Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಮಂಗಳೂರಿನಲ್ಲಿ ನಡೆದ ವಿಮಾನ ದುರಂತವನ್ನು...

ಮಂಗಳೂರಿನಲ್ಲಿ ನಡೆದ ವಿಮಾನ ದುರಂತವನ್ನು ನೆನಪಿಸಿದ ಅಹಮದಾಬಾದ್‌ ವಿಮಾನ ಅವಘಡ

ಮಂಗಳೂರು ವಿಮಾನ ದುರ್ಘಟನೆಯಲ್ಲಿ ಪವಾಡ ಸದೃಶವಾಗಿ ಬದುಕಿ ಬಂದಿದ್ದ ಉಮರ್ ಫಾರೂಕ್

ವಾರ್ತಾಭಾರತಿವಾರ್ತಾಭಾರತಿ12 Jun 2025 10:49 PM IST
share
ಮಂಗಳೂರಿನಲ್ಲಿ ನಡೆದ ವಿಮಾನ ದುರಂತವನ್ನು ನೆನಪಿಸಿದ ಅಹಮದಾಬಾದ್‌ ವಿಮಾನ ಅವಘಡ

ಮಂಗಳೂರು: ಗುಜರಾತ್‌ ನ ಅಹಮದಾಬಾದ್‌ ವಿಮಾನ ನಿಲ್ದಾಣದಲ್ಲಿ ಗುರುವಾರ ಟೇಕ್‌ ಆಫ್‌ ಆದ ಕೆಲವೇ ಹೊತ್ತಿನಲ್ಲಿ ಏರ್‌ ಇಂಡಿಯಾ ವಿಮಾನ ಪತನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ 242 ಪ್ರಯಾಣಿಕರು ಇದ್ದರು. ಏರ್‌ ಇಂಡಿಯಾಗೆ ಸೇರಿದ AI–171 ವಿಮಾನವು ಗುರುವಾರ ಮಧ್ಯಾಹ್ನ 1.40ರ ಸುಮಾರಿಗೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್‌ಆಫ್‌ ಆಗಿತ್ತು. ಪತನವಾಗುವ ಸಂದರ್ಭದಲ್ಲಿ ವಿಮಾನ ನೆಲಮಟ್ಟದಿಂದ 825 ಅಡಿ ಎತ್ತರದಲ್ಲಿತ್ತು ಎಂದು ವರದಿಯಾಗಿದೆ.

ಈ ಹಿಂದೆ ಮಂಗಳೂರಿನಲ್ಲೂ ಇದೇ ರೀತಿಯ ದುರ್ಘಟನೆ ನಡೆದಿತ್ತು.

2010 ಮೇ 22 ರಂದು ದುಬೈ– ಮಂಗಳೂರು ಮಾರ್ಗದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ವೇಳೆ ರನ್‌ ವೇನಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ 158 ಪ್ರಯಾಣಿಕರು ಮೃತಪಟ್ಟಿದ್ದರು, ಕೇವಲ 8 ಜನ ಬದುಕುಳಿದಿದ್ದರು.

ಬದುಕುಳಿದ 8 ಮಂದಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಉಮರ್ ಫಾರೂಕ್ ಕೂಡ ಒಬ್ಬರು. 2010 ರ ವಿಮಾನ ಅಪಘಾತದದಲ್ಲಿ ಅವರ ಮುಖ ಹಾಗೂ ಕೈ ಬೆಂಕಿಯಿಂದ ಸುಟ್ಟು ಗಾಯವಾಗಿತ್ತು. ಉಮರ್ ಫಾರೂಕ್ ಆ ಭೀಕರ ಮತ್ತು ಕರಾಳ ನೆನಪನ್ನು 'ವಾರ್ತಾಭಾರತಿ'ಯೊಂದಿಗೆ ಗುರುವಾರ ಹಂಚಿಕೊಂಡಿದ್ದಾರೆ.

