Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2ನೇ ಟ್ವೆಂಟಿ-20 : ಬಾಂಗ್ಲಾದೇಶ ವಿರುದ್ಧ...

2ನೇ ಟ್ವೆಂಟಿ-20 : ಬಾಂಗ್ಲಾದೇಶ ವಿರುದ್ಧ ಭಾರತದ ಮಹಿಳಾ ಕ್ರಿಕೆಟ್ ತಂಡಕೆ್ಕ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ11 July 2023 11:25 PM IST
share
2ನೇ ಟ್ವೆಂಟಿ-20 : ಬಾಂಗ್ಲಾದೇಶ ವಿರುದ್ಧ ಭಾರತದ ಮಹಿಳಾ ಕ್ರಿಕೆಟ್ ತಂಡಕೆ್ಕ ರೋಚಕ ಜಯ

ಹೊಸದಿಲ್ಲಿ: ಅತ್ಯಂತ ರೋಚಕವಾಗಿ ಸಾಗಿದ ಮಹಿಳೆಯರ 2ನೇ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ ವಿರುದ್ಧ 8 ರನ್ ಅಂತರದಿಂದ ಜಯ ದಾಖಲಿಸಿದೆ. ಇದರೊಂದಿಗೆ 3 ಪಂದ್ಯಗಳ ಟಿ-20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಮಂಗಳವಾರ ನಡೆದ ಪಂದ್ಯದಲ್ಲಿ ಸ್ಪಿನ್ನರ್ಗಳಾದ ದೀಪ್ತಿ ಶರ್ಮಾ ಹಾಗೂ ಶೆಫಾಲಿ ವರ್ಮಾ ಡೆತ್ ಓವರ್ನಲ್ಲಿ ಬಿಗಿ ಬೌಲಿಂಗ್ ಸಂಘಟಿಸಿ ಭಾರತಕ್ಕೆ ರೋಚಕ ಜಯ ತಂದುಕೊಟ್ಟರು. ದೀಪ್ತಿ ಹಾಗೂ ಶೆಫಾಲಿ ನಿರ್ಣಾಯಕ ಅಂತಿಮ ಓವರ್ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಈ ಇಬ್ಬರ ನಿಯಂತ್ರಿತ ಬೌಲಿಂಗ್ ವ್ಯತ್ಯಾಸಕ್ಕೆ ಕಾರಣವಾಗಿದ್ದು, ತಂಡವು ಸೋಲಿನ ದವಡೆಯಿಂದ ಪಾರಾಗಲು ಸಾಧ್ಯವಾಗಿದೆ ಎಂದು ಭಾರತದ ನಾಯಕಿ ಹರ್ಮನ್ಪ್ರೀತ್ ಕೌರ್ ಹೇಳಿದ್ದಾರೆ.

ಆಫ್ ಸ್ಪಿನ್ನರ್ ಸುಲ್ತಾನಾ ಖಾತುನ್ ಅವರ ಜೀವನಶ್ರೇಷ್ಠ ಬೌಲಿಂಗ್(3-21)ದಾಳಿಗೆ ತತ್ತರಿಸಿದ ಸ್ಟಾರ್ ಆಟಗಾರ್ತಿಯರನ್ನು ಒಳಗೊಂಡಿರುವ ಭಾರತ 8 ವಿಕೆಟ್ ನಷ್ಟಕ್ಕೆ 95 ರನ್ ಗಳಿಸಲಷ್ಟೇ ಶಕ್ತವಾಯಿತು. ಮಹಿಳೆಯರ ಟಿ-೨೦ ಪಂದ್ಯಗಳಲ್ಲಿ ಬಾಂಗ್ಲಾದೇಶ ವಿರುದ್ಧ ಕನಿಷ್ಠ ಸ್ಕೋರ್ ಗಳಿಸಿತು.

ಗೆಲ್ಲಲು ಸುಲಭ ಗುರಿ ಪಡೆದಿದ್ದ ಬಾಂಗ್ಲಾದೇಶ ಭಾರೀ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿ 20 ಓವರ್ಗಳಲ್ಲಿ ಕೇವಲ 87 ರನ್ಗೆ ಆಲೌಟಾಯಿತು. ಒಂದು ಹಂತದಲ್ಲಿ 86 ರನ್ಗೆ 5 ವಿಕೆಟ್ಗಳನ್ನು ಕಳೆದುಕೊಂಡಿದ್ದ ಬಾಂಗ್ಲಾದೇಶವು 8 ಎಸೆತಗಳಲ್ಲಿ ಕೇವಲ 1 ರನ್ಗೆ ಉಳಿದ ಐದು ವಿಕೆಟ್ಗಳನ್ನು ಕಳೆದುಕೊಂಡಿತು.

ಬಾಂಗ್ಲಾದ ಬ್ಯಾಟಿಂಗ್ ವೈಫಲ್ಯದಲ್ಲಿ ಭಾರತದ ಸ್ಪಿನ್ನರ್ಗಳು ಮುಖ್ಯ ಪಾತ್ರವಹಿಸಿದರು. ಆಫ್ ಸ್ಪಿನ್ನರ್ ಮಿನ್ನು ಮಣಿ(2-9), ಎಡಗೈ ಸ್ಪಿನ್ನರ್ ಅನುಷಾ(1-20) ಆರಂಭಿಕ ಮೇಲುಗೈ ಒದಗಿಸಿದರು. ದೀಪ್ತಿ ಶರ್ಮಾ(3-12) ಹಾಗೂ ಶೆಫಾಲಿ ವರ್ಮಾ(3-15) 19ನೇ ಹಾಗೂ 20ನೇ ಓವರ್ನಲ್ಲಿ ತನ್ನ ಕೌಶಲ್ಯವನ್ನು ಪ್ರದರ್ಶಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು. ಶೆಫಾಲಿ ಕೊನೆಯ ಓವರ್ನಲ್ಲಿ 1 ರನ್ ನೀಡಿ 3 ವಿಕೆಟ್ಗಳನ್ನು ಉರುಳಿಸಿದರು. ಬಾಂಗ್ಲಾದೇಶದ ರನ್ ಚೇಸಿಂಗ್ ವೇಳೆ ನಾಯಕಿ ನಿಗಾರ್ ಸುಲ್ತಾನ(38 ರನ್, 55 ಎಸೆತ)ಏಕಾಂಗಿ ಹೋರಾಟ ನೀಡಿದರು.ಸುಲ್ತಾನ ದೀಪ್ತಿ ಶರ್ಮಾಗೆ ವಿಕೆಟ್ ಒಪ್ಪಿಸಿದ ನಂತರ ಬಾಂಗ್ಲಾ ಕುಸಿತದ ಹಾದಿ ಹಿಡಿಯಿತು. ಗುರುವಾರ ಮೂರನೇ ಹಾಗೂ ಅಂತಿಮ ಪಂದ್ಯ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X