Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಬಾಂಗ್ಲಾದೇಶ ವಿರುದ್ಧ...

ದ್ವಿತೀಯ ಟೆಸ್ಟ್: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

ಸರಣಿ ಕ್ಲೀನ್ ಸ್ವೀಪ್ | ಕಮಿಂಡು ಮೆಂಡಿಸ್ ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ

ವಾರ್ತಾಭಾರತಿವಾರ್ತಾಭಾರತಿ3 April 2024 9:21 PM IST
share

ಚಿತ್ತಗಾಂಗ್: ಶ್ರೀಲಂಕಾ ಕ್ರಿಕೆಟ್ ತಂಡ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು 192 ರನ್ ಅಂತರದಿಂದ ಭರ್ಜರಿ ಯಾಗಿ ಗೆದ್ದುಕೊಂಡಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡು ಕ್ಲೀನ್ ಸ್ವೀಪ್ಸಾಧಿಸಿದೆ.

50 ರನ್ ಗೆ 4 ವಿಕೆಟ್ ಗಳನ್ನು ಉರುಳಿಸಿದ ವೇಗದ ಬೌಲರ್ ಲಹಿರು ಕುಮಾರ ಶ್ರೀಲಂಕಾದ ಬೌಲಿಂಗ್ ನಲ್ಲಿ ಮಿಂಚಿದ್ದು, ಖಾಲಿದ್ ಅಹ್ಮದ್ ವಿಕೆಟನ್ನು ಉರುಳಿಸಿ ಐದನೇ ಹಾಗೂ ಅಂತಿಮ ದಿನವಾದ ಬುಧವಾರ ಲಂಚ್ ವಿರಾಮಕ್ಕೆ ಮೊದಲು ತನ್ನ ತಂಡಕ್ಕೆ ಗೆಲುವು ತಂದುಕೊಟ್ಟರು. ಕಮಿಂಡು ಮೆಂಡಿಸ್(3-32) ಹಾಗೂ ಪ್ರಭಾತ್ ಜಯಸೂರ್ಯ(2-99) ಐದು ವಿಕೆಟ್ ಗಳನ್ನು ಹಂಚಿಕೊಂಡು ಲಹಿರು ಕುಮಾರಗೆ ಸಾಥ್ ನೀಡಿದರು.

ತನ್ನ ಎರಡನೇ ಇನಿಂಗ್ಸ್ ನಲ್ಲಿ ಗೆಲ್ಲಲು 511 ರನ್ ಕಠಿಣ ಸವಾಲು ಪಡೆದಿದ್ದ ಆತಿಥೇಯ ಬಾಂಗ್ಲಾದೇಶ ತಂಡ ಬುಧವಾರ 7 ವಿಕೆಟ್ ಗಳ ನಷ್ಟಕ್ಕೆ 268 ರನ್ನಿಂದ ಇನಿಂಗ್ಸ್ ಮುಂದುವರಿಸಿತು. ನಿನ್ನೆಯ ಮೊತ್ತಕ್ಕೆ ಕೇವಲ 50 ರನ್ ಸೇರಿಸುವಷ್ಟರಲ್ಲಿ 318 ರನ್ ಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಮೆಹದಿ ಹಸನ್ ಮಿರಾಝ್ ತನ್ನ ಆರನೇ ಅರ್ಧಶತಕವನ್ನು (ಔಟಾಗದೆ 81, 110 ಎಸೆತ,14 ಬೌಂಡರಿ)ಸಿಡಿಸಿ ಏಕಾಂಗಿ ಹೋರಾಟ ನೀಡಿದರು. ಶ್ರೀಲಂಕಾದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಬಾಂಗ್ಲಾದೇಶ ಸುಲಭವಾಗಿ ಶರಣಾಯಿತು.

