Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರುಣ್ ನಾಯರ್, ಅಕ್ಷಯ್ ವಾಡ್ಕರ್ ಅರ್ಧಶತಕ

ಕರುಣ್ ನಾಯರ್, ಅಕ್ಷಯ್ ವಾಡ್ಕರ್ ಅರ್ಧಶತಕ

ರಣಜಿ ಫೈನಲ್: ವಿದರ್ಭ ಗೆಲುವಿಗೆ ಇನ್ನೂ 290 ರನ್ ಅಗತ್ಯ

ವಾರ್ತಾಭಾರತಿವಾರ್ತಾಭಾರತಿ13 March 2024 9:45 PM IST
share

ಮುಂಬೈ: ಕರುಣ್ ನಾಯರ್(74 ರನ್, 220 ಎಸೆತ) ಹಾಗೂ ಅಕ್ಷಯ್ ವಾಡ್ಕರ್(ಔಟಾಗದೆ 56, 91 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ವಿದರ್ಭ ಕ್ರಿಕೆಟ್ ತಂಡ ಮುಂಬೈ ವಿರುದ್ಧ ಇಲ್ಲಿ ನಡೆಯುತ್ತಿರುವ ರಣಜಿ ಫೈನಲ್ ಪಂದ್ಯದ ಗೆಲುವಿಗಾಗಿ ತನ್ನ ಹೋರಾಟ ಮುಂದುವರಿಸಿದೆ.

ಗೆಲ್ಲಲು 538 ರನ್ ಗುರಿ ಬೆನ್ನಟ್ಟುತ್ತಿರುವ ವಿದರ್ಭ ಬುಧವಾರ ನಾಲ್ಕನೇ ದಿನದಾಟದಂತ್ಯಕ್ಕೆ 5 ವಿಕೆಟ್ಗಳ ನಷ್ಟಕ್ಕೆ 248 ರನ್ ಗಳಿಸಿದೆ. ಐದನೇ ಹಾಗೂ ಕೊನೆಯ ದಿನವಾದ ಗುರುವಾರ ಗೆಲ್ಲಲು ಇನ್ನೂ 290 ರನ್ ಗಳಿಸುವ ಅಗತ್ಯವಿದೆ. ನಾಯಕ ಅಕ್ಷಯ್ ವಾಡ್ಕರ್(ಔಟಾಗದೆ 56, 91 ಎಸೆತ) ಹಾಗೂ ಹರ್ಷ್ ದುಬೆ(ಔಟಾಗದೆ 11, 10 ಎಸೆತ) 6ನೇ ವಿಕೆಟ್ಗೆ ಮುರಿಯದ ಜೊತೆಯಾಟದಲ್ಲಿ 25 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

ವಿದರ್ಭ ತಂಡ ವಿಕೆಟ್ ನಷ್ಟವಿಲ್ಲದೆ 10 ರನ್ನಿಂದ ತನ್ನ ಎರಡನೇ ಇನಿಂಗ್ಸ್ ಮುಂದುವರಿಸಿತು. ಇನಿಂಗ್ಸ್ ಆರಂಭಿಸಿದ ಅಥರ್ವ ಟೈಡ್ (32 ರನ್, 64 ಎಸೆತ) ಹಾಗೂ ಧ್ರುವ್ ಶೋರೆ(28 ರನ್, 50 ಎಸೆತ)ಮೊದಲ ವಿಕೆಟ್ಗೆ 64 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು.

4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕರುಣ್ ನಾಯರ್ ತಾಳ್ಮೆಯ ಇನಿಂಗ್ಸ್( 74 ರನ್, 220 ಎಸೆತ, 3 ಬೌಂಡರಿ) ಆಡಿ ತಂಡದ ಹೋರಾಟಕ್ಕೆ ಶಕ್ತಿ ತುಂಬಿದರು. ಮಾತ್ರವಲ್ಲ ಅಮನ್ ಮೊಖಾಡೆ ( 32 ರನ್, 78 ಎಸೆತ) ಅವರೊಂದಿಗೆ 3ನೇ ವಿಕೆಟ್ಗೆ 54 ರನ್ ಹಾಗೂ ವಾಡ್ಕರ್ ಜೊತೆಗೆ 5ನೇ ವಿಕೆಟ್ಗೆ 90 ರನ್ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದಾರೆ..

