Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶಿಸ್ತುಕ್ರಮದ ಕಾರಣ ಇಶಾನ್, ಶ್ರೇಯಸ್...

ಶಿಸ್ತುಕ್ರಮದ ಕಾರಣ ಇಶಾನ್, ಶ್ರೇಯಸ್ ಅಫ್ಘಾನಿಸ್ತಾನ ವಿರುದ್ಧ ಟಿ-20 ಸರಣಿಗೆ ಆಯ್ಕೆಯಾಗಿಲ್ಲ: ವರದಿ

ವಾರ್ತಾಭಾರತಿವಾರ್ತಾಭಾರತಿ10 Jan 2024 10:37 PM IST
share
ಶಿಸ್ತುಕ್ರಮದ ಕಾರಣ ಇಶಾನ್, ಶ್ರೇಯಸ್ ಅಫ್ಘಾನಿಸ್ತಾನ ವಿರುದ್ಧ ಟಿ-20 ಸರಣಿಗೆ ಆಯ್ಕೆಯಾಗಿಲ್ಲ: ವರದಿ

ಹೊಸದಿಲ್ಲಿ: ಅಫ್ಘಾನಿಸ್ತಾನ ವಿರುದ್ಧ ಜನವರಿ 11ರಿಂದ ಮೊಹಾಲಿಯಲ್ಲಿ ಆರಂಭವಾಗಲಿರುವ ಟಿ-20 ಸರಣಿಯಲ್ಲಿ ವಿಕೆಟ್‌ಕೀಪರ್ ಇಶಾನ್ ಕಿಶನ್ ಹಾಗೂ ಮಧ್ಯಮ ಸರದಿಯ ಬ್ಯಾಟರ್ ಶ್ರೇಯಸ್ ಅಯ್ಯರ್ ಅನುಪಸ್ಥಿತಿಯು ಎದ್ದು ಕಾಣುತ್ತಿದೆ.

ಈ ಇಬ್ಬರನ್ನು ಟಿ-20 ಸರಣಿಗೆ ಆಯ್ಕೆ ಮಾಡದೇ ಇರುವುದು ಹಲವರನ್ನು ಅಚ್ಚರಿಗೊಳಿಸಿತ್ತು. ಟಿ-20 ತಂಡ ಪ್ರಕಟವಾದ ನಂತರ ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹ ಹರಡಿತ್ತು.

ಟಿ-20 ತಂಡದಿಂದ ಹೊರಗುಳಿಯುವ ಮುಂಚೆ ಇಶಾನ್ ವೈಯಕ್ತಿಕ ಕಾರಣವನ್ನು ಉಲ್ಲೇಖಿಸಿ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಯಿಂದ ಹೊರಗುಳಿದ್ದರು. ಶ್ರೇಯಸ್ ಟೆಸ್ಟ್ ಸರಣಿಯ 4 ಇನಿಂಗ್ಸ್‌ಗಳಲ್ಲಿ ಕೇವಲ 41 ರನ್ ಗಳಿಸಿ ಘೋರ ವೈಫಲ್ಯ ಕಂಡಿದ್ದರು.

ಬಂಗಾಳದ ದಿನಪತ್ರಿಕೆ ಆನಂದ್ ಬಝಾರ್ ಪತ್ರಿಕೆಯಲ್ಲಿ ಬಂದಿರುವ ವರದಿಯ ಪ್ರಕಾರ ಶಿಸ್ತುಕ್ರಮದ ಕಾರಣಕ್ಕೆ ಇಶಾನ್ ಹಾಗೂ ಶ್ರೇಯಸ್ ಅಯ್ಯರ್ ಅವರನ್ನು ಅಫ್ಘಾನಿಸ್ತಾನದ ವಿರುದ್ಧದ ಟಿ-20 ಸರಣಿಯಿಂದ ಹೊರಗಿಡಲಾಗಿದೆ.ಟೆಸ್ಟ್ ಸರಣಿಯಿಂದ ದೂರ ಉಳಿದಿದ್ದ ಇಶಾನ್ ದುಬೈನಲ್ಲಿ ಭಾರತದ ಮಾಜಿ ನಾಯಕ ಎಂ.ಎಸ್. ಧೋನಿ ಜೊತೆ ಪಾರ್ಟಿಯಲ್ಲಿ ಕಾಣಿಸಿಕೊಂಡಿರುವುದು ಆಯ್ಕೆಗಾರರ ಆಕ್ರೋಶಕ್ಕೆ ಕಾರಣವಾಗಿದೆ.ಆ ನಂತರ ಇಶಾನ್ ಜನಪ್ರಿಯ ಟಿವಿ ಕ್ವಿಝ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಇಶಾನ್ ಅವರ ವರ್ತನೆಯು ಟಿ-20 ವಿಶ್ವಕಪ್ ತಂಡದಿಂದ ಹೊರಗುಳಿಯುವಂತೆ ಮಾಡಿರಬಹುದು ಎಂದು ವರದಿ ತಿಳಿಸಿದೆ.

ಮತ್ತೊಂದೆಡೆ ಆಯ್ಕೆಗಾರರು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ವೇಳೆ ಶ್ರೇಯಸ್ ಅವರ ಹೊಡೆತದ ಆಯ್ಕೆಯ ಬಗ್ಗೆ ಬೇಸರಗೊಂಡಿದ್ದಾರೆ. ಸ್ವದೇಶಕ್ಕೆ ವಾಪಸಾದ ನಂತರ ಮುಂಬೈ ರಣಜಿ ಟ್ರೋಫಿಯಲ್ಲಿ ಶ್ರೇಯಸ್ ಆಡಬೇಕೆಂದು ಅವರು ಬಯಸಿದ್ದರು. ಆದರೆ 29ರ ಹರೆಯದ ಶ್ರೇಯಸ್ ತನಗೆ ವಿಶ್ರಾಂತಿ ಬೇಕೆಂದು ಕೇಳಿದ್ದಾರೆ. ಶ್ರೇಯಸ್ ಬೇಡಿಕೆಯು ಆಯ್ಕೆಗಾರರಿಗೆ ಇಷ್ಟವಾಗಿಲ್ಲ. ಹೀಗಾಗಿ ಅವರನ್ನು ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ಕೈಬಿಟ್ಟಿದ್ದಾರೆ. ಶ್ರೇಯಸ್ ನಂತರ ತಾನು ಆಯ್ಕೆಗೆ ಲಭ್ಯವಿದ್ದೇನೆ ಎಂದು ಹೇಳಿದ್ದು, ಅವರನ್ನು ಜ.12ರಿಂದ ಆರಂಭವಾಗುವ ಆಂಧ್ರಪ್ರದೇಶ ವಿರುದ್ದದ ರಣಜಿ ಪಂದ್ಯಕ್ಕೆ ಮುಂಬೈ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಟೆಸ್ಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟನ್ನು ಗಂಭೀರವಾಗಿ ತೆಗೆದುಕೊಳ್ಳದ ಆಟಗಾರರ ವಿರುದ್ಧ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X