Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ...

ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ ರಾಜ್ಯಪತ್ರ ಹೊರಡಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ27 Oct 2025 8:11 PM IST
share
ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ ರಾಜ್ಯಪತ್ರ ಹೊರಡಿಸಿದ ಸರಕಾರ

ಬೆಂಗಳೂರು : ರಾಜ್ಯ ಸರಕಾರವು ಸಾರಿಗೆ ನಿಗಮಗಳ ಪ್ರಯಾಣ ದರವನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡುವ ನಿಟ್ಟಿನಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ಯನ್ನು(ಪಿಟಿಎಫ್‍ಆರ್‍ಸಿ) ರಚನೆ ಮಾಡಿ, ರಾಜ್ಯಪತ್ರ ಹೊರಡಿಸಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಲು ಕರಡು ಅಧಿಸೂಚನೆಯನ್ನು ಹೊರಡಿಸಿ, ಸಾರ್ವಜನಿಕರಿಗೆ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಸಾರ್ವಜನಿಕರಿಂದ ಬಂದಂತ ಆಕ್ಷೇಪಗಳನ್ನು ಪರಿಶೀಲನೆ ಮಾಡಿ, ಇದೀಗ ರಾಜ್ಯಪತ್ರವನ್ನು ಹೊರಡಿಸಿದೆ.

ಕರ್ನಾಟಕ ಮೋಟಾರು ವಾಹನ ನಿಯಮಗಳು-1989ಕ್ಕೆ ತಿದ್ದಪಡಿ ತಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲಿಯೇ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯು ಒಬ್ಬ ಅಧ್ಯಕ್ಷ ಮತ್ತು ಇಬ್ಬರು ಸದಸ್ಯರನ್ನು ಒಳಗೊಂಡಿರುತ್ತದೆ.

ಸಮಿತಿಯ ಅಧ್ಯಕ್ಷರು, ಸರಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಹೈಕೋರ್ಟ್‍ನ ನಿವೃತ್ತ ನ್ಯಾಯಾಧೀಶರಾಗಿರಬೇಕು. ಇಬ್ಬರು ಸದಸ್ಯರಲ್ಲಿ, ಒಬ್ಬರು ಕಾನೂನಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ನಿವೃತ್ತ ಪ್ರಧಾನ ಕಾರ್ಯದರ್ಶಿ ಅಥವಾ ಸರಕಾರದ ಕಾರ್ಯದರ್ಶಿಯಾಗಿರಬೇಕು. ಇನ್ನೊಬ್ಬ ಸದಸ್ಯರು ಕೈಗಾರಿಕಾ ತಜ್ಞರು ಅಥವಾ ಹಣಕಾಸು ತಜ್ಞರಾಗಿರಬಹುದು. ಕೆಎಸ್ಸಾರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ಸಮಿತಿಯು ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಗಳನ್ನು ಅಧ್ಯಯನ ಮಾಡುತ್ತದೆ. ಕಾಲಕಾಲಕ್ಕೆ ವಿವಿಧ ದರಗಳ ಪರಿಷ್ಕರಣೆಯನ್ನು ಆಯಾ ರಸ್ತೆ ಸಾರಿಗೆ ನಿಗಮಕ್ಕೆ ಸೂಚಿಸುತ್ತದೆ. ಹಣಕಾಸು ಮತ್ತು ಕಾರ್ಯಾಚರಣೆಯನ್ನು ಸುಧಾರಿಸಲು ದರಗಳ ಮೇಲೆ ವಿವಿಧ ಶುಲ್ಕಗಳನ್ನು ವಿಧಿಸುವ ಬಗ್ಗೆ ಸಮಿತಿಯು ಸೂಚನೆ ನೀಡುತ್ತದೆ.

ಸಾರಿಗೆ ಸಂಸ್ಥೆಗಳು ಒಮ್ಮೆಲೇ ಹೆಚ್ಚು ದರ ಪರಿಷ್ಕರಣೆ ಮಾಡುವುದರಿಂದ ಸಾರ್ವಜನಿಕ ಪ್ರಯಾಣಿಕರಿಗೂ ಹೊರೆಯಾಗುತ್ತದೆ. ಕಾಲಕಾಲಕ್ಕೆ ಅತ್ಯಲ್ಪ ಪ್ರಯಾಣ ದರ ಏರಿಕೆಯು ವೈಜ್ಞಾನಿಕವಾಗಿ ಸಮಂಜಸವಾಗಿರುತ್ತದೆ. ಹೀಗಾಗಿ ರಾಜಕೀಯ ಇಚ್ಛಾಶಕ್ತಿಗಳಿಂದ ದೂರವಿರಿಸಿ, ಪ್ರಯಾಣ ದರ ನಿರ್ವಹಣಾ ಸಮಿತಿಯು ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದ್ದು, ಸಾರಿಗೆ ಸಂಸ್ಥೆಗಳನ್ನು ಬಲಪಡಿಸಲು ಸಾಧ್ಯವಾಗುತ್ತದೆ ಎಂದು ಸರಕಾರವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X