Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿವಾದಿತ ಅನಿಲ ಕ್ಷೇತ್ರದ ಮೇಲೆ ಸಂಪೂರ್ಣ...

ವಿವಾದಿತ ಅನಿಲ ಕ್ಷೇತ್ರದ ಮೇಲೆ ಸಂಪೂರ್ಣ ಹಕ್ಕು ಸಾಧಿಸಿದ ಕುವೈಟ್, ಸೌದಿ

ವಾರ್ತಾಭಾರತಿವಾರ್ತಾಭಾರತಿ3 Aug 2023 10:35 PM IST
share
ವಿವಾದಿತ ಅನಿಲ ಕ್ಷೇತ್ರದ ಮೇಲೆ ಸಂಪೂರ್ಣ ಹಕ್ಕು ಸಾಧಿಸಿದ ಕುವೈಟ್, ಸೌದಿ

ರಿಯಾದ್: ಇರಾನ್ ಕೂಡಾ ಹಕ್ಕು ಸಾಧಿಸುತ್ತಿರುವ ವಿವಾದಿತ ಅನಿಲ ಕ್ಷೇತ್ರದ ಮೇಲೆ ತಾವು ಮಾತ್ರ ಸಂಪೂರ್ಣ ಸಾರ್ವಭೌಮ ಹಕ್ಕನ್ನು ಹೊಂದಿರುವುದಾಗಿ ಸೌದಿ ಅರೆಬಿಯಾ ಮತ್ತು ಕುವೈಟ್ ಗುರುವಾರ ಹೇಳಿವೆ.

ಇರಾನ್‍ನಲ್ಲಿ ಅರಾಷ್, ಕುವೈಟ್ ಮತ್ತು ಸೌದಿಯಲ್ಲಿ ಡೊರ್ರಾ ಎಂದು ಹೆಸರಿಸಲಾದ ಈ ವಿವಾದಿತ ಅನಿಲ ಕ್ಷೇತ್ರವು ಇರಾನ್, ಕುವೈಟ್ ಮತ್ತು ಸೌದಿ ಅರೆಬಿಯಾ ನಡುವಿನ ತಟಸ್ಥ ವಲಯದಲ್ಲಿರುವ ಕಡಲಾಚೆಯ ನೈಸರ್ಗಿಕ ಅನಿಲ ಕ್ಷೇತ್ರವಾಗಿದೆ. ಇದಕ್ಕೆ ಸಂಬಂಧಿಸಿ 1960ರಿಂದಲೂ ವಿವಾದ ತಲೆದೋರಿದೆ. 1960ರಲ್ಲಿ ಈ ಅನಿಲ ಕ್ಷೇತ್ರದಲ್ಲಿ ಉತ್ಪಾದನೆ ಆರಂಭಿಸಲು ಇರಾನ್ ಮತ್ತು ಕುವೈಟ್ ಎರಡೂ ದೇಶಗಳು ವಿಭಿನ್ನ ಸಂಸ್ಥೆಗಳಿಗೆ ಅನುಮತಿ ನೀಡುವುದರೊಂದಿಗೆ ವಿವಾದ ಉಲ್ಬಣಿಸಿತ್ತು. ಈ ಅನಿಲ ಕ್ಷೇತ್ರವನ್ನು ಜಂಟಿಯಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ಕಳೆದ ವರ್ಷ ಕುವೈಟ್ ಮತ್ತು ಸೌದಿ ಅರೆಬಿಯಾ ಒಪ್ಪಂದ ಮಾಡಿಕೊಂಡಿವೆ. ಇದು ಅಕ್ರಮ ಎಂದು ಇರಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಶ್ರೀಮಂತ ನೈಸರ್ಗಿಕ ಅನಿಲ ಸಂಪತ್ತಿನ ಕ್ಷೇತ್ರದ ಗಡಿ ಗುರುತಿಸುವಿಕೆಗಾಗಿ ಇರಾನ್ ಮತ್ತು ಕುವೈಟ್ ಮಧ್ಯೆ ನಡೆದ ಮಾತುಕತೆ ವಿಫಲವಾಗಿದೆ. ಈ ಮಧ್ಯೆ, ಒಪ್ಪಂದ ಏರ್ಪಡದಿದ್ದರೂ ಅನಿಲ ಹೊರತೆಗೆಯುವ ಕಾರ್ಯ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕಳೆದ ರವಿವಾರ ಇರಾನ್‍ನ ತೈಲ ಸಚಿವರು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಯಾಗಿ `ಈ ಕ್ಷೇತ್ರದಿಂದ ನೈಸರ್ಗಿಕ ಅನಿಲವನ್ನು ಹೊರತೆಗೆಯುವ ಸಂಪೂರ್ಣ ಸಾರ್ವಭೌಮ ಅಧಿಕಾರ ತಮಗೆ ಮಾತ್ರ ಇದೆ . ಸಮಸ್ಯೆಯನ್ನು ಇತ್ಯರ್ಥಪಡಿಸುವ ಕ್ರಮವಾಗಿ ಕಡಲ ಗಡಿಯನ್ನು ಗುರುತಿಸಲು ಮಾತುಕತೆಗೆ ಬರುವಂತೆ ಇರಾನ್‍ಗೆ ಮತ್ತೊಮ್ಮೆ ಆಹ್ವಾನ ನೀಡುತ್ತಿದ್ದೇವೆ' ಎಂದು ಗುರುವಾರ ಕುವೈಟ್ ಮತ್ತು ಸೌದಿ ಅರೆಬಿಯಾ ಹೇಳಿಕೆ ನೀಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X