Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-19 ಏಕದಿನ ಪಂದ್ಯ: ಆಸ್ಟ್ರೇಲಿಯ...

ಅಂಡರ್-19 ಏಕದಿನ ಪಂದ್ಯ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ 7 ರನ್ ಜಯ

ವಾರ್ತಾಭಾರತಿವಾರ್ತಾಭಾರತಿ18 Sept 2026 11:12 PM IST
share
ಅಂಡರ್-19 ಏಕದಿನ ಪಂದ್ಯ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ 7 ರನ್ ಜಯ

ರಾಜ್‌ಕೋಟ್: ರಾಜ್‌ಕೋಟ್‌ನಲ್ಲಿ ಶುಕ್ರವಾರ ನಡೆದ ಮಳೆ ಬಾಧಿತ ಮೊದಲ ಯುವ ಏಕದಿನ ಪಂದ್ಯದಲ್ಲಿ, ಭಾರತ ಅಂಡರ್-19 ತಂಡವು ಆಸ್ಟ್ರೇಲಿಯ ಅಂಡರ್-19 ತಂಡವನ್ನು 7 ರನ್‌ಗಳಿಂದ ಸೋಲಿಸಿದೆ. ಅನ್ವಯ್ ದ್ರಾವಿಡ್ ಅವರ ಬಿರುಸಿನ ಬ್ಯಾಟಿಂಗ್ ಮತ್ತು ಯಶವರ್ಧನ್ ಚೌಹಾಣ್ ಅವರ ಅರ್ಧಶತಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವು.

ನಿರಂಜನ್ ಶಾ ಕ್ರೀಡಾಂಗಣದಲ್ಲಿ ಮಳೆಯ ಅಡಚಣೆಯಿಂದಾಗಿ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು.

ಆಸ್ಟ್ರೇಲಿಯ ನಾಯಕ ಜ್ಯಾಕ್ ಝೋಸ್ನೆಕ್ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿದರು. ಭಾರತವು 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಚೌಹಾಣ್ 34 ಎಸೆತಗಳಲ್ಲಿ 54 ರನ್ ಗಳಿಸಿದರೆ, ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ಕೇವಲ 18 ಎಸೆತಗಳಲ್ಲಿ 38 ರನ್ ಸಿಡಿಸಿದರು.

ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಅವರಿಗೆ ಇದು ಭಾರತ ಅಂಡರ್-19 ಪರ ಚೊಚ್ಚಲ ಪಂದ್ಯವಾಗಿತ್ತು. ಇನಿಂಗ್ಸ್ ಆರಂಭಿಸಿದ ಆರ್ಯವೀರ್ 5 ಬೌಂಡರಿಗಳ ನೆರವಿನಿಂದ 26 ಎಸೆತಗಳಲ್ಲಿ 28 ರನ್ ಗಳಿಸಿದರು. ಮಗನ ಆಟವನ್ನು ವೀಕ್ಷಿಸಲು ತಂದೆ ವೀರೇಂದ್ರ ಸೆಹ್ವಾಗ್ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದರು.

ಗೆಲುವಿಗೆ 183 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ತಂಡಕ್ಕೆ ಆರಂಭಿಕರಾದ ನೀಲ್ ಪಟೇಲ್ ಮತ್ತು ಹೇಡನ್ ಬಾರ್ಬುಲೋವಿಕ್ ಉತ್ತಮ ಆರಂಭ ನೀಡಿದರು. ಪಟೇಲ್ 31 ಎಸೆತಗಳಲ್ಲಿ 45 ರನ್ ಗಳಿಸಿದರೆ, ಬಾರ್ಬುಲೋವಿಕ್ 24 ಎಸೆತಗಳಲ್ಲಿ 40 ರನ್ ಗಳಿಸಿದರು. ನಂತರ ನಾಯಕ ಜ್ಯಾಕ್ ಝೋಸ್ನೆಕ್ ಕೇವಲ 27 ಎಸೆತಗಳಲ್ಲಿ 55 ರನ್ ಸಿಡಿಸಿ ತಂಡವನ್ನು ಗೆಲುವಿನ ಹಾದಿಯಲ್ಲೇ ಉಳಿಸಿದ್ದರು.

ಆದರೆ 19ನೇ ಓವರ್‌ನಲ್ಲಿ ಝೋಸ್ನೆಕ್ ಔಟಾಗುವುದರೊಂದಿಗೆ ಆಸ್ಟ್ರೇಲಿಯದ ಗೆಲುವಿನ ನಿರೀಕ್ಷೆ ಹುಸಿಯಾಯಿತು. ಆಸ್ಟ್ರೇಲಿಯಕ್ಕೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 175 ರನ್‌ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು.

ಬೌಲಿಂಗ್‌ನಲ್ಲೂ ಮಿಂಚಿದ ಚೌಹಾಣ್ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಕಬಳಿಸಿದರು.

Tags

Under-19 ODIIndiaAustralia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X