Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತೀಯ ಫುಟ್ಬಾಲ್ ಸಂಸ್ಥೆಯ ನೆತ್ತಿಯ...

ಭಾರತೀಯ ಫುಟ್ಬಾಲ್ ಸಂಸ್ಥೆಯ ನೆತ್ತಿಯ ಮೇಲೆ ಅಮಾನತಿನ ತೂಗುಗತ್ತಿ

ವಾರ್ತಾಭಾರತಿವಾರ್ತಾಭಾರತಿ27 Aug 2025 9:00 AM IST
share
ಭಾರತೀಯ ಫುಟ್ಬಾಲ್ ಸಂಸ್ಥೆಯ ನೆತ್ತಿಯ ಮೇಲೆ ಅಮಾನತಿನ ತೂಗುಗತ್ತಿ

ಪಣಜಿ: ಅಕ್ಟೋಬರ್ 30ರ ಒಳಗಾಗಿ ಫಿಫಾ ಸೂಚಿಸಿರುವ ಸಂವಿಧಾನವನ್ನು ಅಳವಡಿಸಿಕೊಳ್ಳದೇ ಇದ್ದಲ್ಲಿ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಅಮಾನತುಗೊಳ್ಳುವ ಸಾಧ್ಯತೆ ಇದೆ. ಜಾಗತಿಕ ಫುಟ್ಬಾಲ್ ನಿರ್ವಹಣಾ ಸಂಸ್ಥೆಯಾದ ಫಿಫಾ ಹಾಗೂ ಏಷ್ಯನ್ ಫುಟ್ಬಾಲ್ ಕಾನ್ಫಿಡರೇಶನ್ (ಎಎಫ್‌ಸಿ) ಈ ಸಂಬಂಧ ಎಐಎಫ್ಎಫ್ ಗೆ ನೋಟಿಸ್ ನೀಡಿವೆ.

ಫಿಫಾ ಮತ್ತು ಎಎಫ್‌ಸಿ ಜಂಟಿಯಾಗಿ ಎಐಎಫ್ಎಫ್ ಅಧ್ಯಕ್ಷ ಕಲ್ಯಾಣ್ ಚೌಬೆ ಅವರಿಗೆ ಮಂಗಳವಾರ ಪತ್ರ ಬರೆದಿದ್ದು, ಪರಿಷ್ಕೃತ ಸಂವಿಧಾನವನ್ನು ಅಂತಿಮಪಡಿಸಲು ಮತ್ತು ಅನುಷ್ಠಾನಕ್ಕೆ ವಿಫಲವಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಗಿದೆ. ಪ್ರಕರಣ 2017ರಿಂದ ಭಾರತದ ಸುಪ್ರೀಂಕೋರ್ಟ್ ನಲ್ಲಿ ಇರುವುದರಿಂದ ಪರಿಷ್ಕೃತ ಸಂವಿಧಾನದ ವಿಚಾರ ಇನ್ನೂ ಪರಿಶೀಲನೆಯಲ್ಲಿದೆ. ಮತ್ತೆ ಮತ್ತೆ ಭರವಸೆಗಳನ್ನು ನೀಡಿಯೂ, ಸ್ಪಷ್ಟ ಮತ್ತು ಸಮಗ್ರ ಆಡಳಿತಾತ್ಮಕ ಚೌಕಟ್ಟನ್ನು ರೂಪಿಸಿಕೊಳ್ಳದಿರುವುದರಿಂದ ಭಾರತೀಯ ಫುಟ್ಬಾಲ್ ವ್ಯವಸ್ಥೆಯಲ್ಲಿ ಅಸಮರ್ಥನೀಯ ಶೂನ್ಯತ್ವ ಮತ್ತು ಕಾನೂನಾತ್ಮಕ ಅನಿಶ್ಚಿತತೆಗಳು ಕಾಣಿಸುತ್ತಿವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಫಿಫಾ ಮುಖ್ಯ ಸದಸ್ಯ ಸಂಘಟನಾ ಅಧಿಕಾರಿ ಎಲ್ಖಾನ್ ಮಮ್ಮದೋವ್ ಮತ್ತು ಎಎಫ್‌ಸಿ ಸದಸ್ಯ ಸಂಘಟನಾ ಉಪ ಪ್ರಧಾನ ಕಾರ್ಯದರ್ಶಿ ವಹೀದ್ ಕಾರ್ಡನಿ ಪತ್ರಕ್ಕೆ ಸಹಿ ಮಾಡಿದ್ದಾರೆ.

ಫಿಫಾ ಮತ್ತು ಎಎಫ್‌ಸಿ ಕಡ್ಡಾಯಪಡಿಸಿರುವ ನಿಬಂಧನೆಗಳಿಗೆ ಅನುಸಾರವಾದ ಪರಿಷ್ಕೃತ ಎಐಎಫ್ಎಫ್ ಸಂವಿಧಾನವನ್ನು ಅನುಮೋದಿಸುವ ಸಂಬಂಧ ಅಕ್ಟೋಬರ್ 30ರ ಒಳಗೆ ಸುಪ್ರೀಂಕೋರ್ಟ್ ನಿಂದ ನಿರ್ದಿಷ್ಟ ಆದೇಶವನ್ನು ಪಡೆಯುವಂತೆ ಗಡುವು ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X