Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಥಮ ಟೆಸ್ಟ್: ಇಂಗ್ಲೆಂಡ್ 246 ರನ್ ಗೆ...

ಪ್ರಥಮ ಟೆಸ್ಟ್: ಇಂಗ್ಲೆಂಡ್ 246 ರನ್ ಗೆ ಆಲೌಟ್

ಮೊದಲ ದಿನದಾಟದಲ್ಲಿ ಮಿಂಚಿದ ಭಾರತದ ಆಟಗಾರರು

ವಾರ್ತಾಭಾರತಿವಾರ್ತಾಭಾರತಿ25 Jan 2024 10:31 PM IST
share

ಹೈದರಾಬಾದ್: ಸ್ಪಿನ್ನರ್ ಗಳು ಹಾಗೂ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅಮೋಘ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಪ್ರಥಮ ಟೆಸ್ಟ್ನ ಮೊದಲ ದಿನದಾಟದಲ್ಲಿ ಆತಿಥೇಯ ಭಾರತ ಮೆರೆದಾಡಿದೆ.

ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ನೇತೃತ್ವದಲ್ಲಿ ಭಾರತ ಕ್ರಿಕೆಟ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ 246 ರನ್ಗೆ ನಿಯಂತ್ರಿಸಿತು. ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಯಶಸ್ವಿ ಜೈಸ್ವಾಲ್ ಆಕ್ರಮಣಕಾರಿ ಅರ್ಧಶತಕದ(ಔಟಾಗದೆ 76, 70 ಎಸೆತ, 9 ಬೌಂಡರಿ, 3 ಸಿಕ್ಸರ್)ಸಹಾಯದಿಂದ ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ಇಂಗ್ಲೆಂಡ್ ಇನಿಂಗ್ಸ್ ಗಿಂತ 127 ರನ್ ಹಿನ್ನಡೆಯಲ್ಲಿದೆ.

ಭಾರತ ಬ್ಯಾಟಿಂಗ್ಗೆ ಇಳಿದಾಗ ಪಿಚ್ ಆರಂಭಿಕ ಆಟಗಾರರಿಗೆ ಹೆಚ್ಚು ಸವಾಲಾಗಲಿಲ್ಲ. ಇದರ ಲಾಭ ಪಡೆದ ಜೈಸ್ವಾಲ್ ಆಕರ್ಷಕ ಇನಿಂಗ್ಸ್ ಆಡಿದರು. ಎಡಗೈ ಸ್ಪಿನ್ನರ್ ಟಾಮ್ ಹಾರ್ಟ್ಲಿ ಎಸೆದ ಮೊದಲ ಓವರ್ನಲ್ಲಿ ಎರಡು ಸಿಕ್ಸರ್ ಸಿಡಿಸಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು.

ನಾಯಕ ರೋಹಿತ್ ಶರ್ಮಾ(24 ರನ್) ಜೈಸ್ವಾಲ್ ಅವರೊಂದಿಗೆ ಕೇವಲ 12.1 ಓವರ್ ಗಳಲ್ಲಿ ಮೊದಲ ವಿಕೆಟ್ಗೆ 80 ರನ್ ಜೊತೆಯಾಟ ನಡೆಸಿದ ನಂತರ ಲೀಚ್ಗೆ ವಿಕೆಟ್ ಒಪ್ಪಿಸಿದರು. ಶುಭಮನ್ ಗಿಲ್(ಔಟಾಗದೆ 14) ಜೈಸ್ವಾಲ್ಗೆ ಸಾಥ್ ನೀಡುತ್ತಿದ್ದಾರೆ.

ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ಎದುರು ಇಂಗ್ಲೆಂಡ್ ಸ್ಪಿನ್ನರ್ ಗಳು ಪರದಾಟ ನಡೆಸಿದರು. ಆದರೆ ಭಾರತದ ಸ್ಪಿನ್ನರ್ ಗಳು ಇಂಗ್ಲೆಂಡ್ ಬ್ಯಾಟರ್ ಗಳಿಗೆ ತೀವ್ರ ಸವಾಲು ಒಡ್ಡಿದರು.