ಮುಂಬೈ ಪರ ತನುಷ್ ಕೋಟ್ಯಾನ್ ಹಾಗೂ ಮುಶೀರ್ ಖಾನ್ ತಲಾ ಎರಡು ವಿಕೆಟ್ಗಳನ್ನು ಕಬಳಿಸಿದ್ದಾರೆ. ಶಮ್ಸ್ ಮುಲಾನಿ ಒಂದು ವಿಕೆಟ್ ಪಡೆದಿದ್ದಾರೆ.

3ನೇ ದಿನದಾಟವಾದ ಮಂಗಳವಾರ ಮುಶೀರ್ ಖಾನ್ ಶತಕದ ನೆರವಿನಿಂದ ಮುಂಬೈ ತಂಡ 2ನೇ ಇನಿಂಗ್ಸ್ನಲ್ಲಿ 418 ರನ್ ಗಳಿಸಿತು. ವಿದರ್ಭ ತಂಡಕ್ಕೆ ರಣಜಿ ಫೈನಲ್ ಗೆಲ್ಲಲು 538 ರನ್ ಕಠಿಣ ಗುರಿ ನೀಡಿತು.

ಪಂದ್ಯದ ಮೊದಲ ದಿನದಾಟದಲ್ಲಿ 13 ವಿಕೆಟ್ಗಳು ಪತನಗೊಂಡಾಗ ಪಂದ್ಯವು ಸಂಪೂರ್ಣ ಐದು ದಿನ ನಡೆಯುವ ಕುರಿತು ಸಂಶಯವಿತ್ತು. ಆದರೆ ಕಠಿಣ ಗುರಿ ಬೆನ್ನಟ್ಟುತ್ತಿರುವ ವಿದರ್ಭ ತಂಡ ಕರುಣ್ ನಾಯರ್ ಹಾಗೂ ಅಕ್ಷಯ್ ವಾಡ್ಕರ್ ಅವರ ಹೋರಾಟದ ಸಹಾಯದಿಂದ ಪಂದ್ಯವನ್ನು ಕೊನೆಯ ದಿನವಾದ ಗುರುವಾರಕ್ಕೆ ವಿಸ್ತರಿಸಿದ್ದಾರೆ. ಆದರೆ ಈಗಲೂ ಮುಂಬೈ ತಂಡ 42ನೇ ಬಾರಿ ರಣಜಿ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿ ಉಳಿದುಕೊಂಡಿದೆ.

ಕೊನೆಯ ದಿನದಾಟದಲ್ಲಿ ವಾಡ್ಕರ್ ತನ್ನ ತಂಡವನ್ನು ಗೆಲುವಿನ ದಡ ಸೇರಿಸುತ್ತಾರೆಯೇ ಎಂದು ಗುರುವಾರ ಗೊತ್ತಾಗಲಿದೆ.

ಸಂಕ್ಷಿಪ್ತ ಸ್ಕೋರ್

ಮುಂಬೈ ಮೊದಲ ಇನಿಂಗ್ಸ್: 224 ರನ್

ವಿದರ್ಭ ಮೊದಲ ಇನಿಂಗ್ಸ್: 105 ರನ್

ಮುಂಬೈ ಎರಡನೇ ಇನಿಂಗ್ಸ್: 418 ರನ್

ವಿದರ್ಭ ಎರಡನೇ ಇನಿಂಗ್ಸ್: 248/5

(ಕರುಣ್ ನಾಯರ್ 74, ಅಕ್ಷಯ್ ವಾಡ್ಕರ್ ಔಟಾಗದೆ 56, ಅಥರ್ವ ಟೈಡ್ 32, ಅಮನ್ ಮೊಖಾಡೆ 32, ತನುಷ್ ಕೋಟ್ಯಾನ್ 2-56, ಮುಶೀರ್ ಖಾನ್ 2-38)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X