Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 91ನೇ ಅಂತರ್ರಾಷ್ಟ್ರೀಯ ಗೋಲು ಗಳಿಸಿದ...

91ನೇ ಅಂತರ್ರಾಷ್ಟ್ರೀಯ ಗೋಲು ಗಳಿಸಿದ ಸುನೀಲ್ ಚೆಟ್ರಿ

ಸ್ಯಾಫ್ ಚಾಂಪಿಯನ್ಶಿಪ್: ಭಾರತ ಸೆಮಿ ಫೈನಲ್ ಗೆ

ವಾರ್ತಾಭಾರತಿವಾರ್ತಾಭಾರತಿ25 Jun 2023 11:48 PM IST
share
91ನೇ ಅಂತರ್ರಾಷ್ಟ್ರೀಯ ಗೋಲು ಗಳಿಸಿದ ಸುನೀಲ್ ಚೆಟ್ರಿ

ಬೆಂಗಳೂರು: ಸ್ಯಾಫ್ ಚಾಂಪಿಯನ್ಶಿಪ್ನ ‘ಎ’ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಸುನೀಲ್ ಚೆಟ್ರಿ ನೇತೃತ್ವದ 8 ಬಾರಿಯ ಚಾಂಪಿಯನ್ ಭಾರತವು ಶನಿವಾರ ನೇಪಾಳದ ವಿರುದ್ಧ 2-0 ಅಂತರದಿಂದ ಗೆಲುವು ದಾಖಲಿಸಿದೆ.

2ರಲ್ಲಿ ಜಯ ಸಾಧಿಸಿ ಆರು ಅಂಕ ಗಳಿಸಿರುವ ಭಾರತ ‘ಎ’ ಗುಂಪಿನಿಂದ ಕುವೈಟ್ ಜೊತೆಗೆ ಸೆಮಿ ಫೈನಲ್ನಲ್ಲಿ ಸ್ಥಾನ ಪಡೆದುಕೊಂಡಿದೆ.

ಸುನೀಲ್ ಚೆಟ್ರಿ ಹಾಗೂ ಮಹೇಶ್ ಸಿಂಗ್ ದ್ವಿತೀಯಾರ್ಧದಲ್ಲಿ ಗೋಲು ಗಳಿಸಿ ಭಾರತವು ಸತತ 2ನೇ ಪಂದ್ಯ ಜಯಿಸಲು ನೆರವಾದರು.

ಇದಕ್ಕೂ ಮೊದಲು ಕುವೈತ್ ತಂಡ ಪಾಕಿಸ್ತಾನವನ್ನು 4-0 ಅಂತರದಿಂದ ಮಣಿಸಿ ಅಂತಿಮ-4ರ ಸುತ್ತು ತಲುಪಿದ ಮೊದಲ ತಂಡ ಎನಿಸಿಕೊಂಡಿತು. ಟೂರ್ನಿಯಲ್ಲಿ ಸ್ಪರ್ಧೆಯಿಂದ ಹೊರಬಿದ್ದಿರುವ ಪಾಕಿಸ್ತಾನ ಹಾಗೂ ನೇಪಾಳ ಮಂಗಳವಾರ ಮುಖಾಮುಖಿಯಾಗಲಿವೆ.

ಭಾರತವು ಜೂನ್ 27ರಂದು ತನ್ನ ಅಂತಿಮ ಗ್ರೂಪ್ ಪಂದ್ಯದಲ್ಲಿ ಕುವೈತ್ ತಂಡವನ್ನು ಎದುರಿಸಲಿದೆ.

ಸುನೀಲ್ ಚೆಟ್ರಿ 62ನೇ ನಿಮಿಷದಲ್ಲಿ ವೃತ್ತಿಜೀವನದಲ್ಲಿ 91ನೇ ಅಂತರ್ರಾಷ್ಟ್ರೀಯ ಗೋಲು ಗಳಿಸಿದರು. ಈ ಮೂಲಕ ಸಾರ್ವಕಾಲಿಕ ಅಗ್ರ ಅಂತರ್ರಾಷ್ಟ್ರೀಯ ಗೋಲ್ ಸ್ಕೋರರ್ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಮೊದಲಾರ್ಧದಲ್ಲಿ ಶಾಂತಚಿತ್ತದಿಂದ ಆಡಿದ ಚೆಟ್ರಿ ದ್ವಿತೀಯಾರ್ಧದಲ್ಲಿ ಮಹೇಶ್ ಸಿಂಗ್ ನೀಡಿದ ಕ್ರಾಸ್ನ ಲಾಭ ಪಡೆದು ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸಿದರು.

