Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐರ್ಲ್ಯಾಂಡ್, ಇಂಗ್ಲೆಂಡ್ ವಿರುದ್ಧದ...

ಐರ್ಲ್ಯಾಂಡ್, ಇಂಗ್ಲೆಂಡ್ ವಿರುದ್ಧದ ಟ್ವೆಂಟಿ20 ಸರಣಿಗೆ ಪಾಕ್ ತಂಡದಿಂದ ಉಸಾಮ್ ಮಿರ್ಗೆ ಕೊಕ್, ಹಾರಿಸ್ ರವೂಫ್ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ2 May 2024 9:41 PM IST
share

ರಾವಲ್ಪಿಂಡಿ: ಐರ್ಲ್ಯಾಂಡ್ ಮತ್ತು ಇಂಗ್ಲೆಂಡ್ನಲ್ಲಿ ನಡೆಯಲಿರುವ ಟ್ವೆಂಟಿ20 ಸರಣಿಗೆ ಪಾಕಿಸ್ತಾನ ಕ್ರಿಕೆಟ್ ತಂಡದಿಂದ ಲೆಗ್ಸ್ಪಿನ್ನರ್ ಉಸಾಮ ಮಿರ್ರನ್ನು ಕೈಬಿಡಲಾಗಿದೆ ಮತ್ತು ವೇಗದ ಬೌಲರ್ ಹಾರಿಸ್ ರವೂಫ್ರನ್ನು ಮರುಸೇರ್ಪಡೆಗೊಳಿಸಲಾಗಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ತಂಡವನ್ನು ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಆಯ್ಕೆಗಾರರಾದ ಮುಹಮ್ಮದ್ ಯೂಸುಫ್, ಅಬ್ದುಲ್ ರಝಾಕ್ ಮತ್ತು ವಹಾಹ್ ರಿಯಾಝ್, ಐರ್ಲ್ಯಾಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಆಟಗಾರರು ನೀಡುವ ನಿರ್ವಹಣೆಯ ಆಧಾರದಲ್ಲಿ ಟಿ20 ವಿಶ್ವಕಪ್ಗೆ ತಂಡವನ್ನು ಆರಿಸಲಾಗುವುದು ಎಂದು ಘೋಷಿಸಿದರು.

ಐರ್ಲ್ಯಾಂಡ್ನಲ್ಲಿ ಮೂರು ಪಂದ್ಯಗಳ ಸರಣಿಯು ಮೇ 10ರಂದು ಆರಂಭಗೊಳ್ಳುವುದು. ಬಳಿಕ ಪಾಕಿಸ್ತಾನ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳುವುದು. ಇಂಗ್ಲೆಂಡ್ ವಿರುದ್ಧದ ಸರಣಿಯು ಮೇ 22ರಂದು ಆರಂಭಗೊಳ್ಳುವುದು.

“ಮುಹಮ್ಮದ್ ರಿಝ್ವಾನ್, ಅಝಮ್ ಖಾನ್ ಮತ್ತು ಇರ್ಫಾನ್ ಖಾನ್ ನಿಯಾಝಿ ದೈಹಿಕ ಕ್ಷಮತೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಅವರ ದೈಹಿಕ ಕ್ಷಮತೆಯ ಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಅವರು ಮುಂದಿನ ಪಂದ್ಯಗಳಲ್ಲಿ ಆಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ'' ಎಂದು ವಹಾಬ್ ಹೇಳಿದರು.

“ಹಾರಿಸ್ ರವೂಫ್ ದೈಹಿಕವಾಗಿ ಶಕ್ತರಾದರೆ ಮತ್ತು ಮುಂದಿನ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ನೀಡಿದರೆ ಅವರು ನಮ್ಮ ಮೊದಲ ಆಯ್ಕೆಯಾಗಲಿದ್ದಾರೆ. ಅವರು ಬೌಲಿಂಗ್ ಮಾಡಲು ಆರಂಭಿಸಿದ್ದಾರೆ. ಆದರೆ ಅವರ ನಿರ್ವಹಣೆ ನಿರೀಕ್ಷಿತ ಮಟ್ಟಕ್ಕೆ ಏರದಿದ್ದರೆ, ನಮ್ಮ ಆಯ್ಕೆ ಹಸನ್ ಅಲಿ'' ಎಂದು ಅವರು ತಿಳಿಸಿದರು.

