Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತ್ರಿಕೋನ ಸರಣಿ | ಭಾರತ ‘ಎ’, ‘ಬಿ’...

ತ್ರಿಕೋನ ಸರಣಿ | ಭಾರತ ‘ಎ’, ‘ಬಿ’ ಅಂಡರ್- 19 ತಂಡಗಳು ಪ್ರಕಟ

ವಾರ್ತಾಭಾರತಿವಾರ್ತಾಭಾರತಿ11 Nov 2025 10:45 PM IST
share

ಹೊಸದಿಲ್ಲಿ, ನ.11: ಮುಂಬರುವ ಅಂಡರ್-19 ತ್ರಿಕೋನ ಸರಣಿಗಾಗಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಮಂಗಳವಾರ ಭಾರತ ‘ಎ’ ಹಾಗೂ ಭಾರತ ‘ಬಿ’ ಅಂಡರ್-19 ತಂಡಗಳನ್ನು ಪ್ರಕಟಿಸಿದ್ದು, ಇದರಲ್ಲಿ ಅಫ್ಘಾನಿಸ್ತಾನ ಅಂಡರ್-19 ಮೂರನೇ ತಂಡವಾಗಿದೆ.

ನವೆಂಬರ್ 17ರಂದು ಬೆಂಗಳೂರಿನ ಬಿಸಿಸಿಐ ಸಿಒಇನಲ್ಲಿ ಆರಂಭವಾಗಲಿರುವ ಪಂದ್ಯಾವಳಿಗೆ ಜೂನಿಯರ್ ಆಯ್ಕೆ ಸಮಿತಿಯು ತಂಡಗಳನ್ನು ಆಯ್ಕೆ ಮಾಡಿದೆ.

ಆದರೆ ಯುವ ಬ್ಯಾಟಿಂಗ್ ಪ್ರತಿಭೆ ವೈಭವ ಸೂರ್ಯವಂಶಿ ತ್ರಿಕೋನ ಸರಣಿಯಲ್ಲಿ ಭಾರತದ ಎರಡೂ ತಂಡಗಳಲ್ಲಿ ಸ್ಥಾನ ಪಡೆದಿಲ್ಲ.

‘ವೈಭವ್ ಸೂರ್ಯವಂಶಿ ಅವರನ್ನು ಎಸಿಸಿ ರೈಸಿಂಗ್ ಸ್ಟಾರ್ಸ್ ಏಶ್ಯ ಕಪ್ಗೆ ಭಾರತ ‘ಎ’ ತಂಡಕ್ಕೆ ಆಯ್ಕೆ ಮಾಡಿರುವ ಹಿನ್ನೆಲೆಯಲ್ಲಿ ತ್ರಿಕೋನ ಸರಣಿಗೆ ಅವರನ್ನು ಪರಿಗಣಿಸಿಲ್ಲ’ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಸೂರ್ಯವಂಶಿ ಈ ತಿಂಗಳಾಂತ್ಯದಲ್ಲಿ ದೋಹಾದಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಶ್ಯ ಕಪ್ಗಾಗಿ ಜಿತೇಶ್ ಶರ್ಮಾ ನಾಯಕತ್ವದ ಭಾರತ ‘ಎ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ‘ಎ’ ತಂಡವು ಒಮಾನ್, ಯುಎಇ ಹಾಗೂ ಪಾಕಿಸ್ತಾನ ‘ಎ’ ತಂಡಗಳೊಂದಿಗೆ ‘ಬಿ’ ಗುಂಪಿನಲ್ಲಿದೆ. ‘ಎ’ ಗುಂಪಿನಲ್ಲಿ ಬಾಂಗ್ಲಾದೇಶ ‘ಎ’, ಹಾಂಕಾಂಗ್, ಅಫ್ಘಾನಿಸ್ತಾನ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳಿದ್ದು, ಏಶ್ಯ ಕಪ್ ಟೂರ್ನಿಯು ನ.14ರಿಂದ 23ರ ತನಕ ನಡೆಯುವುದು.