"ಇವತ್ತಿನ ಘಟನೆ ನನಗೆ 2010 ರ ದುರ್ಘಟನೆಯನ್ನು ನೆನಪಿಸುತ್ತಿದೆ. ಅದನ್ನು ನೆನೆಸಿಕೊಂಡರೆ ಮಾತೇ ಬರುವುದಿಲ್ಲ. ಫ್ಲೈಟ್ ಟೇಕ್ ಆಫ್ ಆಗುವಾಗ ವಿಮಾನ ಸಿಬ್ಬಂದಿ ಹಲವಾರು ಸುರಕ್ಷತಾ ಕ್ರಮಗಳನ್ನು ಹೇಳುತ್ತಾರೆ. ಆದರೆ ಈ ರೀತಿಯ ದುರ್ಘಟನೆ ನಡೆಯುವಾಗ ಅದ್ಯಾವುದೂ ಉಪಯೋಗಕ್ಕೆ ಬರುವುದಿಲ್ಲ. ದುರ್ಘಟನೆಯು ತತ್ ಕ್ಷಣ ದಲ್ಲಿ ನಡೆದುಹೋಗುತ್ತದೆ. ಆಗ ನಮಗೆ ರಕ್ಷಣೆ ಸಿಗುವ ಸಾಧ್ಯತೆ ತುಂಬಾ ಕಡಿಮೆಯಿರುತ್ತದೆ.

AI ಯುಗದಲ್ಲೂ ಕೂಡ ಇಂತಹ ದುರ್ಘಟನೆ ನಡೆಯುವುದು ಬಹಳ ಬೇಸರದ ಸಂಗತಿ. ಏವಿಯೇಷನ್ ಸಂಸ್ಥೆಗೆ ಜವಾಬ್ದಾರಿ ಎನ್ನುವುದು ಬೇಕು, ಎಲ್ಲಿ ತಾಂತ್ರಿಕ ದೋಷ ಇದೆ ಎನ್ನುವುದನ್ನು ತಿಳಿದುಕೊಂಡಿರಬೇಕು. ನಾವು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವಾಗ ಕನಿಷ್ಠ ಆರು ಬಾರಿ ತಪಾಸಣೆ ಮಾಡುತ್ತಾರೆ. ಆದರೆ ನೂರಾರು ಜನರನ್ನ ಹೊತ್ತುಕೊಂಡು ಹೋಗುವ ವಿಮಾನವನ್ನು ಟೇಕ್ ಆಫ್ ಮಾಡುವಾಗ ಬೇಜವಾಬ್ದಾರಿ ತೋರಿಸುವುದು ಸರಿಯಲ್ಲ. ನನ್ನ ಪ್ರಕಾರ ಇದು ಸಿಬ್ಬಂದಿಯವರ ಬೇಜವಾಬ್ದಾರಿಯಿಂದ ನಡೆದ ದುರ್ಘಟನೆ. ಇದಕ್ಕೆ ಸರಿಯಾದ ತನಿಖೆ ನಡೆದು ವರದಿ ಬರಬೇಕು ಎಂದು ಉಮರ್ ಫಾರೂಕ್ ಹೇಳಿದ್ದಾರೆ.

►2010 ರ ದುರ್ಘಟನೆಯಲ್ಲಿ ನಾವು ಬಹಳ ಹೋರಾಡಿದ್ದೇವೆ, ಅದೊಂದು ಕರಾಳ ದಿನ:

