Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟೆಸ್ಟ್ : ಭಾರತದ ಸ್ಪಿನ್ ಮೋಡಿಗೆ...

ಮೊದಲ ಟೆಸ್ಟ್ : ಭಾರತದ ಸ್ಪಿನ್ ಮೋಡಿಗೆ ವಿಂಡೀಸ್ ತತ್ತರ, 150 ರನ್ ಗೆ ಆಲೌಟ್

ವಾರ್ತಾಭಾರತಿವಾರ್ತಾಭಾರತಿ13 July 2023 11:09 PM IST
share
ಮೊದಲ ಟೆಸ್ಟ್ : ಭಾರತದ ಸ್ಪಿನ್ ಮೋಡಿಗೆ ವಿಂಡೀಸ್ ತತ್ತರ, 150 ರನ್  ಗೆ ಆಲೌಟ್

ಡೊಮಿನಿಕಾ: ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಆತಿಥೇಯ ವೆಸ್ಟ್ಇಂಡೀಸ್ ಪ್ರಥಮ ಟೆಸ್ಟ್ನ ಮೊದಲ ದಿನದಾಟವಾದ ಬುಧವಾರ ತನ್ನ ಮೊದಲ ಇನಿಂಗ್ಸ್ ನಲ್ಲಿ ಕೇವಲ 150 ರನ್ ಗಳಿಸಿ ಆಲೌಟಾಗಿದೆ. ಅಶ್ವಿನ್ ಹಾಗೂ ಜಡೇಜ ಒಟ್ಟಿಗೆ 8 ವಿಕೆಟ್ ಳನ್ನು ಉರುಳಿಸಿ ವಿಂಡೀಸ್ಗೆ ಸಿಂಹಸ್ವಪ್ನರಾದರು. ದಿನದಾಟದುದ್ದಕ್ಕೂ ರನ್ ಗಳಿಸಲು ಪರದಾಟ ನಡೆಸಿದ ವಿಂಡೀಸ್ಮೊದಲೆರಡು ಸೆಶನ್ನಲ್ಲಿ ತಲಾ 4 ವಿಕೆಟ್ಗಳನ್ನು ಕಳೆದುಕೊಂಡಿದ್ದು, ಕೊನೆಯ ಸೆಶನ್ನಲ್ಲಿ ತಿರುಗೇಟು ನೀಡಲು ಯತ್ನಿಸಿತು. ಕಳೆದ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನಿರಾಸೆಗೊಳಿಸಿದ್ದ ಅಶ್ವಿನ್ 33ನೇ ಬಾರಿ ಐದು ವಿಕೆಟ್ ಗೊಂಚಲು ಕಬಳಿಸಿ ವಿಂಡೀಸ್ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಮುಖ್ಯ ಪಾತ್ರವಹಿಸಿದರು.

ಅಶ್ವಿನ್ 24.3 ಓವರ್ಗಳಲ್ಲಿ 60 ರನ್ಗೆ 5 ವಿಕೆಟ್ಗಳನ್ನು ಕಬಳಿಸಿದರೆ ಜಡೇಜ 14 ಓವರ್ಗಳಲ್ಲಿ 26 ರನ್ಗೆ 3 ವಿಕೆಟ್ಗಳನ್ನು ಕಬಳಿಸಿ ಅಶ್ವಿನ್ಗೆ ಸಾಥ್ ನೀಡಿದರು. ವಿಂಡೀಸ್ ಪರ ಚೊಚ್ಚಲ ಪಂದ್ಯವನ್ನಾಡಿದ್ದ ಅಲಿಕ್ ಅಥಾನಾಝ್(47 ರನ್,99 ಎಸೆತ)ಸರ್ವಾಧಿಕ ಸ್ಕೋರ್ ಗಳಿಸಿದರು. ಉಳಿದ ಆಟಗಾರರು ವಿಫಲರಾದರು. ಮೊದಲ ಇನಿಂಗ್ಸ್ ಆರಂಭಿಸಿರುವ ಭಾರತಕ್ಕೆ ನಾಯಕ ರೋಹಿತ್ ಶರ್ಮಾ(ಔಟಾಗದೆ 30, 65 ಎಸೆತ) ಹಾಗೂ ಚೊಚ್ಚಲ ಪಂದ್ಯವನ್ನಾಡಿದ ಯಶಸ್ವಿ ಜೈಸ್ವಾಲ್

(ಔಟಾಗದೆ 40, 73 ಎಸೆತ)ಮೊದಲ ವಿಕೆಟ್ ಗೆ 80 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು.ವಿಂಡೀಸ್ ಇನಿಂಗ್ಸ್ ಗಿಂತ ಭಾರತ ಕೇವಲ 70 ರನ್ ಹಿನ್ನಡೆಯಲ್ಲಿದೆ.

ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಅರ್ಧಶತಕ, ಭಾರತ ಭರ್ಜರಿ ಆರಂಭ

ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಅರ್ಧಶತಕದ ಕೊಡುಗೆಯ ನೆರವಿನಿಂದ ಭಾರತ ಕ್ರಿಕೆಟ್ ತಂಡ ವೆಸ್ಟ್ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಆರಂಭ ಪಡೆದಿದೆ.

ವೆಸ್ಟ್ ಇಂಡೀಸ್ ತಂಡವನ್ನು ಮೊದಲ ದಿನದಾಟವಾದ ಬುಧವಾರ ಕೇವಲ 150 ರನ್ಗೆ ನಿಯಂತ್ರಿಸಿ ತನ್ನ ಮೊದಲ ಇನಿಂಗ್ಸ್ ಆರಂಭಿಸಿದ್ದ ಭಾರತ 2ನೇ ದಿನವಾದ ಗುರುವಾರ ಭೋಜನ ವಿರಾಮದ ವೇಳೆಗೆ 55 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 146 ರನ್ ಗಳಿಸಿದೆ. ವಿಂಡೀಸ್ ಸ್ಕೋರ್ಗಿಂತ 4 ರನ್ ಹಿನ್ನಡೆಯಲ್ಲಿದೆ. ರೋಹಿತ್ ಹಾಗೂ ಜೈಸ್ವಾಲ್ 2021ರ ಡಿಸೆಂಬರ್ ನಂತರ ಮೊದಲ ವಿಕೆಟ್ನಲ್ಲಿ ಶತಕದ ಜೊತೆಯಾಟ ನಡೆಸಿದ ಭಾರತದ ಓಪನರ್ಗಳೆಂಬ ಕೀರ್ತಿಗೆ ಭಾಜನರಾದರು. ನಾಯಕ ರೋಹಿತ್ 106 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ 15ನೇ ಟೆಸ್ಟ್ ಅರ್ಧಶತಕ ಸಿಡಿಸಿದರು. ಚೊಚ್ಚಲ ಪಂದ್ಯವನ್ನಾಡಿದ ಜೈಸ್ವಾಲ್ ಅವರು ಜೋಸೆಫ್ ಎಸೆತವನ್ನು ಬೌಂಡರಿ ಗೆರೆ ದಾಟಿಸಿ 104 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿದರು. ಮೊದಲ ದಿನದಾಟದಂತ್ಯಕ್ಕೆ ಭಾರತವು ವಿಕೆಟ್ ನಷ್ಟವಿಲ್ಲದೆ 80 ರನ್ ಗಳಿಸಿತ್ತು. ಯಶಸ್ವಿ ಔಟಾಗದೆ 40 ಹಾಗೂ ರೋಹಿತ್ ಔಟಾಗದೆ 30 ರನ್ ಗಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X