Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು...

ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿಗೆ ಆಗ್ರಹಿಸಿ ಎಲ್ಲ ಜಿಲ್ಲೆಗಳಲ್ಲಿ ಧರಣಿ ನಡೆಸಲು ಹೋರಾಟ ಸಮಿತಿ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ23 Aug 2025 9:00 PM IST
share
ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿಗೆ ಆಗ್ರಹಿಸಿ ಎಲ್ಲ ಜಿಲ್ಲೆಗಳಲ್ಲಿ ಧರಣಿ ನಡೆಸಲು ಹೋರಾಟ ಸಮಿತಿ ತೀರ್ಮಾನ

ಬೆಂಗಳೂರು, ಆ.23 : ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಗಾಗಿ ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಧರಣಿ ಮುಂದುವರಿದಿದ್ದು, ರಾಜ್ಯದ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಧರಣಿ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ.

ಅಲೆಮಾರಿಗಳಿಗೆ ಪ್ರತ್ಯೇಕ ಶೇ.1ರಷ್ಟು ಮೀಸಲಾತಿ ವಿಚಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ವಿಫಲವಾದ ಬೆನ್ನಲ್ಲೇ, ಧರಣಿ ಸ್ಥಳದಲ್ಲಿ ಸಭೆ ಸೇರಿದ ಹೋರಾಟಗಾರರು ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಿದರು.

ಈ ವೇಳೆ ‘ವಾರ್ತಾಭಾರತಿ’ಯೊಂದಿಗೆ ಹೋರಾಟಗಾರ ಬಸವರಾಜ್ ಕೌತಾಳ್ ಮಾತನಾಡಿ, ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ವಿಚಾರದಲ್ಲಿ ರಾಜಕೀಯ ತೀರ್ಮಾನವಾಗಿದೆ. ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವುದು ನನ್ನ ಜವಾಬ್ದಾರಿಯಾದರೂ 101 ಪರಿಶಿಷ್ಟ ಜಾತಿಯನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕಿದೆ. ಸರಕಾರ ಎಲ್ಲ ಸಚಿವರ ಅಭಿಪ್ರಾಯದೊಂದಿಗೆ ಒಳಮೀಸಲಾತಿ ಜಾರಿ ಮಾಡಲಾಗಿದೆ. ಸದ್ಯಕ್ಕೆ ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ಜಾರಿ ಮಾಡುವುದು ಕಷ್ಟ. ನನಗೆ ಕಾಲಾವಕಾಶ ಕೊಡಿ, ಅಲೆಮಾರಿ ಸಮುದಾಯಕ್ಕೆ ನ್ಯಾಯ ಒದಗಿಸಲು ಏನು ಮಾಡಬೇಕು ಎನ್ನುವುದನ್ನು ಸಚಿವ ಸಂಪುಟದ ಮುಂದಿಡುತ್ತೇನೆ ಎನ್ನುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿಸಿದರು.

ಅಲೆಮಾರಿ ಸಮುದಾಯದ ಅಭಿವೃದ್ಧಿಗಾಗಿ ಏನೇನು ಕೆಲಸ ಮಾಡಬೇಕೋ ಅದನ್ನು ಮಾಡಲಾಗುವುದು. ಉನ್ನತ ಶಿಕ್ಷಣ, ಉದ್ಯೋಗದ ವಿಚಾರದಲ್ಲಿ ನಿಗಮ ಮಂಡಳಿ ಸ್ಥಾಪನೆ ಮಾಡಿ 49 ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ಪ್ಯಾಕೇಜ್ ನೀಡಲಾಗುವುದು. ಉದ್ಯೋಗದ ವಿಚಾರದಲ್ಲಿ ಅಲೆಮಾರಿಗಳಿಗೆ ನೇರ ನೇಮಕಾತಿ ಮಾಡಬಹುದಾ? ಎನ್ನುವುದನ್ನು ಚಿಂತನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಬಸವರಾಜ್ ಕೌತಾಳ್ ತಿಳಿಸಿದರು.

ಪರಿಶಿಷ್ಟ ಜಾತಿಗಳ ಆಯೋಗ ರಚನೆ ಮಾಡಿದ ನಂತರ ಆಯೋಗಕ್ಕೆ ಮೀಸಲಾತಿ ಹಂಚಿಕೆಯ ಅಧಿಕಾರ ನೀಡಲಾಗುವುದು. ಅಲ್ಲಿಂದ ಅಲೆಮಾರಿಗಳಿಗೆ ಆಗ ಶೇ.1ರಷ್ಟು ಮೀಸಲಾತಿ ಮಾಡಿಸೋಣ ಎಂಬುದಾಗಿ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

‘ಕನಿಷ್ಟ ಒಂದು ತಿಂಗಳು ಧರಣಿ ನಡೆಸುತ್ತೇವೆ. ರಾಜ್ಯ ಸರಕಾರದ ನಡೆ ನೋಡಿಕೊಂಡು ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸುತ್ತೇವೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಿಕ್ಕ ಸಂತೋಷದಲ್ಲಿ ನಾವು ಇಲ್ಲ. ಅಲೆಮಾರಿಗಳ ಹೋರಾಟವನ್ನು ನಾವು ಮುಂದುವರಿಸುತ್ತೇವೆ’

-ಬಸವರಾಜ್ ಕೌತಾಳ್, ಹೋರಾಟಗಾರ

‘ಹೈದರಾಬಾದ್ ಕರ್ನಾಟಕ 370ಜೆ, ಒಳಮೀಸಲಾತಿ ಎಲ್ಲವೂ ಸಂವಿಧಾನದ ಮೂಲಕ ಜಾರಿಯಾಗಿದೆ. ಸುಪ್ರೀಂ ಕೋರ್ಟ್‍ನ ತೀರ್ಪು ಸತ್ತಿಲ್ಲ. ಅದನ್ನು ಇಟ್ಟುಕೊಂಡು ಕಾನೂನು ಹೋರಾಟವನ್ನು ಮಾಡಲಾಗುವುದು. ಅಲೆಮಾರಿಗಳಿಗೆ ಶೇ.1ರಷ್ಟು ಮೀಸಲಾತಿ ನಮಗೆ ಸಿಗುತ್ತದೆ. ನಮ್ಮ ಪರವಾಗಿ ಆಂಧ್ರಪ್ರದೇಶದ ಮಾನವ ಹಕ್ಕುಗಳ ಹೋರಾಟಗಾರರಾದ ಪ್ರೊ.ಹರಗೋಪಾಲ್ ನಮ್ಮ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಾರೆ’

-ಅಂಬಣ್ಣ ಅರೋಲಿಕರ್, ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X