Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ...

ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

ವಾರ್ತಾಭಾರತಿವಾರ್ತಾಭಾರತಿ21 Aug 2024 10:08 PM IST
share
ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿ ಇತಿಹಾಸ ನಿರ್ಮಿಸಿರುವ ಭಾರತೀಯ ಪುರುಷರ ಹಾಕಿ ತಂಡಕ್ಕೆ ಬುಧವಾರ ಭುವನೇಶ್ವರದಲ್ಲಿ ವೀರೋಚಿತ ಸ್ವಾಗತ ನೀಡಲಾಯಿತು.

ಐತಿಹಾಸಿಕ ಸಾಧನೆಯನ್ನು ಸಂಭ್ರಮಿಸಲು ಆಯೋಜಿಸಲಾಗಿದ್ದ ರೋಡ್ ಶೋನಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡವು ಭಾಗವಹಿಸಿದೆ.

ಭಾರತ ತಂಡವು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಹಾಕಿಯಲ್ಲಿ 52 ವರ್ಷಗಳ ನಂತರ ಮೊದಲ ಬಾರಿ ಸತತ ಪದಕಗಳನ್ನು ಜಯಿಸಿದೆ. 1972ರ ಮ್ಯೂನಿಚ್ ಗೇಮ್ಸ್‌ನಲ್ಲಿನ ಸಾಧನೆಯನ್ನು ಪುನರಾವರ್ತಿಸಿತು.

ಕಂಚಿನ ಪದಕದ ಪಂದ್ಯದಲ್ಲಿ ಭಾರತ ತಂಡ ಸ್ಪೇನ್ ವಿರುದ್ಧ 2-1 ಅಂತರದಿಂದ ಜಯ ಸಾಧಿಸಿ ಭಾರತೀಯ ಕ್ರೀಡಾ ಇತಿಹಾಸದಲ್ಲಿ ತನ್ನ ಸ್ಥಾನ ಭದ್ರಪಡಿಸಿಕೊಂಡಿತು.

ಹಾಕಿ ತಂಡಕ್ಕೆ ಭವ್ಯ ಸ್ವಾಗತ ನೀಡಿರುವುದಕ್ಕೆ ಹಾಕಿ ಇಂಡಿಯಾ ಅಧ್ಯಕ್ಷ ದಿಲಿಪ್ ಟಿರ್ಕಿ ಅವರು ಒಡಿಶಾ ಸರಕಾರ ಹಾಗೂ ಮುಖ್ಯಮಂತ್ರಿ ಮೋಹನ್ ಚರಣ್‌ಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಈ ಗೌರವಕ್ಕಾಗಿ ನಾನು ಒಡಿಶಾ ಸರಕಾರ ಹಾಗೂ ಮುಖ್ಯಮಂತ್ರಿ ಮೋಹನ್ ಚರಣ್‌ಗೆ ಧನ್ಯವಾದ ಸಲ್ಲಿಸುವೆ. ಹಾಕಿ ತಂಡಕ್ಕೆ ಇದೇ ಮೊದಲ ಬಾರಿ ಇಷ್ಟೊಂದು ಭವ್ಯ ಸ್ವಾಗತ ನೀಡಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದ ಹಾಕಿ ತಂಡವು ಸತತ ಪದಕಗಳನ್ನು ಜಯಿಸಿ ಇತಿಹಾಸ ನಿರ್ಮಿಸಿದೆ ಎಂದು ದಿಲಿಪ್ ಟಿರ್ಕಿ ಹೇಳಿದ್ದಾರೆ.

ರಾಜ್ಯದ ಆಟಗಾರ ಅಮಿತ್ ರೋಹಿದಾಸ್‌ಗೆ ಒಡಿಶಾ ಸರಕಾರವು 4 ಕೋ.ರೂ. ನಗದು ಬಹುಮಾನವನ್ನು ಘೋಷಿಸಿದೆ. ತಂಡದ ಪ್ರತಿ ಸದಸ್ಯರಿಗೆ ತಲಾ 15 ಲಕ್ಷ ರೂ. ಹಾಗೂ ಸಹಾಯಕ ಸಿಬ್ಬಂದಿ ತಲಾ 10 ಲಕ್ಷ ರೂ. ಬಹುಮಾನ ನೀಡಲಾಗಿದೆ.

ಭಾರತವು ಕೋಚ್ ಕ್ರೆಗ್ ಫುಲ್ಟನ್ ಮಾರ್ಗದರ್ಶನದಲ್ಲಿ ಪಂದ್ಯಾವಳಿಯುದ್ದಕ್ಕೂ ಪ್ರತಿರೋಧ ತೋರಿತ್ತು. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 8 ಪಂದ್ಯಗಳಲ್ಲಿ 10 ಗೋಲುಗಳನ್ನು ಗಳಿಸಿದ್ದ ಹರ್ಮನ್‌ಪ್ರೀತ್ ಸಿಂಗ್ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್ ಭಾರತದ ಪರ ಕೊನೆಯ ಪಂದ್ಯವಾಡಿದ್ದು, ತಂಡವು ಗೆಲುವಿನ ಸಂಭ್ರಮದಲ್ಲಿದ್ದಾಗ ಶ್ರೀಜೇಶ್ ಭಾವುಕರಾಗಿದ್ದಂತೆ ಕಂಡುಬಂದಿದ್ದರು. ಈ ಗೆಲುವು ಶ್ರೀಜೇಶ್‌ರ ವೃತ್ತಿಜೀವನದ ಮಹತ್ವದ ಮೈಲಿಗಲ್ಲಾಗಿದ್ದು, ಭಾರತದ ಶ್ರೀಮಂತ ಹಾಕಿ ಪರಂಪರೆಗೆ ಮತ್ತೊಂದು ಅಧ್ಯಾಯ ಸೇರ್ಪಡೆಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X