Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೊರೆಸ್ ಗೋಲಿಗೆ ಮಣಿದ ಅರ್ಜೆಂಟೀನಾ;...

ಟೊರೆಸ್ ಗೋಲಿಗೆ ಮಣಿದ ಅರ್ಜೆಂಟೀನಾ; ಸ್ಪೇನ್‌ ಗೆ ಎರಡನೇ FIFA ವಿಶ್ವಕಪ್ ಕಿರೀಟ

ವಾರ್ತಾಭಾರತಿವಾರ್ತಾಭಾರತಿ20 July 2026 3:42 AM IST
share
ಟೊರೆಸ್ ಗೋಲಿಗೆ ಮಣಿದ ಅರ್ಜೆಂಟೀನಾ; ಸ್ಪೇನ್‌ ಗೆ ಎರಡನೇ FIFA ವಿಶ್ವಕಪ್ ಕಿರೀಟ

ನ್ಯೂಜೆರ್ಸಿ: ಯುರೋ ಚಾಂಪಿಯನ್ ಸ್ಪೇನ್ ತಂಡವು ಹಾಲಿ ಚಾಂಪಿಯನ್ ಅರ್ಜೆಂಟೀನ ತಂಡವನ್ನು 1-0 ಗೋಲು ಅಂತರದಿಂದ ಮಣಿಸುವುದರೊಂದಿಗೆ 23ನೇ ಆವೃತ್ತಿಯ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2010ರ ನಂತರ ಎರಡನೇ ಬಾರಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ.

ರವಿವಾರ ತಡರಾತ್ರಿ ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ, ನಿಗದಿತ 90 ನಿಮಿಷಗಳ ಅವಧಿಯಲ್ಲಿ ಒಂದೂ ಗೋಲು ದಾಖಲಾಗಲಿಲ್ಲ. ಬಳಿಕ ಹೆಚ್ಚುವರಿ ಸಮಯದ 16ನೇ ನಿಮಿಷದಲ್ಲಿ ಫೆರನ್ ಟೊರೆಸ್ ಸ್ಪೇನ್ ತಂಡದ ಗೆಲುವಿನ ಗೋಲನ್ನು ಬಾರಿಸಿದರು. ಇದು ಸ್ಪೇನ್ ಪಂದ್ಯದಲ್ಲಿ ನಡೆಸಿದ 20ನೇ ಗೋಲು ಪ್ರಯತ್ನವಾಗಿತ್ತು.

ಹೆಚ್ಚುವರಿ ಸಮಯದ ಮೊದಲಾರ್ಧದಲ್ಲಿ ನಿಕೊ ವಿಲಿಯಮ್ಸ್ ಗೋಲು ಗಳಿಸಿದ್ದರೂ, ಅದಕ್ಕೂ ಮುನ್ನ ಸ್ಪೇನ್ ಆಟಗಾರರಿಂದ ಫೌಲ್ ನಡೆದಿರುವುದು ವಿಡಿಯೊ ಸಹಾಯಕ ತೀರ್ಪುಗಾರರ (VAR) ಪರಿಶೀಲನೆಯಲ್ಲಿ ದೃಢಪಟ್ಟ ಕಾರಣ ಗೋಲನ್ನು ರದ್ದುಗೊಳಿಸಲಾಯಿತು.

ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ನಿಗದಿತ ಸಮಯದಲ್ಲಿ 10 ಅದ್ಭುತ ಸೇವ್‌ಗಳನ್ನು ಮಾಡಿ ವಿಶ್ವಕಪ್ ಫೈನಲ್‌ನಲ್ಲಿ ಗೋಲ್‌ಕೀಪರ್ ಒಬ್ಬರು ದಾಖಲಿಸಿದ ಅತಿ ಹೆಚ್ಚು ಸೇವ್‌ಗಳ ದಾಖಲೆಯನ್ನು ನಿರ್ಮಿಸಿದರು. ಆದರೆ ಟೊರೆಸ್ ಅವರ ನಿರ್ಣಾಯಕ ಗೋಲನ್ನು ತಡೆಯಲು ಅವರಿಗೆ ಸಾಧ್ಯವಾಗಲಿಲ್ಲ.

ಪಂದ್ಯದ ಅಂತಿಮ ಹಂತದಲ್ಲಿ ಮಿಡ್‌ಫೀಲ್ಡರ್ ಎಂಜೊ ಫೆರ್ನಾಂಡಿಸ್ ಕೆಂಪು ಕಾರ್ಡ್ ಪಡೆದ ಕಾರಣ ಅರ್ಜೆಂಟೀನಾ 10 ಆಟಗಾರರೊಂದಿಗೆ ಪಂದ್ಯವನ್ನು ಮುಗಿಸಿತು. ಇದೇ ವೇಳೆ ಡಿಫೆಂಡರ್ ಲಿಸಾಂಡ್ರೊ ಮಾರ್ಟಿನೆಜ್ ಗಾಯಗೊಂಡು ಮೈದಾನ ತೊರೆಯಬೇಕಾಯಿತು.

