Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್...

ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌: ವಿಶ್ವದ ನಂ.7ನೇ ಆಟಗಾರನಿಗೆ ಸೋಲುಣಿಸಿದ ಕನ್ನಡಿಗ ಮಿಥುನ್ ಮಂಜುನಾಥ್

ಸಿಂಧು, ಶ್ರೀಕಾಂತ್,ಪ್ರಣಯ್ ದ್ವಿತೀಯ ಸುತ್ತಿಗೆ ಲಗ್ಗೆ

ವಾರ್ತಾಭಾರತಿವಾರ್ತಾಭಾರತಿ2 Aug 2023 9:13 PM IST
share
ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌: ವಿಶ್ವದ ನಂ.7ನೇ ಆಟಗಾರನಿಗೆ ಸೋಲುಣಿಸಿದ ಕನ್ನಡಿಗ ಮಿಥುನ್ ಮಂಜುನಾಥ್

ಸಿಡ್ನಿ: ಭಾರತದ ಹೊಸ ಮುಖ ಕನ್ನಡಿಗ ಮಿಥುನ್ ಮಂಜುನಾಥ್ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕದ ಹಾಗೂ ವಿಶ್ವದ ನಂ.7ನೇ ಆಟಗಾರ ಕೀನ್ ಯೀವ್ ಲೊಹ್‌ರನ್ನು ಸೋಲಿಸಿ ಶಾಕ್ ನೀಡಿದರು.

ವಿಶ್ವ ರ್ಯಾಂಕಿಂಗ್‌ನಲ್ಲಿ 50ನೇ ಸ್ಥಾನದಲ್ಲಿದ್ದರೂ ಮಂಜುನಾಥ್ ಅಮೋಘ ಕೌಶಲ್ಯ ಹಾಗೂ ದೃಢತೆಯನ್ನು ಪ್ರದರ್ಶಿಸಿ 41 ನಿಮಿಷಗಳ ಕಾಲ ನಡೆದ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಗಾಪುರದ ಕೀವ್ ಯೀವ್‌ರನ್ನು 21-19 ಹಾಗೂ 21-19 ಗೇಮ್‌ಗಳ ಅಂತರದಿಂದ ಮಣಿಸಿದರು.

ಇದೇ ವೇಳೆ ಅಗ್ರ ರ್ಯಾಂಕಿನ ಆಟಗಾರರಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್ ಮೊದಲ ಸುತ್ತಿನಲ್ಲಿ ಪ್ರಾಬಲ್ಯ ಮೆರೆದರು. ಈ ಋತುವಿನಲ್ಲಿ ಹಲವು ಟೂರ್ನಿಗಳಲ್ಲಿ ಬೇಗನೆ ನಿರ್ಗಮಿಸಿದ್ದ 5ನೇ ಶ್ರೇಯಾಂಕದ ಸಿಂಧು ಸಹ ಆಟಗಾರ್ತಿ ಅಶ್ಮಿತಾ ಚಲಿಹಾ ವಿರುದ್ಧ ಕೇವಲ 36 ನಿಮಿಷಗಳ ಹೋರಾಟದಲ್ಲಿ 21-18, 21-13 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು.

ಮತ್ತೊಂದೆಡೆ ಪುರುಷರ ಸಿಂಗಲ್ಸ್‌ನ ಮತ್ತೊಂದು ಸಿಂಗಲ್ಸ್ ಪಂದ್ಯದಲ್ಲಿ ವಿಶ್ವದ 19ನೇ ರ್ಯಾಂಕಿನ ಶ್ರೀಕಾಂತ್ ಅವರು ಜಪಾನಿನ ಕೆಂಟಾ ನಿಶಿಮೊಟೊರನ್ನು 21-18, 21-7 ಅಂತರದಿಂದ ಮಣಿಸಿದರು.

ಇನ್ನೊಂದೆಡೆ 6ನೇ ಶ್ರೇಯಾಂಕದ ಎಚ್.ಎಸ್. ಪ್ರಣಯ್ ಹಾಂಕಾಂಗ್‌ನ ಚೆವುಕ್ ಯೀವ್ ಲೀ ಅವರಿಂದ ಕಠಿಣ ಸವಾಲನ್ನು ಎದುರಿಸಿದರೂ ಕೂಡ 21-18, 16-21,21-15 ಗೇಮ್‌ಗಳ ಅಂತರದಿಂದ ಜಯ ಸಾಧಿಸಿದರು. ಮುಂದಿನ ಸುತ್ತಿನಲ್ಲಿ ಚೈನೀಸ್ ತೈಪೆಯ ಯು ಜೆನ್ ಚಿ ಅವರನ್ನು ಎದುರಿಸಲಿದ್ದಾರೆ.

ಮಂಜುನಾಥ್ ಅವರು ಬಿಡಬ್ಲ್ಯುಎಫ್ ಸೂಪರ್-500 ಟೂರ್ನಮೆಂಟ್‌ನ 2ನೇ ಸುತ್ತಿನಲ್ಲಿ ಮಲೇಶ್ಯದ ಆಟಗಾರರಾದ ಲೀ ಝಿ ಜಿಯಾ ಅಥವಾ ಲೆಯೊಂಗ್ ಜುನ್ ಹಾವೊರನ್ನು ಎದುರಿಸಲಿದ್ದಾರೆ.

ಇದೇ ವೇಳೆ, ಲಕ್ಷ್ಯ ಸೇನ್ ಪುರುಷರ ಸಿಂಗಲ್ಸ್‌ನಲ್ಲಿ ಸಹ ಆಟಗಾರ ಕಿರಣ್ ಜಾರ್ಜ್ ವಿರುದ್ಧ ಮೊದಲ ಪಂದ್ಯದಲ್ಲಿ 0-5 ಅಂತರದಿಂದ ಹಿನ್ನಡೆಯಲ್ಲಿದ್ದಾಗ ಗಾಯಗೊಂಡು ನಿವೃತ್ತಿಯಾದರು. ಉದಯೋನ್ಮುಖ ಶಟ್ಲರ್ ಪ್ರಿಯಾಂಶು ರಾಜಾವತ್ ಆಸ್ಟ್ರೇಲಿಯದ ನಥಾನ್ ಟಾಂಗ್‌ರನ್ನು 21-12, 21-16 ಅಂತರದಿಂದ ಸೋಲಿಸಿ ಗಮನ ಸೆಳೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X