Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೆನ್ನೈ ಸೋತರೂ ಧೋನಿ ಬ್ಯಾಟಿಂಗ್ ನಿಂದ...

ಚೆನ್ನೈ ಸೋತರೂ ಧೋನಿ ಬ್ಯಾಟಿಂಗ್ ನಿಂದ ಖುಷಿಪಟ್ಟ ಅಭಿಮಾನಿಗಳು, 10 ವರ್ಷಗಳ ಹಳೆಯ ಟ್ವೀಟ್ ವೈರಲ್

ವಾರ್ತಾಭಾರತಿವಾರ್ತಾಭಾರತಿ1 April 2024 10:13 PM IST
share
ಚೆನ್ನೈ ಸೋತರೂ ಧೋನಿ ಬ್ಯಾಟಿಂಗ್ ನಿಂದ ಖುಷಿಪಟ್ಟ ಅಭಿಮಾನಿಗಳು, 10 ವರ್ಷಗಳ ಹಳೆಯ ಟ್ವೀಟ್ ವೈರಲ್

ವಿಶಾಖಪಟ್ಟಣ: ಚೆನ್ನೈ ಸೂಪರ್ ಕಿಂಗ್ಸ್ ದಿಗ್ಗಜ ಆಟಗಾರ ಎಂ.ಎಸ್. ಧೋನಿ 42ನೇ ವಯಸ್ಸಿನಲ್ಲಿ ತನ್ನ ಬ್ಯಾಟಿಂಗ್ ಸಾಮರ್ಥ್ಯದ ಮೂಲಕ ಅಭಿಮಾನಿಗಳನ್ನು ರಂಜಿಸುವುದನ್ನು ಮುಂದುವರಿಸಿದ್ದಾರೆ. ರವಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಧೋನಿ ಇನಿಂಗ್ಸ್ ಅಂತ್ಯದಲ್ಲಿ 16 ಎಸೆತಗಳಲ್ಲಿ ಔಟಾಗದೆ 37 ರನ್ ಗಳಿಸಿದ್ದರು. ಆದರೆ ಅದಾಗಲೇ ಚೆನ್ನೈ ಸೋಲಿನ ಸುಳಿಗೆ ಸಿಲುಕಿತ್ತು. ಧೋನಿಯ ಪ್ರದರ್ಶನದಿಂದ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಇದೇ ವೇಳೆ 10 ವರ್ಷಗಳ ಹಿಂದೆ ಹಿರಿಯ ವಿಕೆಟ್ ಕೀಪರ್-ಬ್ಯಾಟರ್ ಧೋನಿ ಮಾಡಿರುವ ಟ್ವೀಟ್ ಈಗ ಮತ್ತೆ ವೈರಲ್ ಆಗಿದೆ.

ಯಾವ ತಂಡ ಗೆಲ್ಲುತ್ತದೆ ಎನ್ನುವುದು ಮುಖ್ಯವಲ್ಲ, ನಾನಿಲ್ಲಿ ಮನರಂಜಿಸಲು ಇದ್ದೇನೆ ಎಂದು ಧೋನಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು.

ಡೆಲ್ಲಿ ವಿರುದ್ಧ ರವಿವಾರ ನಡೆದ ಪಂದ್ಯವು 10 ವರ್ಷಗಳ ಹಿಂದೆ ಧೋನಿ ಹೇಳಿದ ಮಾತನ್ನು ನಿಜವಾಗಿಸಿದೆ. ಸಿ ಎಸ್ ಕೆ ಈ ಪಂದ್ಯವನ್ನು ಸೋತಿದೆ. ಸಿ ಎಸ್ ಕೆ ಮಾಜಿ ನಾಯಕ ಧೋನಿ ಶುದ್ಧ ಮನರಂಜನೆಯನ್ನು ನೀಡುವ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.

ಗೆಲ್ಲಲು 192 ರನ್ ಗುರಿ ಬೆನ್ನಟ್ಟಿದ ಚೆನ್ನೈ ತಂಡದ ಪರ ಅಜಿಂಕ್ಯ ರಹಾನೆ(45 ರನ್), ಧೋನಿ(ಔಟಾಗದೆ 37) ಹಾಗೂ ಡ್ಯಾರಿಲ್ ಮಿಚೆಲ್(34 ರನ್)ಗೆಲುವಿಗಾಗಿ ಪ್ರಯತ್ನಿಸಿದರು. ಸಿ ಎಸ್ ಕೆ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.

ಸಿ ಎಸ್ ಕೆ ಗೆ ಗೆಲ್ಲಲು 18 ಎಸೆತಗಳಲ್ಲಿ 58 ರನ್ ಅಗತ್ಯವಿದ್ದಾಗ ಧೋನಿ ಈ ಋತುವಿನಲ್ಲಿ ಮೊದಲ ಬಾರಿ ಬ್ಯಾಟಿಂಗ್ ಗೆ ಇಳಿದರು. ಧೋನಿ ಮೈದಾನಕ್ಕೆ ಇಳಿದಾಗ ಅಭಿಮಾನಿಗಳು ಧೋನಿ… ಧೋನಿ ಎಂಬ ಘೋಷಣೆ ಮೊಳಗಿಸಿದರು. ಧೋನಿ ಆಕರ್ಷಕ ಹೊಡೆತದಿಂದ ಅಭಿಮಾನಿಗಳನ್ನು ರಂಜಿಸಿದರು.

ಆದರೆ ಮುಕೇಶ್ ಕುಮಾರ್ 19ನೇ ಓವರ್ನಲ್ಲಿ ಚೆನ್ನೈ ತಂಡಕ್ಕೆ ಕೇವಲ 5 ರನ್ ನೀಡಿ ಗೆಲುವಿನ ಕನಸು ಭಗ್ನಗೊಳಿಸಿದರು. ಚೆನ್ನೈಗೆ ಕೊನೆಯ ಓವರ್ನಲ್ಲಿ ಗೆಲ್ಲಲು 41 ರನ್ ಗಳಿಸಬೇಕಾಗಿತ್ತು.

ಕೊನೆಯ ಓವರ್ನ ಮೊದಲೆರಡು ಎಸೆತದಲ್ಲಿ ಧೋನಿ ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದರು. ಇನ್ನೂ ಒಂದು ಬೌಂಡರಿ ಹಾಗೂ ಸಿಕ್ಸರ್ ಸಹಿತ ಒಟ್ಟು 20 ರನ್ ಗಳಿಸಿದರು. ಆದರೆ ಧೋನಿಯ ಈ ಅಬ್ಬರದ ಬ್ಯಾಟಿಂಗ್ ಚೆನ್ನೈಗೆ ಗೆಲುವು ತಂದುಕೊಡಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X