Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬುಧವಾರ ಭಾರತ-ಐರ್ಲ್ಯಾಂಡ್ 3ನೇ ಟಿ20

ಬುಧವಾರ ಭಾರತ-ಐರ್ಲ್ಯಾಂಡ್ 3ನೇ ಟಿ20

ವಾರ್ತಾಭಾರತಿವಾರ್ತಾಭಾರತಿ22 Aug 2023 9:37 PM IST
share

ಡಬ್ಲಿನ್, ಆ. 22: ಪ್ರವಾಸಿ ಭಾರತ ಮತ್ತು ಆತಿಥೇಯ ಐರ್ಲ್ಯಾಂಡ್ ನಡುವಿನ ಟ್ವೆಂಟಿ20 ಕ್ರಿಕೆಟ್ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಬುಧವಾರ ಡಬ್ಲಿನ್ನಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತವು ಸರಣಿಯನ್ನು ಜಯಿಸಿದೆ. ಹಾಗಾಗಿ, ಕೊನೆಯ ಪಂದ್ಯವನ್ನೂ ಗೆದ್ದು ಸರಣಿಯನ್ನು ಕ್ಲೀನ್ಸ್ವೀಪ್ ಮಾಡುವತ್ತ ಭಾರತ ಮುಂದಾಗಿದೆ.

ಗಾಯಗೊಂಡು ಹನ್ನೊಂದು ತಿಂಗಳುಗಳ ಕಾಲ ತಂಡದಿಂದ ಹೊರಗಿದ್ದು, ಹಾಲಿ ಸರಣಿಗೆ ಭಾರತ ತಂಡಕ್ಕೆ ನಾಯಕನ ಪಾತ್ರದೊಂದಿಗೆ ಮರಳಿರುವ ಜಸ್ಪ್ರೀತ್ ಬುಮ್ರಾ ಉತ್ತಮ ನಿರ್ವಹಣೆಯನ್ನೇ ನೀಡಿದ್ದಾರೆ. ಹಾಗಾಗಿ, ಈಗ ಅವರು ಏಶ್ಯ ಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಜೊತೆಗೆ ತಂಡದ ಮೀಸಲು ಆಟಗಾರರ ಸಾಮಥ್ರ್ಯವನ್ನು ಪರಿಶೀಲಿಸುವ ಅವಕಾಶವೂ ಅವರಿಗೆ ಒದಗಿದೆ. ತಂಡದಲ್ಲಿರುವ ಹೆಚ್ಚುವರಿ ಆಟಗಾರರಾದ ಆವೇಶ್ ಖಾನ್, ಜಿತೇಶ್ ಶರ್ಮ ಮತ್ತು ಶಹಬಾಝ್ ಅಹ್ಮದ್ರಿಗೆ ಈ ಸರಣಿಯಲ್ಲಿ ಆಡುವ ಅವಕಾಶ ಈವರೆಗೆ ಸಿಕ್ಕಿಲ್ಲ. ಹಾಗಾಗಿ, ಭಾರತದ ಪಾಲಿಗೆ ಹೆಚ್ಚಿನ ಮಹತ್ವವಿಲ್ಲದ ಮೂರನೇ ಪಂದ್ಯದಲ್ಲಿ ಈ ಆಟಗಾರರ ಸಾಮಥ್ರ್ಯ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ಭಾರತೀಯ ತಂಡಾಡಳಿತ ತೆಗೆದುಕೊಳ್ಳಬಹುದಾಗಿದೆ.