ಆಕ್ರಮಣಕಾರಿ ಆಟಕ್ಕೆ ಮೊರೆ ಹೋದ ಮೆಹಿದಿ ಹಸನ್ 68 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು.10 ರನ್ನಿಂದ ಬ್ಯಾಟಿಂಗ್ ಮುಂದುವರಿಸಿದ ತೈಜುಲ್ ಇಸ್ಲಾಮ್ 14 ರನ್ ಗೆ ವಿಕೆಟ್ ಒಪ್ಪಿಸಿದ ನಂತರ ಬಾಂಗ್ಲಾದೇಶದ ಮರು ಹೋರಾಟದ ವಿಶ್ವಾಸ ಕಮರಿಹೋಯಿತು.

ಮೊದಲ ಇನಿಂಗ್ಸ್ ನಲ್ಲಿ ಔಟಾಗದೆ 92 ರನ್ ಗಳಿಸಿ ಬ್ಯಾಟಿಂಗ್ನಲ್ಲಿ ಮಿಂಚಿದ್ದ ಕಮಿಂಡು ಮೆಂಡಿಸ್ ತನ್ನ ಆಲ್ರೌಂಡ್ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಮೊದಲ ಟೆಸ್ಟ್ನ ಎರಡೂ ಇನಿಂಗ್ಸ್ ಗಳಲ್ಲಿ ಶತಕ ಗಳಿಸಿದಕ್ಕಾಗಿ ಸರಣಿಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಟೆಸ್ಟ್ ಸರಣಿಯಲ್ಲಿ ಶ್ರೀಲಂಕಾದ ವೇಗದ ಬೌಲರ್ಗಳು ಪ್ರಾಬಲ್ಯ ಸಾಧಿಸಿದ್ದು, ಬಾಂಗ್ಲಾದೇಶ ಕಳೆದುಕೊಂಡಿರುವ 40 ವಿಕೆಟ್ ಗಳ ಪೈಕಿ 33 ವಿಕೆಟ್ ಗಳು ವೇಗಿಗಳ ಪಾಲಾದವು. ಬಾಂಗ್ಲಾದೇಶದ ಸ್ಪಿನ್ ಸ್ನೇಹಿ ಪಿಚ್ ಗಳಲ್ಲಿ ಇದು ಮಹತ್ವದ ಸಾಧನೆಯಾಗಿದೆ.

ಇದೇ ವೇಳೆ, ಬಾಂಗ್ಲಾದೇಶದ ನಾಯಕ ನಜ್ಮುಲ್ ಹುಸೈನ್ ತನ್ನ ತಂಡದ ಪ್ರದರ್ಶನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ತನ್ನ ತಂಡದ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಬಾಂಗ್ಲಾದೇಶ ತಂಡವು ಜೂನ್ನಲ್ಲಿ ಆರಂಭವಾಗಲಿರುವ ಟಿ-20 ವಿಶ್ವಕಪ್ ಗಿಂತ ಮೊದಲು ಮೇನಲ್ಲಿ ಝಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ-20 ಸರಣಿಯನ್ನು ಆಡಲಿದೆ.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ ಮೊದಲ ಇನಿಂಗ್ಸ್: 531 ರನ್

ಬಾಂಗ್ಲಾದೇಶ ಮೊದಲ ಇನಿಂಗ್ಸ್: 178 ರನ್

ಶ್ರೀಲಂಕಾ ಎರಡನೇ ಇನಿಂಗ್ಸ್: 157/7 ಡಿಕ್ಲೇರ್

ಬಾಂಗ್ಲಾದೇಶ ಎರಡನೇ ಇನಿಂಗ್ಸ್: 318 ರನ್ ಗೆ ಆಲೌಟ್

(ಮೆಹಿದಿ ಹಸನ್ ಮಿರಾಝ್ ಔಟಾಗದೆ 81, ಮೂಮಿನುಲ್ ಹಕ್ 50, ಲಿಟನ್ ದಾಸ್ 38, ಲಹಿರು ಕುಮಾರ 4-50, ಕಮಿಂಡು ಮೆಂಡಿಸ್ 3-32, ಪ್ರಭಾತ್ ಜಯಸೂರ್ಯ 2-99)

ಪಂದ್ಯಶ್ರೇಷ್ಠ: ಕಮಿಂಡು ಮೆಂಡಿಸ್

ಸರಣಿಶ್ರೇಷ್ಠ: ಕಮಿಂಡು ಮೆಂಡಿಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X