Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಹಿಳಾ ವಿಶ್ವಕಪ್‌ನಲ್ಲಿ ಮಿಂಚಿದ ಮಂಗಳೂರು...

ಮಹಿಳಾ ವಿಶ್ವಕಪ್‌ನಲ್ಲಿ ಮಿಂಚಿದ ಮಂಗಳೂರು ಮೂಲದ ಜೆಮಿಮಾ ರೊಡ್ರಿಗಸ್

ವಾರ್ತಾಭಾರತಿವಾರ್ತಾಭಾರತಿ31 Oct 2025 11:41 PM IST
share
ಮಹಿಳಾ ವಿಶ್ವಕಪ್‌ನಲ್ಲಿ ಮಿಂಚಿದ ಮಂಗಳೂರು ಮೂಲದ ಜೆಮಿಮಾ ರೊಡ್ರಿಗಸ್
ಶತಕ ಸಿಡಿಸಿ ಭಾರತವನ್ನು ಫೈನಲ್ ಅಂಗಳಕ್ಕೆ ಕೊಂಡೊಯ್ದ ಬ್ಯಾಟರ್

ಮುಂಬೈ: ವಿಶ್ವಕಪ್ ಸೆಮಿಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಶತಕ ಬಾರಿಸಿ ಭಾರತವನ್ನು ಫೈನಲ್‌ ಅಂಗಳಕ್ಕೆ ತಲುಪಿಸಿದ ಜೆಮಿಮಾ ರೊಡ್ರಿಗಸ್ ಬಗ್ಗೆ ದೇಶದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನ ಭಂಡಪ್‌ನಲ್ಲಿ ಜನಿಸಿದ ಜೆಮಿಮಾ ಅವರು ಮಂಗಳೂರು ಮೂಲದವರು. ಜೆಮಿಮಾ ಅವರ ಅಜ್ಜಿ ಜೋಸೆಫಿನ್ ರೊಡ್ರಿಗಸ್ ಬಂಟ್ವಾಳ ತಾಲೂಕಿನ ಅಮ್ಮೆಂಬಳದವರು. ತಂದೆ ಐವನ್‌-ತಾಯಿ ಲವಿಟಾ ರೊಡ್ರಿಗಸ್‌ ಇಬ್ಬರೂ ಮಂಗಳೂರು ಕ್ರಿಶ್ಚಿಯನ್ ಕುಟುಂಬದಿಂದ ಬಂದವರು.

ಗುರುವಾರ ನವಿ ಮುಂಬೈಯ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಜೆಮಿಮಾ 134 ಎಸೆತಗಳಲ್ಲಿ ಅಜೇಯ 127 ರನ್ ಬಾರಿಸಿ ಭಾರತ ತಂಡವನ್ನು ವಿಜಯದ ದಡಕ್ಕೇರಿಸಿದರು. ಭಾರತವು 339 ರನ್‌ಗಳ ಭಾರೀ ಗುರಿಯನ್ನು ಬೆನ್ನಟ್ಟಿ ಐತಿಹಾಸಿಕ ಗೆಲುವು ಸಾಧಿಸಿತು. ಈ ಇನ್ನಿಂಗ್ಸ್ ಭಾರತದ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಅತಿದೊಡ್ಡ ಯಶಸ್ವಿ ಚೇಸ್‌ಗಳಲ್ಲಿ ಒಂದು ಎಂದು ದಾಖಲಾಗಿದೆ.

ಈ ಗೆಲುವಿನಿಂದ ಜೆಮಿಮಾ ಕೇವಲ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನಷ್ಟೇ ಅಲ್ಲ, ಕೋಟ್ಯಂತರ ಅಭಿಮಾನಿಗಳ ಹೃದಯವನ್ನೂ ಗೆದ್ದಿದ್ದಾರೆ. ಒಮ್ಮೆ ರೀಲ್‌ಗಳ ರಾಣಿ ಎಂದು ಟೀಕೆಗೆ ಗುರಿಯಾಗಿದ್ದ ಜೆಮಿಮಾ, ಈಗ ರನ್‌ಗಳ ರಾಣಿಯಾಗಿ ಪೂರ್ವಾಗ್ರಹಕ್ಕೆ ತಕ್ಕ ಉತ್ತರ ನೀಡಿದ್ದಾರೆ.

ಬಾಲ್ಯದಲ್ಲಿ ಹಾಕಿ ಮತ್ತು ಕ್ರಿಕೆಟ್ ಎರಡರಲ್ಲೂ ಜೆಮಿಮಾ ಆಸಕ್ತಿ ತೋರಿದ್ದರು. ಮುಂಬೈನ 17 ಹಾಗೂ 19 ವರ್ಷ ವಯೋಮಾನದ ಹಾಕಿ ತಂಡಗಳಲ್ಲಿ ಪ್ರತಿನಿಧಿಸಿದ್ದ ಜೆಮಿಮಾ, ಎರಡೂ ಕ್ರೀಡೆಗಳಲ್ಲಿ ಸ್ಪರ್ಧಾತ್ಮಕ ಮಟ್ಟದಲ್ಲಿ ಮೆರೆದ ಅಪರೂಪದ ಮಹಿಳಾ ಕ್ರೀಡಾಪಟುಗಳಲ್ಲಿ ಒಬ್ಬರು ಎನ್ನುವುದೇ ವಿಶೇಷ.

ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಶತಕದ ಬಳಿಕ ಜೆಮಿಮಾ ಸಂಭ್ರಮಾಚರಣೆ ಮಾಡಿರಲಿಲ್ಲ. ಈ ಕುರಿತು ಕೇಳಿದಾಗ, 'ಇಂದು ನನ್ನ ಅರ್ಧಶತಕ ಅಥವಾ ಶತಕಕ್ಕೆ ಹೆಚ್ಚಿನ ಮಹತ್ವ ಇರಲಿಲ್ಲ. ಭಾರತಕ್ಕಾಗಿ ಪಂದ್ಯ ಗೆಲ್ಲಿಸುವುದು ನನ್ನ ಗುರಿಯಾಗಿತ್ತು' ಎಂದು ಹೇಳಿದ್ದಾರೆ. ಆ ಮೂಲಕ ಮೂರನೇ ಕ್ರಮಾಂಕಕ್ಕೆ ಬಡ್ತಿ ಪಡೆದಿದ್ದ ಜೆಮಿಮಾ, ತಮ್ಮ ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್ ಕಟ್ಟುವ ಮೂಲಕ ಭಾರತಕ್ಕೆ ಸ್ಮರಣೀಯ ಗೆಲುವು ಒದಗಿಸಿಕೊಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X