Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಕ್ರಿಕೆಟ್: ಭಾರತ-ದಕ್ಷಿಣ...

ಟೆಸ್ಟ್ ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ ಹೆಡ್-ಟು-ಹೆಡ್ ದಾಖಲೆಯತ್ತ ಒಂದು ನೋಟ

ವಾರ್ತಾಭಾರತಿವಾರ್ತಾಭಾರತಿ10 Nov 2025 9:34 PM IST
share
  • ಟೆಸ್ಟ್ ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ ಹೆಡ್-ಟು-ಹೆಡ್ ದಾಖಲೆಯತ್ತ ಒಂದು ನೋಟ

    Photo Credit : PTI

  • ಟೆಸ್ಟ್ ಕ್ರಿಕೆಟ್: ಭಾರತ-ದಕ್ಷಿಣ ಆಫ್ರಿಕಾ ಹೆಡ್-ಟು-ಹೆಡ್ ದಾಖಲೆಯತ್ತ ಒಂದು ನೋಟ

ಹೊಸದಿಲ್ಲಿ, ನ.10: ಕೋಲ್ಕತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನ.14, ಶುಕ್ರವಾರದಿಂದ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಸರಣಿಯ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವು ನ.22ರಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಸರಣಿಯು ಹೆಚ್ಚು ಮಹತ್ವ ಪಡೆದಿದ್ದು, ದಕ್ಷಿಣ ಆಫ್ರಿಕಾವು ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್(ಡಬ್ಲ್ಯುಟಿಸಿ)ಚಾಂಪಿಯನ್ ಆಗಿದ್ದರೆ, ಭಾರತವು ಈವರ್ಷಾರಂಭದಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಸ್ವದೇಶದಲ್ಲಿ ತೋರಿದ್ದ ಪ್ರಾಬಲ್ಯವನ್ನು ಮುಂದುವರಿಸುವ ಗುರಿ ಇಟ್ಟುಕೊಂಡಿದೆ.

ಪಾಕಿಸ್ತಾನದ ವಿರುದ್ಧ 1-1ರಿಂದ ಪ್ರಯಾಸಕಾರಿ ಡ್ರಾ ಸಾಧಿಸಿರುವ ದಕ್ಷಿಣ ಆಫ್ರಿಕಾ ಕಠಿಣ ಸವಾಲನ್ನು ಎದುರಿಸುತ್ತಿದೆ. ಐತಿಹಾಸಿಕವಾಗಿ ಎರಡು ತಂಡಗಳ ನಡುವಿನ ಸ್ಪರ್ಧೆಯು ತೀವ್ರ ಪೈಪೋಟಿಯಿಂದ ಕೂಡಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಧ್ಯೆ ನಡೆದಿರುವ 44 ಟೆಸ್ಟ್ ಪಂದ್ಯಗಳ ಪೈಕಿ 18ರಲ್ಲಿ ಜಯ ಸಾಧಿಸಿರುವ ದಕ್ಷಿಣ ಆಫ್ರಿಕಾವು ಅಲ್ಪ ಮುನ್ನಡೆ ಪಡೆದಿದೆ. ಭಾರತ ತಂಡವು 16 ಬಾರಿ ಜಯಶಾಲಿಯಾಗಿದೆ. 10 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ.

ಭಾರತೀಯ ನೆಲದಲ್ಲಿನ ಸಂಖ್ಯೆಗಳು ಬೇರೆಯೇ ಕತೆಯನ್ನು ಹೇಳುತ್ತವೆ. ಭಾರತದಲ್ಲಿ ಆಡಿರುವ 19 ಟೆಸ್ಟ್ ಪಂದ್ಯಗಳ ಪೈಕಿ ಆತಿಥೇಯರು 11ರಲ್ಲಿ ಜಯ ಸಾಧಿಸಿದ್ದು, ದಕ್ಷಿಣ ಆಫ್ರಿಕಾ ಕೇವಲ 5ರಲ್ಲಿ ಗೆಲುವು ಪಡೆಯುವಲ್ಲಿ ಶಕ್ತವಾಗಿದೆ. ಮೂರು ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿವೆ.

ಪ್ರಸಕ್ತ ಸರಣಿಯು ಶುಭಮನ್ ಗಿಲ್ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದು, ರಿಷಭ್ ಪಂತ್ ವಿಕೆಟ್‌ ಕೀಪಿಂಗ್ ಜೊತೆಗೆ ಉಪ ನಾಯಕನಾಗಿದ್ದಾರೆ.

ಟೆಂಬಾ ಬವುಮಾ ನೇತೃತ್ವದಲ್ಲಿ ದಕ್ಷಿಣ ಆಫ್ರಿಕಾ ತಂಡವು ಹಿರಿಯರು ಹಾಗೂ ಹೊಸ ಪ್ರತಿಭೆಗಳ ಮಿಶ್ರಣದೊಂದಿಗೆ ಸಮತೋಲಿತವಾಗಿದೆ.

ಕಳೆದೊಂದು ದಶಕದಲ್ಲಿ ಉಭಯ ತಂಡಗಳ ನಡುವೆ ತೀವ್ರ ಸ್ಪರ್ಧೆ ಕಂಡುಬಂದಿದೆ. ಹಿಂದಿನ 5 ಟೆಸ್ಟ್ ಪಂದ್ಯಗಳಲ್ಲಿ ರೋಚಕ ಫಲಿತಾಂಶ ಬಂದಿದೆ.

-ದಕ್ಷಿಣ ಆಫ್ರಿಕಾದಲ್ಲಿ 2023-24ರ ಸರಣಿಯು 1-1ರಿಂದ ಡ್ರಾನಲ್ಲಿ ಕೊನೆಗೊಂಡಿದೆ.

-2021-22ರಲ್ಲಿ ದಕ್ಷಿಣ ಆಫ್ರಿಕಾ ತಂಡವು ಸ್ವದೇಶದಲ್ಲಿ 2-1 ಅಂತರದಿಂದ ಜಯಶಾಲಿಯಾಗಿದೆ.

-2019-20ರಲ್ಲಿ ಸ್ವದೇಶದಲ್ಲಿ ನಡೆದಿದ್ದ ಸರಣಿಯಲ್ಲಿ ಭಾರತವು ಪ್ರಾಬಲ್ಯ ಸಾಧಿಸಿದ್ದು, 3-0 ಅಂತರದಿಂದ ವೈಟ್‌ವಾಶ್ ಸಾಧಿಸಿದೆ.

-ದಕ್ಷಿಣ ಆಫ್ರಿಕಾ ತಂಡವು 2017-18ರಲ್ಲಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

-2015-16ರಲ್ಲಿ ಭಾರತ ತಂಡವು ಸ್ವದೇಶದಲ್ಲಿ 3-0 ಅಂತರದಿಂದ ಗೆಲುವು ದಾಖಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X