ಚೆಟ್ರಿ ಟೂರ್ನಮೆಂಟ್ನಲ್ಲಿ ನಾಲ್ಕನೇ ಗೋಲು ಗಳಿಸಿದರು. ಮಹೇಶ್ ಸಿಂಗ್ 70ನೇ ನಿಮಿಷದಲ್ಲಿ ಗೋಲು ಗಳಿಸಿ ಭಾರತಕ್ಕೆ 2-0 ಮುನ್ನಡೆ

ಒದಗಿಸಿಕೊಟ್ಟರು.

172ನೇ ರ್ಯಾಂಕಿನ ನೇಪಾಳ ಮೊದಲಾವಧಿಯ ಮಧ್ಯಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿತು. ಕೆಲವು ದಾಳಿಗಳ ಮೂಲಕ ಭಾರತದ ರಕ್ಷಣಾಕೋಟೆಗೆ ಸವಾಲೊಡ್ಡಿತು.

ಭಾರೀ ಮಳೆಯೊಂದಿಗೆ ಪಂದ್ಯ ಆರಂಭವಾಯಿತು. ಪಂದ್ಯ ಆರಂಭಕ್ಕೂ ಮೊದಲು ಮೈದಾನದ ಸಿಬ್ಬಂದಿ ಕಾರಂಜಿಗಳನ್ನು ಬಳಸಿದ್ದರಿಂದ ಮಳೆ ಆಗಮನದಿಂದಾಗಿ ಟರ್ಫ್ ಹೆಚ್ಚು ಜಾರುವಂತೆ ಮಾಡಿತು.

ಭಾರತ ಮೊದಲ 20 ನಿಮಿಷಗಳಲ್ಲಿ ಎರಡು ಬಾರಿ ಮುನ್ನಡೆಯ ಸಮೀಪ ತಲುಪಿತ್ತು. ಎರಡೂ ಸಂದರ್ಭದಲ್ಲಿ ಸಹಾಲ್ ಅಬ್ದುಲ್ ಸಮದ್ ಗೋಲು ಗಳಿಸುವಲ್ಲಿ ವಿಫಲರಾದರು.

ನೇಪಾಳ 18ನೇ ನಿಮಿಷದಲ್ಲಿ ಗೋಲು ಗಳಿಸುವ ವಿಶ್ವಾಸದಲ್ಲಿತ್ತು. ಅರಿಕ್ ಬಿಸ್ಟಾ ಭಾರತದ ಗೋಲ್ಕೀಪರ್ ಗುರುಪ್ರೀತ್ ಸಿಂಗ್ ಸಂಧುಗೆ ಕಠಿಣ ಸವಾಲೊಡ್ಡಿದರು. ಸಂಧು ಗೋಲು ದಾಖಲಾಗದಂತೆ ನೋಡಿಕೊಂಡರು.

ಇದೇ ವೇಳೆ, ಸ್ಯಾಫ್ ಚಾಂಪಿಯನ್ಶಿಪ್ನಲ್ಲಿ ಸೆಮಿ ಫೈನಲ್ ತಲುಪುವ ಪಾಕಿಸ್ತಾನದ ವಿಶ್ವಾಸಕ್ಕೆ ಹಿನ್ನಡೆಯಾಗಿದೆ. ಪಾಕ್ ತಂಡವು ಕುವೈತ್ ವಿರುದ್ಧ 0-4 ಅಂತರದಿಂದ ಸೋಲುಂಡಿದೆ. 2 ಪಂದ್ಯಗಳಲ್ಲಿ 2 ಬಾರಿ ಸೋತಿರುವ ಪಾಕಿಸ್ತಾನವು ಟೂರ್ನಮೆಂಟ್ನಿಂದ ನಿರ್ಗಮಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X