*ಇಂಗ್ಲೆಂಡ್ 246 ರನ್ ಗೆ ಆಲೌಟ್

ಇದಕ್ಕೂ ಮೊದಲು ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡ ಭಾರತದ ತ್ರಿವಳಿ ಸ್ಪಿನ್ನರ್ ಗಳಾದ ಆರ್.ಅಶ್ವಿನ್(3-68), ರವೀಂದ್ರ ಜಡೇಜ(3-88) ಹಾಗೂ ಅಕ್ಷರ್ ಪಟೇಲ್(2-33) ಸ್ಪಿನ್ ಮೋಡಿಗೆ ತತ್ತರಿಸಿ 64.3 ಓವರ್ ಗಳಲ್ಲಿ 246 ರನ್ ಗಳಿಸಿ ಆಲೌಟಾಯಿತು.

ನಾಯಕ ಬೆನ್ ಸ್ಟೋಕ್ಸ್ (70 ರನ್,88 ಎಸೆತ, 6 ಬೌಂಡರಿ, 3 ಸಿಕ್ಸರ್)ಒಂದಷ್ಟು ಪ್ರತಿರೋಧ ವ್ಯಕ್ತಪಡಿಸಿ ಇನಿಂಗ್ಸ್ ಆಧರಿಸಿದರು. ಆದರೆ ಉಳಿದ ಆಟಗಾರರು ಭಾರತದ ಪಿಚ್ನಲ್ಲಿ ಗಟ್ಟಿಯಾಗಿ ನಿಂತು ಆಡುವಲ್ಲಿ ವಿಫಲರಾದರು.

ಮಾಜಿ ನಾಯಕ ಜೋ ರೂಟ್(29 ರನ್)ಹಾಗೂ ಜಾನಿ ಬೈರ್ಸ್ಟೋವ್(37 ರನ್)ಸ್ವಲ್ಪಮಟ್ಟಿಗೆ ಪ್ರತಿ ಹೋರಾಟ ನೀಡಿದರು. ಭೋಜನ ವಿರಾಮದ ನಂತರ ವಿಕೆಟ್ ಗಳು ಪತನಗೊಂಡ ಕಾರಣ ಇಂಗ್ಲೆಂಡ್ ಕುಸಿತ ಕಂಡಿತು.

ಬೆನ್ ಸ್ಟೋಕ್ಸ್ ಏಕಾಂಗಿ ಹೋರಾಟ ನೀಡಿದರು. ಸ್ಟೋಕ್ಸ್ ಪ್ರಯತ್ನದಿಂದಾಗಿ ಇಂಗ್ಲೆಂಡ್ ತನ್ನ ಮೊದಲ ಇನಿಂಗ್ಸ್ನಲ್ಲಿ ಗೌರವಾರ್ಹ ಮೊತ್ತ ಗಳಿಸಿತು. ಸ್ಟೋಕ್ಸ್ 70 ರನ್ ಗಳಿಸಿದ ಹೊರತಾಗಿಯೂ ಭಾರತವು ಇನಿಂಗ್ಸ್ನಲ್ಲಿ ಹಿಡಿತ ಸಾಧಿಸಿತು. ಆಂಗ್ಲರು ಒಂದೇ ಅವಧಿಯಲ್ಲಿ 107 ರನ್ ಸೇರಿಸುವಷ್ಟರಲ್ಲಿ 5 ವಿಕೆಟ್ ಗಳನ್ನು ಕಳೆದುಕೊಂಡಿತು.

ಇಂಗ್ಲೆಂಡ್ ಪರ ಅಗ್ರ ಸ್ಕೋರರ್ ಎನಿಸಿಕೊಂಡ ಸ್ಟೋಕ್ಸ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಇಂಗ್ಲೆಂಡ್ ಮೊದಲ ಇನಿಂಗ್ಸ್ಗೆ ತೆರೆ ಬಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X