Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನಕ್ಕೆ ಭಾರತೀಯ ಡೇವಿಸ್ ಕಪ್...

ಪಾಕಿಸ್ತಾನಕ್ಕೆ ಭಾರತೀಯ ಡೇವಿಸ್ ಕಪ್ ತಂಡದ ಪ್ರಯಾಣ ; ಕ್ರೀಡಾ ಸಚಿವಾಲಯದ ಸಲಹೆ ಕೇಳಿದ ಎಐಟಿಎ

ವಾರ್ತಾಭಾರತಿವಾರ್ತಾಭಾರತಿ28 Dec 2023 12:00 AM IST
share

ಹೊಸದಿಲ್ಲಿ : ಪಾಕಿಸ್ತಾನದ ವಿರುದ್ಧ ಡೇವಿಸ್ ಕಪ್ ವರ್ಲ್ಡ್ ಗ್ರೂಪ್ ವನ್ ಪ್ಲೇ-ಆಫ್ ಪಂದ್ಯಗಳಲ್ಲಿ ಆಡಲು ಭಾರತ ನೆರೆಯ ದೇಶಕ್ಕೆ ಹೋಗುವ ವಿಷಯದಲ್ಲಿ ಅಖಿಲ ಭಾರತ ಟೆನಿಸ್ ಅಸೋಸಿಯೇಶನ್ (ಎಐಟಿಎ) ಮಂಗಳವಾರ ಕ್ರೀಡಾ ಸಚಿವಾಲಯದ ಸಲಹೆಯನ್ನು ಕೋರಿದೆ.

ಡೇವಿಸ್ ಕಪ್ ಪ್ಲೇ-ಆಫ್ ಪಂದ್ಯಗಳು ಮುಂದಿನ ವರ್ಷದ ಫೆಬ್ರವರಿ 3 ಮತ್ತು 4ರಂದು ಇಸ್ಲಾಮಾಬಾದ್ನಲ್ಲಿರುವ ಪಾಕಿಸ್ತಾನ್ ಸ್ಪೋಟ್ರ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ.

ಡೇವಿಸ್ ಕಪ್ ಪ್ಲೇ-ಆಫ್ ಪಂದ್ಯಗಳನ್ನು ತಟಸ್ಥ ಸ್ಥಳವೊಂದಕ್ಕೆ ವರ್ಗಾಯಿಸುವಂತೆ ಕೋರುವ ಎಐಟಿಎ ಮನವಿಯನ್ನು ಅಂತರ್ರಾಷ್ಟ್ರೀಯ ಟೆನಿಸ್ ಫೆಡರೇಶನ್ ನ್ಯಾಯಮಂಡಳಿಯು ತಿರಸ್ಕರಿಸಿದ ಬಳಿಕ ಈ ಬೆಳವಣಗೆ ನಡೆದಿದೆ.

“ಪಾಕಿಸ್ತಾನಕ್ಕೆ ಪ್ರಯಾಣಿಸುವುದಕ್ಕೆ ಸಂಬಂಧಿಸಿದ ನೀತಿ ಏನು ಎಂಬ ವಿಷಯದಲ್ಲಿ ನಾವು ಕ್ರೀಡಾ ಸಚಿವಾಲಯದ ಸಲಹೆಯನ್ನು ಕೋರಿದ್ದೇವೆ. ಡೇವಿಸ್ ಕಪ್ ಟೆನಿಸ್ನ ವಿಶ್ವಕಪ್ ಇದ್ದಂತೆ. ನಾವು ಕ್ರೀಡಾ ಸಚಿವಾಲಯದ ಉತ್ತರಕ್ಕಾಗಿ ಕಾಯುತ್ತಿದ್ದೇವೆ’’ ಎಂದು ಎಐಟಿಎ ಮಹಾಕಾರ್ಯದರ್ಶಿ ಅನಿಲ್ ದೂಪರ್ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದರು.

ಇದಕ್ಕೂ ಮೊದಲು, ಡೇವಿಸ್ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನಗಳು ಮುಖಾಮುಖಿಯಾಗಿದ್ದು 2019ರಲ್ಲಿ. ಆ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಬೇಕಾಗಿದ್ದವು. ಯಾಕೆಂದರೆ, ಅದಕ್ಕೂ ಹಿಂದಿನ ಮುಖಾಮುಖಿ 2006ರಲ್ಲಿ ಮುಂಬೈಯಲ್ಲಿ ನಡೆದಿತ್ತು.

ಆದರೆ, 2019ರಲ್ಲಿ ಆ ಪಂದ್ಯಗಳನ್ನು ತಟಸ್ಥ ಸ್ಥಳ ಕಝಖ್ಸ್ತಾನಕ್ಕೆ ವರ್ಗಾಯಿಸುವಲ್ಲಿ ಎಐಟಿಎ ಯಶಸ್ವಿಯಾಗಿತ್ತು. ಎರಡು ದೇಶಗಳ ನಡುವೆ ರಾಜಕೀಯ ಉದ್ವಿಗ್ನತೆ ನೆಲೆಸಿದೆ ಎಂಬ ಆಧಾರದಲ್ಲಿ ಪಂದ್ಯಗಳನ್ನು ವರ್ಗಾಯಿಸುವಲ್ಲಿ ಅದು ಸಫಲವಾಗಿತ್ತು.

ಭಾರತೀಯ ಡೇವಿಸ್ ಕಪ್ ತಂಡವು ಕೊನೆಯ ಬಾರಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದು 1964ರಲ್ಲಿ. ಲಾಹೋರ್ನಲ್ಲಿ ನಡೆದ ಪಂದ್ಯಗಳನ್ನು ಭಾರತದ ಅಖ್ತರ್ ಅಲಿ, ಪ್ರೇಮ್ಜಿತ್ ಲಾಲ್ ಮತ್ತು ಎಸ್.ಪಿ. ಮಿಶ್ರಾ 4-0 ಅಂತರದಿಂದ ಗೆದ್ದಿದ್ದರು.

ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದು 2006ರಲ್ಲಿ. ಆದರೆ ಆ ಬಳಿಕ ನೆರೆಯ ದೇಶಗಳು ರಾಜತಾಂತ್ರಿಕ ಉದ್ವಿಗ್ನತೆಗಳ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X