Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೂರ್ಯವಂಶಿಗೆ ಸಿಗದ 'ಸೂಪರ್' ಅವಕಾಶ:...

ಸೂರ್ಯವಂಶಿಗೆ ಸಿಗದ 'ಸೂಪರ್' ಅವಕಾಶ: ಅಭಿಮಾನಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Nov 2025 8:38 AM IST
share
ಸೂರ್ಯವಂಶಿಗೆ ಸಿಗದ ಸೂಪರ್ ಅವಕಾಶ: ಅಭಿಮಾನಿಗಳ ಆಕ್ರೋಶ

ದೋಹಾ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್-2025 ಟೂರ್ನಿಯ ಸೆಮಿಫೈನಲ್ ಪಂದ್ಯದ ಫಲಿತಾಂಶ ನಿರ್ಧರಿಸಲು ಆಡಿದ 'ಸೂಪರ್ ಓವರ್'ನಲ್ಲಿ ಭಾರತದ ಭರವಸೆಯ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿಯವರಿಗೆ ಬ್ಯಾಟಿಂಗ್ ಅವಕಾಶ ಸಿಗದ ಬಗ್ಗೆ ಜಾಲತಾಣಗಳಲ್ಲಿ ಅಭಿಮಾನಿಗಳು ತೀವ್ರ ನಿರಾಶೆ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೂಪರ್ ಓವರ್ ನಲ್ಲಿ ಸೋಲು ಅನುಭವಿಸುವ ಮೂಲಕ ಭಾರತ ಎ ತಂಡ ತನ್ನ ಅಭಿಯಾನ ಅಂತ್ಯಗೊಳಿಸಿತ್ತು. ಬಾಂಗ್ಲಾದೇಶ ಎ ತಂಡ ಸೂಪರ್ ಓವರ್ ನಲ್ಲಿ ಗೆಲ್ಲಲು ಒಂದು ರನ್ ನ ಗುರಿ ಪಡೆದಿತ್ತು.

ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ ಎ ತಂಡ ಎದುರಾಳಿಗಳಿಗೆ 195 ರನ್ ಗುರಿ ನೀಡಿದರೆ, ಭಾರತ ಎ ತಂಡ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿ ಟೈ ಮಾಡಿಕೊಂಡಿತು. ಸೂಪರ್ ಓವರ್ ನಲ್ಲಿ ಅಚ್ಚರಿ ಎಂಬಂತೆ ನಾಯಕ ಜಿತೇಶ್ ಶರ್ಮಾ ಅವರು ರಮಣದೀಪ್ ಸಿಂಗ್ ಅವರೊಂದಿಗೆ ಕ್ರೀಸ್ಗೆ ಬಂದರು. ದಿಟ್ಟ ಹೊಡೆತಗಳಿಗೆ ಹೆಸರಾದ ಸೂರ್ಯವಂಶಿಯವರನ್ನು ಹೊರಗಿಟ್ಟದ್ದು ಅಚ್ಚರಿ ಮೂಡಿಸಿತ್ತು.

ಜಿತೇಶ್ ಮೊದಲ ಎಸೆತದಲ್ಲೇ ಔಟ್ ಆದಾಗಲೂ ಸೂರ್ಯವಂಶಿ ಬದಲಾಗಿ ಮೂರನೇ ಕ್ರಮಾಂಕದಲ್ಲಿ ಅಶುತೋಷ್ ಶರ್ಮಾ ಆಗಮಿಸಿದರು. ಎದುರಿಸಿದ ಮೊದಲ ಎಸೆತದಲ್ಲೇ ಔಟ್ ಆಗುವ ಮೂಲಕ ಭಾರತ ಎ ತಂಡ ಶೂನ್ಯಕ್ಕೆ ಆಲೌಟ್ ಆದಂತಾಯಿತು. ಬಾಂಗ್ಲಾದೇಶ ಫೈನಲ್ ತಲುಪಲು ಸೂಪರ್ ಓವರ್ ನಲ್ಲಿ ಕೇವಲ ಒಂದು ರನ್ ಗಳಿಸುವ ಗುರಿ ಪಡೆಯಿತು. ಸೂರ್ಯವಂಶಿಗೆ ಅವಕಾಶ ನೀಡದಿದ್ದುದೇ ಭಾರತದ ಸೋಲಿಗೆ ಕಾರಣ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ವೈಭವ್ ಅವರನ್ನು ಸೂಪರ್ ಓವರ್ ನಲ್ಲಿ ಕ್ರೀಸ್ಗೆ ಇಳಿಸದೇ ಇದ್ದುದು ತಂಡದ ವ್ಯವಸ್ಥಾಪಕರ ಕೆಟ್ಟ ಆಯ್ಕೆಯನ್ನು ಸೂಚಿಸುತ್ತದೆ. ಅವರು ಟೂರ್ನಿಯ ಅತ್ಯುತ್ತಮ ಬ್ಯಾಟ್ಸ್ಮನ್. ಆದರೆ ಇಡೀ ತಂಡ ಅವರನ್ನು ಹೊರಗಿರಿಸಿತು" ಎಂದು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೂರ್ಯವಂಶಿ ಇದ್ದರೂ ತಾವು ಸೂಪರ್ ಓವರ್ ನಲ್ಲಿ ಬ್ಯಾಟ್ ಮಾಡುವ ಮೂಲಕ ಜಿತೇಶ್ ಶರ್ಮಾ 6 ಎಸೆತದಲ್ಲಿ 30 ರನ್ ಗಳಿಸಬಹುದು ಎಂಬ ಯೋಚನೆಯಲ್ಲಿದ್ದರು ಎಂದು ಮತ್ತೊಬ್ಬ ಅಭಿಮಾನಿ ಅಣಕಿಸಿದ್ದಾರೆ. ನಾಯಕ ಮತ್ತು ಆಯ್ಕೆಗಾರರನ್ನು ತಕ್ಷಣ ಬದಲಿಸಬೇಕು ಎಂದು ಮತ್ತೊಬ್ಬ ಸಾಮಾಜಿಕ ಜಾಲತಾಣ ಬಳಕೆದಾರ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X