Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. Vijay Hazare Trophy | ಮಯಾಂಕ್,...

Vijay Hazare Trophy | ಮಯಾಂಕ್, ದೇವದತ್ತ ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 4ನೇ ಜಯ

ವಾರ್ತಾಭಾರತಿವಾರ್ತಾಭಾರತಿ31 Dec 2025 9:11 PM IST
share

ಅಹ್ಮದಾಬಾದ್, ಡಿ.31: ನಾಯಕ ಮಯಾಂಕ್ ಅಗರ್ವಾಲ್ (132 ರನ್, 124 ಎಸೆತ, 15 ಬೌಂಡರಿ, 2 ಸಿಕ್ಸರ್) ಹಾಗೂ ದೇವದತ್ತ ಪಡಿಕ್ಕಲ್ (113 ರನ್, 116 ಎಸೆತ, 10 ಬೌಂಡರಿ, 4 ಸಿಕ್ಸರ್) ಅವರ ಶತಕಗಳು ಮತ್ತು ಕರುಣ್ ನಾಯರ್ ಅವರ ಔಟಾಗದೆ ಗಳಿಸಿದ ಅರ್ಧಶತಕ (62 ರನ್, 34 ಎಸೆತ, 4 ಬೌಂಡರಿ, 4 ಸಿಕ್ಸರ್) ನೆರವಿನಿಂದ ಕರ್ನಾಟಕ ಕ್ರಿಕೆಟ್ ತಂಡ ವಿಜಯ್ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಪುದುಚೇರಿ ತಂಡದ ವಿರುದ್ಧ 67 ರನ್‌ ಗಳ ಅಂತರದಿಂದ ಜಯ ಸಾಧಿಸಿದೆ.

ಈ ಮೂಲಕ ಮಯಾಂಕ್ ಬಳಗವು ಟೂರ್ನಿಯಲ್ಲಿ ಸತತ ನಾಲ್ಕನೇ ಪಂದ್ಯವನ್ನು ಗೆದ್ದು, ಅಂಕಪಟ್ಟಿಯ ‘ಎ’ ಗುಂಪಿನಲ್ಲಿ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ.

ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮಯಾಂಕ್ ಮತ್ತು ಪಡಿಕ್ಕಲ್ ಮೊದಲ ವಿಕೆಟ್‌ ಗೆ 228 ರನ್‌ಗಳ ಜೊತೆಯಾಟ ನಡೆಸಿ, ಕರ್ನಾಟಕ ತಂಡ ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 363 ರನ್ ಗಳಿಸಿತು.

ಗೆಲ್ಲಲು 364 ರನ್‌ಗಳ ಗುರಿ ಪಡೆದ ಪುದುಚೇರಿ ತಂಡ ಆರಂಭಿಕ ಬ್ಯಾಟರ್ ಶ್ಯಾಮ್ ಕಂಗಾಯನ್ (68 ರನ್, 66 ಎಸೆತ, 9 ಬೌಂಡರಿ, 1 ಸಿಕ್ಸರ್) ಹಾಗೂ ಜಯಂತ್ ಯಾದವ್ (54 ರನ್, 35 ಎಸೆತ, 4 ಬೌಂಡರಿ, 2 ಸಿಕ್ಸರ್) ಅವರ ಅರ್ಧಶತಕಗಳ ಹೊರತಾಗಿಯೂ, ನಿಗದಿತ 50 ಓವರ್‌ಗಳಲ್ಲಿ 296 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ನಾಯಕ ಅಮನ್ ಖಾನ್ (34 ರನ್, 20 ಎಸೆತ), ಅಜಯ್ ರೊಹೆರಾ (32 ರನ್, 41 ಎಸೆತ) ಹಾಗೂ ವಿಘ್ನೇಶ್ವರನ್ (31 ರನ್, 44 ಎಸೆತ) ಎರಡಂಕೆಯ ಸ್ಕೋರ್ ದಾಖಲಿಸಿದರು.

ಕರ್ನಾಟಕದ ಬೌಲಿಂಗ್ ವಿಭಾಗದಲ್ಲಿ ಮನ್ವಂತ್ ಕುಮಾರ್ (3–52) ಯಶಸ್ವಿ ಬೌಲರ್ ಎನಿಸಿಕೊಂಡರು. ವಿದ್ವತ್ ಕಾವೇರಪ್ಪ (2–30) ಹಾಗೂ ಕರುಣ್ ನಾಯರ್ (2–38) ತಲಾ ಎರಡು ವಿಕೆಟ್‌ಗಳನ್ನು ಪಡೆದರು.

ಸಂಕ್ಷಿಪ್ತ ಸ್ಕೋರ್

ಕರ್ನಾಟಕ: 50 ಓವರ್‌ಗಳಲ್ಲಿ 363/4

(ಮಯಾಂಕ್ ಅಗರ್ವಾಲ್ 132, ದೇವದತ್ತ ಪಡಿಕ್ಕಲ್ 113, ಕರುಣ್ ನಾಯರ್ ಔಟಾಗದೆ 62; ಪಾರ್ಥ ವಘಾನಿ 1–73)

ಪುದುಚೇರಿ: 50 ಓವರ್‌ಗಳಲ್ಲಿ 296/10

(ಶ್ಯಾಮ್ ಕಂಗಾಯನ್ 68, ಜಯಂತ್ ಯಾದವ್ 54, ಅಮನ್ ಖಾನ್ 34; ಮನ್ವಂತ್ ಕುಮಾರ್ 3–52, ವಿದ್ವತ್ ಕಾವೇರಪ್ಪ 2–30, ಕರುಣ್ ನಾಯರ್ 2–38)

ಪಂದ್ಯಶ್ರೇಷ್ಠ: ಮಯಾಂಕ್ ಅಗರ್ವಾಲ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X