ತ್ರಿಕೋನ ಸರಣಿಯು ನ.17ರಂದು ಭಾರತದ ಅಂಡರ್-19 ‘ಎ’ ಹಾಗೂ ಭಾರತದ ಅಂಡರ್-19 ‘ಬಿ’ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಲಿದೆ. ತ್ರಿಕೋನ ಸರಣಿಯನ್ನು ಬೆಂಗಳೂರಿನ ಬಿಸಿಸಿಐನ ಸಿಒಇನಲ್ಲಿ ಆಡಲಾಗುತ್ತದೆ.

ಭಾರತದ ಅಂಡರ್-19 ‘ಎ’ ತಂಡಕ್ಕೆ ವಿಹಾನ್ ಮಲ್ಹೋತ್ರಾ ನಾಯಕನಾಗಿದ್ದರೆ, ಅಭಿಜ್ಞಾ ಕುಂಡು ಉಪ ನಾಯಕ ಹಾಗೂ ವಿಕೆಟ್ಕೀಪರ್ ಆಗಿದ್ದಾರೆ.

ಭಾರತದ ಅಂಡರ್-19 ‘ಬಿ’ ತಂಡಕ್ಕೆ ಆರೊನ್ ಜಾರ್ಜ್ ನಾಯಕನಾಗಿದ್ದು, ವೇದಾಂತ ತ್ರಿವೇದಿ ಉಪ ನಾಯಕನಾಗಿದ್ದಾರೆ.

ಭಾರತದ ಅಂಡರ್-19 ‘ಎ’ ತಂಡ: ವಿಹಾನ್ ಮಲ್ಹೋತ್ರಾ(ನಾಯಕ), ಅಭಿಜ್ಞಾ ಕುಂಡು(ಉಪ ನಾಯಕ), ವಫಿ ಕಚ್ಚಿ, ವಂಶ್ ಆಚಾರ್ಯ, ವಿನೀತ್ ವಿ.ಕೆ., ಲಕ್ಷ್ಯ ರೈಚಂದಾನಿ, ಎ.ರಾಪೋಲ್, ಕಾನಿಷ್ಕ್ ಚೌಹಾಣ್, ಖಿಲನ್ ಎ. ಪಟೇಲ್, ಅನ್ಮೋಲ್ಜೀತ್ ಸಿಂಗ್, ಮುಹಮ್ಮದ್ ಎನಾನ್, ಹೆನಿಲ್ ಪಟೇಲ್, ಅಶುತೋಶ್ ಮಹಿದಾ, ಆದಿತ್ಯ ರಾವತ್. ಮುಹಮ್ಮದ್ ಮಲಿಕ್.

ಭಾರತದ ಅಂಡರ್-19 ‘ಬಿ’ ತಂಡ: ಆ್ಯರೊನ್ ಜಾರ್ಜ್(ನಾಯಕ), ವೇದಾಂತ ತ್ರಿವೇದಿ(ಉಪ ನಾಯಕ), ಯುವರಾಜ್ ಗೊಹಿಲ್, ಮೌಲಿಯರಾಜ್ಸಿನ್ಹಾ ಚಾವ್ಡಾ, ರಾಹುಲ್ ಕುಮಾರ್, ಹರ್ವಂಶ್ ಸಿಂಗ್, ಅನ್ವಯ್ ದ್ರಾವಿಡ್, ಆರ್.ಎಸ್. ಅಂಬರೀಶ್, ಬಿ.ಕೆ. ಕಿಶೋರ್, ನಮನ್ ಪುಷ್ಪಕ್, ಹೇಮಚುಡೇಶನ್, ಉದ್ದವ್ ಮೋಹನ್, ಇಶಾನ್ ಸೂಡ್, ದೀಪೇಶ್, ರೋಹಿತ್ ದಾಸ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X