ವಿಮಾನ ಲ್ಯಾಂಡ್ ಆಗುವ 15 ನಿಮಿಷಕ್ಕೂ ಮೊದಲು ನಾವೆಲ್ಲಾ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗುತ್ತೇವೆ ಎಂದು ಪೈಲಟ್ ಮಾಹಿತಿಯನ್ನು ನೀಡಿದ್ದರು. ಲ್ಯಾಂಡ್ ಆಗುವ ಸಮಯದಲ್ಲಿಯೇ ನೆಲಕ್ಕೆ ಅಪ್ಪಳಿಸಿದ ಹಾಗೆ ಅನಿಸಿತು, ಎಲ್ಲವೂ ಎರಡು ನಿಮಿಷದ ಒಳಗೆ ನಡೆಯಿತು. ದೇವರ ಕೃಪೆಯಿಂದ ಘಟನೆಯಲ್ಲಿ ನಾವು ಕೆಲವರು ಪಾರಾದೆವು. ಘಟನೆ ನಡೆಯುವ ಸಂಧರ್ಭದಲ್ಲಿ ವಿಮಾನದ ರೆಕ್ಕೆ ಮರಗಳಿಗೆ ಬಡಿದು ವಿಮಾನ ಒಡೆದು ಹೋಯಿತು, ಅದರ ಮೂಲಕ ನಾವು ಎಂಟು ಮಂದಿ ಹೊರಗೆ ಬಿದ್ದು ಬದುಕುಳಿದೆವು. ಉಳಿದವರಿಗೆ ಇದು ಸಾಧ್ಯವಾಗಲಿಲ್ಲ . ಏಕೆಂದರೆ ಬೆಂಕಿಯಿಂದಾಗಿ ವಿಮಾನದ ಒಳಗೆ ಸಂಪೂರ್ಣ ಹೊಗೆ ಆವರಿಸಿತ್ತು, ಏನೂ ಕಾಣಿಸುತ್ತಿರಲಿಲ್ಲ, ಉಸಿರುಕಟ್ಟಿ ಜೀವ ಹೋದವರ ಸಂಖ್ಯೆಯೇ ಹೆಚ್ಚು. ಸ್ಥಳೀಯರು ಬಂದು ಸಹಾಯಕ್ಕೆ ಪ್ರಯತ್ನಿಸಿದರೂ ಉಳಿದವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. 158 ಜನರು ಆ ಘಟನೆಯಲ್ಲಿ ಜೀವ ಕಳೆದುಕೊಂಡರು. ಅದೊಂದು ಕರಾಳ ದಿನವಾಗಿತ್ತು. ಆ ಘಟನೆ ಇನ್ನು ನನ್ನ ಮನಸ್ಸಿನಿಂದ ಮಾಸಿಲ್ಲ. ಅದರ ನಡುವೆಯೇ ಈ ದುರ್ಘಟನೆ ನಡೆದಿದೆ. ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುವುದು ನನ್ನ ಕೋರಿಕೆ ಎಂದು ಉಮರ್ ಫಾರೂಕ್ ಹೇಳಿದ್ದಾರೆ.

►ವಿಮಾನದಲ್ಲಿ ಪ್ರಯಾಣಿಸುವಾಗ ಭಯವಾಗುತ್ತದೆ:

ಮನಸ್ಸಿನಲ್ಲಿ ಆ ಘಟನೆ ಅಚ್ಚಳಿಯದೆ ಉಳಿದಿದೆ. ಕೆಲವು ಭಾರತೀಯ ವಿಮಾನಗಳಲ್ಲಿ ಪ್ರಯಾಣಿಸುವಾಗ ಅದರ ಸುಸ್ಥಿತಿ ಅಷ್ಟಾಗಿ ತೃಪ್ತಿದಾಯಕವಾಗಿರುವುದಿಲ್ಲ. ಹಾಗಾಗಿ ನಮ್ಮ ಪ್ರಾಣಕ್ಕೆ ಬೆಲೆ ಕೊಟ್ಟು ಒಳ್ಳೆಯ ವಿಮಾನ ನೋಡಿ ಪ್ರಯಾಣಿಸುವ ಪರಿಸ್ಥಿತಿ ನಮಗೆ ಬಂದಿದೆ. ಪ್ರಾಕೃತಿಕ ವಿಕೋಪದಿಂದ ವಿಮಾನ ಅಪಘಾತವಾಗುವುದಕ್ಕೂ, ತಾಂತ್ರಿಕ ದೋಷದಿಂದ ವಿಮಾನ ಅಪಘಾತವಾಗುವುದಕ್ಕೂ ಬಹಳ ವ್ಯತ್ಯಾಸವಿದೆ. ತಾಂತ್ರಿಕ ದೋಷದಿಂದ ವಿಮಾನ ಅಪಘಾತವಾಗುವುದು ಬೇಜವಾಬ್ದಾರಿಯಿಂದ ಎಂದು ಉಮರ್ ಫಾರೂಕ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಉಮರ್ ಫಾರೂಕ್ ಸದ್ಯ ಮಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಮಾರ್ಕೆಟಿಂಗ್ ಮುಖ್ಯಸ್ಥರಾಗಿ ಉದ್ಯೋಗ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X