Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಪ್ರೋ ಬೆಂಗಳೂರು ಮ್ಯಾರಥಾನ್ 2025 :...

ವಿಪ್ರೋ ಬೆಂಗಳೂರು ಮ್ಯಾರಥಾನ್ 2025 : ಪ್ರದೀಪ್ ಸಿಂಗ್ ಚೌಧರಿ, ಅಶ್ವಿನಿ ಜಾಧವ್ ಗೆ ಅಗ್ರ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ21 Sept 2025 10:57 PM IST
share
ವಿಪ್ರೋ ಬೆಂಗಳೂರು ಮ್ಯಾರಥಾನ್ 2025 : ಪ್ರದೀಪ್ ಸಿಂಗ್ ಚೌಧರಿ, ಅಶ್ವಿನಿ ಜಾಧವ್ ಗೆ ಅಗ್ರ ಸ್ಥಾನ
ಮ್ಯಾರಥಾನ್‌ನ 12ನೇ ಆವೃತ್ತಿಯಲ್ಲಿ 35,000ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ

ಬೆಂಗಳೂರು, ಸೆ. 21: ಎನ್ ಇಬಿ ಸ್ಪೋರ್ಟ್ಸ್ ಆಯೋಜಿಸಿದ್ದ ವಿಪ್ರೋ ಬೆಂಗಳೂರು ಮ್ಯಾರಥಾನ್ ನ 12ನೇ ಆವೃತ್ತಿಯು ರವಿವಾರ ನಡೆದಿದ್ದು, ಇದರಲ್ಲಿ 35,000ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದರು.

ಇತ್ತೀಚೆಗೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾದಿಂದ ಓಪನ್ ನ್ಯಾಷನಲ್ ಮ್ಯಾರಥಾನ್ ಎಂದು ಗುರುತಿಸಲ್ಪಟ್ಟ ಈ ಸ್ಪರ್ಧೆಯು ಭಾರತದ ಅತ್ಯುತ್ತಮ ಅಗ್ರಮಾನ್ಯ ಕ್ರೀಡಾಪಟುಗಳನ್ನು ಆಕರ್ಷಿಸಿತು. ಪೂರ್ಣ ಮ್ಯಾರಥಾನ್, ಹಾಫ್ ಮ್ಯಾರಥಾನ್, 10 ಕೆ ರನ್ ಹಾಗೂ ಜನಪ್ರಿಯ 5 ಕೆ ಫನ್ ರನ್ ಅನ್ನು ಒಳಗೊಂಡಿತ್ತು.

ಮುಂಜಾನೆ 3:50 ಕ್ಕೆ ಪೂರ್ಣ ಮ್ಯಾರಥಾನ್ ಗೆ ಹಸಿರು ನಿಶಾನೆ ತೋರುವುದರೊಂದಿಗೆ ದಿನ ಪ್ರಾರಂಭವಾಯಿತು. ನಂತರ ಬೆಳಗ್ಗೆ 6:15ಕ್ಕೆ ಹಾಫ್ ಮ್ಯಾರಥಾನ್, ಬೆಳಗ್ಗೆ 7.45ಕ್ಕೆ 10ಕೆ ಮತ್ತು ಅಂತಿಮವಾಗಿ ಬೆಳಗ್ಗೆ 8:30ಕ್ಕೆ 5ಕೆ ಫನ್ ರನ್ ನಡೆಯಿತು.

ಬ್ಯಾಡ್ಮಿಂಟನ್ ದಂತಕಥೆ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಪುಲ್ಲೇಲ ಗೋಪಿಚಂದ್ ಅವರು ರೇಸ್ ಗೆ ಚಾಲನೆ ನೀಡಿದರು. ಎಂ.ಜಿ.ರಸ್ತೆ, ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಸೇರಿದಂತೆ ಬೆಂಗಳೂರಿನ ಪ್ರಮುಖ ಸ್ಥಳಗಳನ್ನು ದಾಟಿ ಸಾಗಿತು.

ಸ್ಪೋರ್ಟ್ಸ್ ಬ್ರ್ಯಾಂಡ್ ಪೂಮಾ ಇಂಡಿಯಾ ವಿಶೇಷವಾಗಿ ವಿನ್ಯಾಸಗೊಳಿಸಿದ ನಿಯಾನ್ ಕಿತ್ತಳೆ ಬಣ್ಣದ ರೇಸ್ ಡೇ ಟೀ ಶರ್ಟ್ ನಲ್ಲಿ ಸಾವಿರಾರು ಓಟಗಾರರು ಬೀದಿಗಿಳಿದರು.

ಪುರುಷರ ವಿಭಾಗದಲ್ಲಿ ಪ್ರದೀಪ್ ಸಿಂಗ್ ಚೌಧರಿ 2 :25:19 ಸೆಕೆಂಡುಗಳಲ್ಲಿ ಮೊದಲ ಸ್ಥಾನಿಯಾಗಿ ಗುರಿ ತಲುಪಿದರೆ, ಅಶ್ವಿನಿ ಜಾಧವ್ ಮಹಿಳೆಯರ ವಿಭಾಗದಲ್ಲಿ 03:03:59 ಸೆಕೆಂಡುಗಳಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದರು. ಈ ವರ್ಷ 3,500 ಕ್ಕೂ ಹೆಚ್ಚು ಓಟಗಾರರು ಪೂರ್ಣ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದರು.

11,000ಕ್ಕೂ ಹೆಚ್ಚು ಓಟಗಾರರು ಭಾಗವಹಿಸಿದ ಹಾಫ್ ಮ್ಯಾರಥಾನ್ ವಿಭಾಗದಲ್ಲಿ, ಅಂಕಿತ್ ಗುಪ್ತಾ ಪುರುಷರ ಓಟದಲ್ಲಿ 1:06:10 ಸಮಯದೊಂದಿಗೆ ಮೊದಲ ಸ್ಥಾನ ಪಡೆದರೆ, ದೇವಂಗಿ ಪುರ್ಕಾಯಸ್ಥ ಮಹಿಳೆಯರ ಹಾಫ್ ಮ್ಯಾರಥಾನ್ ನಲ್ಲಿ 1:29:17 ಸಮಯದೊಂದಿಗೆ ಜಯ ಗಳಿಸಿದರು.

ಪುರುಷರ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಮುಖ್ ಬಿ.ಆರ್ ಮತ್ತು ರಮ್ಯಾ ಆರ್. ಕ್ರಮವಾಗಿ 39 ನಿಮಿಷ ಮತ್ತು 52 ನಿಮಿಷಗಳ ಸಮಯದೊಂದಿಗೆ 10 ಕೆ ವಿಭಾಗದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದರು.

5K ಹೋಪ್ ರನ್ ಮತ್ತೊಮ್ಮೆ ಹೆಚ್ಚಿನ ಜನರನ್ನು ಸೆಳೆಯಿತು. ಹಿರಿಯ ನಾಗರಿಕರು, ಮಕ್ಕಳು, ಕಾರ್ಪೊರೇಟ್ ಗಳು ಮತ್ತು ಎನ್ ಜಿಒಗಳು ಸೇರಿದಂತೆ 15,000 ಕ್ಕೂ ಹೆಚ್ಚು ಓಟಗಾರರು ರೇಸ್ ನಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X