T20 World Cup| ಭಾರತ ತಂಡ ಪ್ರಕಟ: ಸೂರ್ಯಕುಮಾರ್ ನಾಯಕ, "ಗಿಲ್" ಔಟ್

ಸೂರ್ಯಕುಮಾರ್ ಯಾದವ್ , ಶುಭಮನ್ ಗಿಲ್ | Photo Credit : PTI
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಅಚ್ಚರಿ ಎಂದರೆ ಶುಭಮನ್ ಗಿಲ್ ಅವರನ್ನು ಭಾರತದ ಟಿ20 ತಂಡದ ಉಪನಾಯಕ ಸ್ಥಾನದಿಂದ ಕೈಬಿಡಲಾಗಿದೆ. ಗಿಲ್ ಬದಲು ಅಕ್ಷರ್ ಪಟೇಲ್ ನೂತನ ಉಪನಾಯಕನಾಗಿ ಘೋಷಣೆ ಮಾಡಲಾಗಿದೆ.
ಕಳಪೆ ಸ್ಕೋರ್ ಹಿನ್ನೆಲೆ ಬಿಸಿಸಿಐ ಆಯ್ಕೆ ಸಮಿತಿಯು ಅವರನ್ನು ಭಾರತದ ಟಿ20 ತಂಡದಿಂದ ಕೈಬಿಟ್ಟಿದೆ ಎಂದು ಹೇಳಲಾಗಿದೆ.
ಟಿ20 ವಿಶ್ವಕಪ್ಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್(ನಾಯಕ), ಅಕ್ಷರ್ ಪಟೇಲ್ (ಉಪನಾಯಕ) ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ತಿಲಕ್ ವರ್ಮಾ, ಕುಲದೀಪ ಯಾದವ್, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಇಶನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.