ಸಂಜು ಸ್ಯಾಮ್ಸನ್ ಗೆ ವಿಶ್ರಾಂತಿ ನೀಡಿ, ಏಶ್ಯನ್ ಗೇಮ್ಸ್ಗೆ ಮುನ್ನ ಜಿತೇಶ್ಗೆ ಆಡುವ ಒಂದು ಅವಕಾಶವನ್ನು ನೀಡಲು ತಂಡಾಡಳಿತವು ನಿರ್ಧಾರ ತೆಗೆದುಕೊಳ್ಳದ ಹೊರತು, ಭಾರತೀಯ ಬ್ಯಾಟಿಂಗ್ ಸರದಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಕಳೆದ ಏಳು ಟ್ವೆಂಟಿ20 ಪಂದ್ಯಗಳಲ್ಲಿ ನಿಖರವಾಗಿ ಯಾರ್ಕರ್ಗಳನ್ನು ಬೌಲ್ ಮಾಡುವುದರಲ್ಲಿ ಅರ್ಶ್ದೀಪ್ ಸಿಂಗ್ ವಿಫಲರಾಗಿದ್ದಾರೆ. ತನ್ನ ಕೊರತೆಗಳನ್ನು ನೀಗಿಸಿಕೊಳ್ಳಲು ಅವರು ಇನ್ನೊಂದು ಅವಕಾಶವನ್ನು ಪಡೆದುಕೊಳ್ಳಲಿದ್ದಾರೆ.

ಡಬ್ಲಿನ್ನ ಮ್ಯಾಲಹೈಡ್ ಮೈದಾನವು ಬ್ಯಾಟರ್ಗಳಿಗೆ ಪೂರಕವಾದ ಪಿಚ್ ಆಗಿದೆ. ಆದರೂ, ಪಂದ್ಯದ ಕೊನೆಯಲ್ಲಿ ಅದು ತನ್ನ ವೇಗವನ್ನು ಕಳೆದುಕೊಂಡು ಬೌಲರ್ಗಳಿಗೆ ನೆರವು ನೀಡಬಹುದಾಗಿದೆ.

ಭಾರತ-ಐರ್ಲ್ಯಾಂಡ್ ಮೊದಲನೇ ಪಂದ್ಯದಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿರುವ ರಿಂಕು ಸಿಂಗ್, 21 ಎಸೆತಗಳಲ್ಲಿ 38 ರನ್ಗಳನ್ನು ಸಿಡಿಸಿದ್ದರು. ಅವರು ಭಾರತದ ಟ್ವೆಂಟಿ20 ತಂಡದಲ್ಲಿ ಖಾಯಂ ಸ್ಥಾನ ಪಡೆಯುವ ನಿರೀಕ್ಷೆ ಇದೆ.

ತಂಡಗಳು

ಭಾರತ: ಜಸ್ಪ್ರೀತ್ ಬುಮ್ರಾ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಜಿತೇಶ್ ಶರ್ಮ (ವಿಕೆಟ್ಕೀಪರ್), ಶಿವಮ್ ದುಬೆ, ವಾಶಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ ಕೃಷ್ಣ, ಅರ್ಶದೀಪ್ ಸಿಂಗ್, ಮುಕೇಶ್ ಕುಮಾರ್ ಮತ್ತು ಆವೇಶ್ ಖಾನ್.

ಐರ್ಲ್ಯಾಂಡ್: ಪೌಲ್ ಸ್ಟರ್ಲಿಂಗ್ (ನಾಯಕ), ಆ್ಯಂಡ್ರೂ ಬ್ಯಾಲ್ಬರ್ನೀ, ಮಾರ್ಕ್ ಅಡೇರ್, ರಾಸ್ ಅಡೇರ್, ಕರ್ಟಿಸ್ ಕ್ಯಾಂಫರ್, ಗ್ಯಾರತ್ ಡೆಲನಿ, ಜಾರ್ಜ್ ಡಾಕ್ರೆಲ್, ಫಿಯೋನ್ ಹ್ಯಾಂಡ್, ಜೋಶ್ ಲಿಟಲ್, ಬಾರಿ ಮೆಕಾರ್ತಿ, ಹ್ಯಾರಿ ಟೆಕ್ಟರ್, ಲೊರ್ಕನ್ ಟಕರ್, ತಿಯೊ ವಾನ್ ವೋರ್ಕೊಮ್, ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X