ಪಾಕಿಸ್ತಾನ ಸೂಪರ್ ಲೀಗ್ನ ಆರಂಭಿಕ ಹಂತದಲ್ಲಿ ಹಾರಿಸ್ ದೈಹಿಕ ಕ್ಷಮತೆ ಕಳೆದುಕೊಂಡಿದ್ದರು. ಅವರು ಫೆಬ್ರವರಿ ಬಳಿಕ ಆಡಿಲ್ಲ.

ತಂಡ: ಬಾಬರ್ ಅಝಮ್ (ನಾಯಕ), ಮುಹಮ್ಮದ್ ರಿಝ್ವಾನ್, ಅಝಮ್ ಖಾನ್, ಸಯೀಮ್ ಅಯೂಬ್, ಫಖರ್ ಝಮಾನ್, ಇಫ್ತಿಕಾರ್ ಅಹ್ಮದ್, ಇರ್ಫಾನ್ ಖಾನ್ ನಿಯಾಝಿ, ಅಬ್ರಾರ್ ಅಹ್ಮದ್, ಹಸನ್ ಅಲಿ, ಹಾರಿಸ್ ರವೂಫ್, ಶಹೀನ್ ಶಾ ಅಫ್ರಿದಿ, ಮುಹಮ್ಮದ್ ಅಮಿರ್, ಇಮಾದ್ ವಾಸಿಮ್, ನಸೀಮ್ ಶಾ, ಶದಬ್ ಖಾನ್, ಉಸ್ಮಾನ್ ಖಾನ್, ಅಬ್ಬಾಸ್ ಅಫ್ರಿದಿ ಮತ್ತು ಆಘಾ ಅಲಿ ಸಲ್ಮಾನ್.

ಮೇ ತಿಂಗಳ ಕೊನೆಯಲ್ಲಿ ವಿಶ್ವಕಪ್ ತಂಡ ಘೋಷಣೆ?

ಕೆಲವು ಆಟಗಾರರ ದೈಹಿಕ ಕ್ಷಮತೆ ಮತ್ತು ನಿರ್ವಹಣೆ ಸಮಸ್ಯೆಗಳ ಹಿನ್ನೆಲೆಯಲ್ಲಿ, ತನ್ನ ವಿಶ್ವಕಪ್ ತಂಡದ ಘೋಷಣೆಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯು ಮೇ ತಿಂಗಳ ಉತ್ತರಾರ್ಧಕ್ಕೆ ಮುಂದೂಡಿದೆ ಎಂದು ಪಿಸಿಬಿಯ ಮೂಲವೊಂದು ತಿಳಿಸಿದೆ.

ಪಾಕಿಸ್ತಾನವು ತನ್ನ ವಿಶ್ವಕಪ್ ತಂಡವನ್ನು ಮೇ 23 ಅಥವಾ ಮೇ 24ರಂದು ಘೋಷಿಸುವುದು ಎಂದು ಮೂಲ ಹೇಳಿದೆ. ವಿಶ್ವಕಪ್ ತಾಂತ್ರಿಕ ಸಮಿತಿಯಿಂದ ಅನುಮತಿ ಕೇಳದೆ ತಂಡಗಳಿಗೆ ಬದಲಾವಣೆ ಮಾಡಲು ಮೇ 24 ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಧಿಸಿದ ಅಂತಿಮ ಗಡುವು ಆಗಿದೆ.

ಮುಹಮ್ಮದ್ ರಿಝ್ವಾನ್, ಅಝಮ್ ಖಾನ್, ಇರ್ಫಾನ್ ಖಾನ್ ನಿಯಾಝಿ ಮತ್ತು ಹಾರಿಸ್ ರವೂಫ್ ಗಾಯಗಳಿಂದ ಬಳಲುತ್ತಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯ್ಕೆ ಸಮಿತಿಯ ಕಾರಣಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X