ಈ ಗೆಲುವಿನೊಂದಿಗೆ ಸ್ಪೇನ್ ಎರಡನೇ ಬಾರಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡರೆ, ಮೆಸ್ಸಿ ನೇತೃತ್ವದ ಅರ್ಜೆಂಟೀನಾದ ವಿಶ್ವಚಾಂಪಿಯನ್ ಪಯಣಕ್ಕೆ ತೆರೆ ಬಿತ್ತು. ಫೆರಾನ್ ಟೊರೆಸ್ ಅವರ 106ನೇ ನಿಮಿಷದ ಗೋಲು ವಿಶ್ವಕಪ್ ಇತಿಹಾಸದ ಸ್ಮರಣೀಯ ಕ್ಷಣಗಳಲ್ಲಿ ಒಂದಾಗಿ ದಾಖಲಾಗಿತು.

80,000ಕ್ಕೂ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಫೈನಲ್ ಫೈಟ್‌ನಲ್ಲಿ ಮೂರು ಬಾರಿಯ ಚಾಂಪಿಯನ್ ಅರ್ಜೆಂಟೀನಕ್ಕೆ ಸೋಲಿನ ಬರೆ ಎಳೆದಿರುವ ಸ್ಪೇನ್ ತಂಡವು ಸುಮಾರು 480 ಕೋಟಿ ರೂ. ನಗದು ಪುರಸ್ಕಾರ, ಚಾಂಪಿಯನ್‌ಶಿಪ್ ರಿಂಗ್ ತನ್ನದಾಗಿಸಿಕೊಂಡಿದೆ. ರನ್ನರ್ಸ್ ಅಪ್ ತಂಡ ಅರ್ಜೆಂಟೀನ ಸುಮಾರು 315 ಕೋಟಿರೂ. ಬಹುಮಾನ ಗೆದ್ದುಕೊಂಡಿದೆ.

ಎಂಝೋ ಫೆರ್ನಾಂಡಿಸ್‌ಗೆ ಕೆಂಪು ಕಾರ್ಡ್

ಗಾಯದ ಅವಧಿಯ ಮೂರನೇ ನಿಮಿಷದಲ್ಲಿ ಸ್ಪೇನ್ ಆಟಗಾರನನ್ನು ಕೆಡವಿದ ಅರ್ಜೆಂಟೀನದ ಎಂರೊ ಫೆರ್ನಾಂಡಿಸ್‌ಗೆ ರೆಫರಿ, ಕೆಂಪು ಕಾರ್ಡ್ ನೀಡಿದರು. ಹೀಗಾಗಿ ಅರ್ಜೆಂಟೀನ ತಂಡ 10 ಆಟಗಾರರೊಂದಿಗೆ ಆಡಬೇಕಾಯಿತು.


ಅರ್ಜೆಂಟೀನದ ಆರು ಆಟಗಾರರಿಗೆ ಹಳದಿ ಕಾರ್ಡ್ : ಅರ್ಜೆಂಟೀನದ ಲಿಸಾಂಡ್ರೊ ಮಾರ್ಟಿನೇಝ್‌ಗೆ 41ನೇ ನಿಮಿಷದಲ್ಲಿ , ಲಿಯಾಂಡ್ರೊ ಪರೆಡಿಸ್‌ಗೆ 52ನೇ ನಿಮಿಷದಲ್ಲಿ , ಎಂರೊ ಫೆರ್ನಾಂಡಿಸ್‌ಗೆ 82ನೇ ನಿಮಿಷದಲ್ಲಿ , ರೊಮೆರೊಗೆ 92ನೇ ನಿಮಿಷದಲ್ಲಿ , ಸಿಮಿಯೋನ್‌ಗೆ 105ನೇ ನಿಮಿಷದಲ್ಲಿ ಹಾಗೂ 111ನೇ ನಿಮಿಷದಲ್ಲಿ ಅಲೆಕ್ಸಿಸ್ ಮ್ಯಾಕ್ಸ್ ಅಲಿಸ್ಟರ್‌ಗೆ ಹಳದಿ ಕಾರ್ಡ್ ನೀಡಲಾಯಿತು.


Tags

FIFA World Cup 2026 FinalSpainFIFA 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X