಿಗೆಯಲ್ಲಿ ಸಾಕಷ್ಟು ನೀರಿನಾಂಶ ಇರುವ ಆಹಾರವನ್ನು ಸೇವಿಸಬೇಕು. ಗಂಜಿ, ಹಾಲು, ಎಳನೀರು, ಮಜ್ಜಿಗೆ ಇತ್ಯಾದಿ ಪೇಯಗಳಿಗೆ ಆದ್ಯತೆ ನೀಡಿ.

6. ಬಿಸಿಲ ಧಗೆ ಹೆಚ್ಚಾಗಿರುವ ಹೊರಗಿನ ಚಟುವಟಿಕೆಗಳನ್ನು ಕಡಿಮೆ ಮಾಡಬೇಕು. ವಿಪರೀತ ಬಿಸಿಲು ಇರುವ ಸಮಯವಾದ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಶ್ರಮದಾಯಕ ಕೆಲಸವನ್ನು ಬಿಸಿಲಿನಲ್ಲಿ ಮಾಡಬೇಡಿ.

ಪ್ರಥಮ ಚಿಕಿತ್ಸೆ

1. ಶಾಖಾಘಾತಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿರುವ ತಂಪಾಗಿರುವ ಪ್ರದೇಶಕ್ಕೆ ಕರೆದೊಯ್ದು ಬಟ್ಟೆಗಳನ್ನು ಸಡಿಲಿಸಿ ಚರ್ಮಕ್ಕೆ ತಂಪಾದ ಗಾಳಿ ಮತ್ತು ನೀರನ್ನು ಸಿಂಪಡಿಸಬೇಕು. ಬೆವರುವಿಕೆಯನ್ನು ಉತ್ತೇಜಿಸಬೇಕಾದ ಕ್ರಿಯೆಯನ್ನು ಹೆಚ್ಚುಗೊಳಿಸಬೇಕು. ತೊಡೆಸಂಧಿ ಮತ್ತು ಕೈ ಸಂಧಿಗಳಲ್ಲಿ ಐಸ್ಪ್ಯಾಕ್ ಇಡಬೇಕು.

2. ವ್ಯಕ್ತಿಗೆ ಆಹಾರ ಸೇವಿಸಲು ಸಾಧ್ಯವಾದಲ್ಲಿ, ಆತನಿಗೆ ತಂಪಾದ ನೈಸರ್ಗಿಕ ಪೇಯಗಳಾದ ನೀರು, ಎಳನೀರು, ಲಿಂಬೆ ಜ್ಯೂಸ್, ಹಣ್ಣಿನ ರಸ ನೀಡಬಹುದು. ಕೃತಕ ಪಾನೀಯಗಳಾದ ಪೆಪ್ಸಿ, ಕೋಕ್ ನೀಡಬೇಡಿ. ಆಲ್ಕೋಹಾಲ್ಯುಕ್ತ ಮತ್ತು ಕೆಫಿನ್ಯುಕ್ತ ಪಾನೀಯಗಳನ್ನು ಬಳಸಬಾರದು.

3. ದೇಹದ ಉಷ್ಣತೆಯನ್ನು ದಾಖಲು ಮಾಡಬೇಕು. ದೇಹದ ಉಷ್ಣತೆ 101oಈಗಿಂತಲೂ ಕಡಿಮೆ ಆಗುವವರೆಗೆ ದೇಹವನ್ನು ತಂಪಾಗಿಸುವ ಯತ್ನವನ್ನು ಮುಂದುವರಿಸತಕ್ಕದ್ದು, ಐಸ್ ಬ್ಲಾಂಕೆಟ್ಗಳನ್ನು ಬಳಸಬಹುದಾಗಿದೆ.

4. ವ್ಯಕ್ತಿಯ ನಾಡಿ ಬಡಿತ, ರಕ್ತದೊತ್ತಡ ಮತ್ತು ಉಷ್ಣತೆಯನ್ನು ನಿರಂತರವಾಗಿ ದಾಖಲು ಮಾಡಿ ನಿಯಂತ್ರಣಕ್ಕೆ ಬರುವಲ್ಲಿ ವರೆಗೆ ಪ್ರಥಮ ಚಿಕಿತ್ಸೆ ಮುಂದುವರಿಸಿ.

share
ಡಾ. ಮುರಳಿ ಮೋಹನ್
ಡಾ. ಮುರಳಿ ಮೋಹನ್
Next Story
X