Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ಏಶ್ಯಕಪ್ | ಪಾಕಿಸ್ತಾನದ...

ಅಂಡರ್-19 ಏಶ್ಯಕಪ್ | ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡಕ್ಕೆ ಸೋಲು

ವಾರ್ತಾಭಾರತಿವಾರ್ತಾಭಾರತಿ30 Nov 2024 9:08 PM IST
share
ಅಂಡರ್-19 ಏಶ್ಯಕಪ್ | ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡಕ್ಕೆ ಸೋಲು

ದುಬೈ : ಆಲ್‌ರೌಂಡ್ ಪ್ರದರ್ಶನ ನೀಡಿದ ಪಾಕಿಸ್ತಾನ ಕ್ರಿಕೆಟ್ ತಂಡ ಟೀಮ್ ಇಂಡಿಯಾವನ್ನು ಅಂಡರ್-19 ಏಶ್ಯಕಪ್ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ 44 ರನ್‌ಗಳಿಂದ ಮಣಿಸಿದೆ.

ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 282 ರನ್ ಗುರಿ ಬೆನ್ನಟ್ಟಿದ ಭಾರತ ತಂಡವು ಕಳಪೆ ಆರಂಭದಿಂದ ಚೇತರಿಸಿಕೊಳ್ಳುವಲ್ಲಿ ವಿಫಲವಾಗಿ 47.1 ಓವರ್‌ಗಳಲ್ಲಿ 238 ರನ್ ಗಳಿಸಿ ಆಲೌಟಾಯಿತು.

ಶಹಝೈಬ್ ಖಾನ್(159 ರನ್)ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ನಂತರ ಪಾಕಿಸ್ತಾನದ ಬೌಲರ್‌ಗಳು ಶಿಸ್ತುಬದ್ಧ ಬೌಲಿಂಗ್ ಪ್ರದರ್ಶಿಸಿದರು.

ಭಾರತದ ಮೂವರು ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಆಯಷ್ ಮ್ಹಾತ್ರೆ(20 ರನ್), ವೈಭವ್ ಸೂರ್ಯವಂಶಿ(1 ರನ್)ಹಾಗೂ ಎ.ಸಿದ್ದಾರ್ಥ್(15 ರನ್)ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು. ನಾಯಕ ಮುಹಮ್ಮದ್ ಅನಾನ್ 16 ರನ್ ಗಳಿಸಿ ಔಟಾದರು.

ಭಾರತ ತಂಡವು ಮಧ್ಯಮ ಓವರ್‌ನಲ್ಲಿ ಒಂದಷ್ಟು ಹೋರಾಟ ನೀಡಿದ್ದು, ನಿಖಿಲ್ ಕುಮಾರ್ 67 ರನ್(77 ಎಸೆತ, 6 ಬೌಂಡರಿ, 3 ಸಿಕ್ಸರ್) ಗಳಿಸಿದರು.ಕಿರಣ್(20 ರನ್) ಹಾಗೂ ಹರ್‌ವಂಶ್ ಸಿಂಗ್(26 ರನ್) ಉಪಯುಕ್ತ ಕಾಣಿಕೆಗಳನ್ನು ನೀಡಿದರು.

ಮುಹಮ್ಮದ್ ಎನಾನ್(30 ರನ್, 22 ಎಸೆತ) ಹಾಗೂ ಯುದ್ದಜೀತ್ ಗುಹಾ(ಔಟಾಗದೆ 13, 23 ಎಸೆತ) ಕೊನೆಯ ವಿಕೆಟ್‌ಗೆ 47 ರನ್ ಜೊತೆಯಾಟ ನಡೆಸಿ ಭಾರತ ತಂಡಕ್ಕೆ ಗೆಲುವಿನ ವಿಶ್ವಾಸ ಮೂಡಿಸಿದ್ದರು. ಆದರೆ 48ನೇ ಓವರ್‌ನಲ್ಲಿ ಎನಾನ್ ರನೌಟಾದರು.

ಪಾಕಿಸ್ತಾನದ ಬೌಲಿಂಗ್ ವಿಭಾಗದಲ್ಲಿ ಅಲಿ ರಾಝಾ ಮೂರು ವಿಕೆಟ್‌ಗಳನ್ನು(3-36) ಉರುಳಿಸಿದರೆ, ಅಬ್ದುಲ್ ಸುಭಾನ್(2-46) ಹಾಗೂ ಫಹಾಂ-ವುಲ್-ಹಕ್(2-41) ತಲಾ ಎರಡು ವಿಕೆಟ್‌ಗಳನ್ನು ಪಡೆದರು.

*ಪಾಕಿಸ್ತಾನ 282/7: ಇದಕ್ಕೂ ಮೊದಲು ಟಾಸ್ ಜಯಿಸಿ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಶಹಝೈಬ್ ಖಾನ್ ಶತಕದ(159 ರನ್, 147 ಎಸೆತ)ಸಹಾಯದಿಂದ 50 ಓವರ್‌ಗಳಲ್ಲಿ 281 ರನ್ ಗಳಿಸಿತು.

ಇನಿಂಗ್ಸ್ ಆರಂಭಿಸಿದ ಖಾನ್ ಹಾಗೂ ಉಸ್ಮಾನ್ ಖಾನ್(60 ರನ್, 94 ಎಸೆತ)ಮೊದಲ ವಿಕೆಟ್‌ನಲ್ಲಿ 30.4 ಓವರ್‌ಗಳಲ್ಲಿ 160 ರನ್ ಗಳಿಸಿ ಪಾಕಿಸ್ತಾನ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಆದರೆ ಈ ಇಬ್ಬರನ್ನು ಹೊರತುಪಡಿಸಿ ಉಳಿದ ಆಟಗಾರರು ದೊಡ್ಡ ಮೊತ್ತ ಗಳಿಸಲಿಲ್ಲ. ಮುಹಮ್ಮದ್ ರಿಯಾಝುಲ್ಲಾ(27 ರನ್)ಎರಡಂಕೆ ಸ್ಕೋರ್ ಗಳಿಸಿದರು.

ಭಾರತದ ಪರ ಸಮರ್ಥ್ ನಾಗರಾಜ್(3-45)ಹಾಗೂ ಆಯುಷ್ ಮ್ಹಾತ್ರೆ(2-30)ಐದು ವಿಕೆಟ್‌ಗಳನ್ನು ಹಂಚಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X