Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಧರ್ಮಸ್ಥಳ ದೌರ್ಜನ್ಯ ವಿರೋಧಿ...

ಬೆಂಗಳೂರು | ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಸೆ.25ಕ್ಕೆ ‘ಬೃಹತ್ ನ್ಯಾಯ ಸಮಾವೇಶ’

ವಾರ್ತಾಭಾರತಿವಾರ್ತಾಭಾರತಿ17 Sept 2025 9:45 PM IST
share
ಬೆಂಗಳೂರು | ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ವತಿಯಿಂದ ಸೆ.25ಕ್ಕೆ ‘ಬೃಹತ್ ನ್ಯಾಯ ಸಮಾವೇಶ’

ಬೆಂಗಳೂರು, ಸೆ.17: ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಸಹಜ ಸಾವು, ಅತ್ಯಾಚಾರ, ಹಲ್ಲೆ, ಕೊಲೆ ಯುವತಿಯರ ನಾಪತ್ತೆ ಪ್ರಕರಣವನ್ನು ಎಸ್‍ಐಟಿ ಸಮಗ್ರ ತನಿಖೆ ಮಾಡಬೇಕು. ಧರ್ಮಸ್ಥಳದ ಭೂ ಅಕ್ರಮ, ಭೂ ಕಬಳಿಕೆ, ಬಡ್ಡಿ ವ್ಯವಹಾರಗಳನ್ನು ತನಿಖೆ ಮಾಡಬೇಕು ಎಂದು ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಸೆ.25ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ನ್ಯಾಯ ಸಮಾವೇಶ ಆಯೋಜಿಸಲಾಗಿದೆ.

ಸಮಾವೇಶದಲ್ಲಿ ಪದ್ಮಲತಾ, ವೇದವಲ್ಲಿ, ನಾರಾಯಣ ಮಾವುತ, ಯಮುನಾ, ಸೌಜನ್ಯ ಸಾವಿಗೆ ನ್ಯಾಯ ಹಾಗೂ ಧರ್ಮಸ್ಥಳದ ಅಶೋಕನಗರ, ಮುಂಡ್ರುಪಾಡಿಯ ದಲಿತ ಕುಟುಂಬಗಳಿಗೆ ಮೂಲಸೌಕರ್ಯ ನೀಡಿ, ಹಕ್ಕು ಪತ್ರ ಒದಗಿಸಿ, ತಲಾ ಒಂದು ಎಕರೆ ಜಮೀನು ನೀಡುವಂತೆ ಆಗ್ರಹಿಸಲಾಗುತ್ತದೆ.

ಕರ್ನಾಟಕದ ಹಲವು ಸಮಾನ ಮನಸ್ಕ ಪಕ್ಷಗಳು, ಎಡ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ, ಸಾಂಸ್ಕೃತಿಕ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಕಾರ್ಯನಿರ್ವಹಿಸುವ ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ಈ ಸಮಾವೇಶವನ್ನು ಆಯೋಜಿಸಿದ್ದು, ಅಂದು ಬೆಳಿಗ್ಗೆ 10:30ಕ್ಕೆ ಸಮಾವೇಶ ಆರಂಭವಾಗಲಿದೆ. ರಾಷ್ಟ್ರ ಮತ್ತು ರಾಜ್ಯದ ಹಲವು ಚಿಂತಕರು, ಹೋರಾಟಗಾರರು, ಸಾಹಿತಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಪ್ರಮುಖ ಹಕ್ಕೊತ್ತಾಯಗಳು: ಬಿಜೆಪಿ ಹಾಗೂ ಸಂಘಪರಿವಾರ ಎಸ್‍ಐಟಿ ತನಿಖೆಯನ್ನು ಸ್ಥಗಿತಗೊಳಿಸಲು ಪ್ರಯತ್ನ ನಡೆಸುತ್ತಿವೆ. ಎಸ್‍ಐಟಿಯನ್ನು ಒತ್ತಡಕ್ಕೆ ಒಳಪಡಿಸಲು, ದೂರುದಾರರು, ಸಾಕ್ಷಿದಾರನ್ನು ಬೆದರಿಸುವ, ತೇಜೋವಧೆ ನಡೆಸಿ ಹಿಮ್ಮಟ್ಟಿಸುವ ಯತ್ನ ನಡೆಯುತ್ತಿದೆ. ಇಂತಹ ಪಿತೂರಿ, ಒತ್ತಡಕ್ಕೆ ಒಳಗಾಗದೇ ಎಸ್‍ಐಟಿ ಅದರ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ವತಂತ್ರ ತನಿಖೆ ಸಡೆಸಲು ಅನುವು ಮಾಡಿಕೊಡಬೇಕು. ಧರ್ಮಸ್ಥಳದಲ್ಲಿ ನೂರಾರು ದಲಿತರು ಸ್ವಚ್ಚತಾ ಕಾರ್ಮಿಕರಾಗಿ ತಲೆ ತಲಾಂತರಗಳಿಂದ ದುಡಿಯುತ್ತಿದ್ದಾರೆ. ಈ ರೀತಿ ದುಡಿಯುವ ಸ್ವಚ್ಚತಾ ಕಾರ್ಮಿಕರಿಗೆಂದೇ ಧರ್ಮಸ್ಥಳದಲ್ಲಿ ಅಶೋಕ ನಗರ ದಲಿತ ಕಾಲನಿಯನ್ನು ನಿರ್ಮಿಸಲಾಗಿದೆ. ಅಶೋಕನಗರದಲ್ಲೇ ವಾಸಿಸುತ್ತಿದ್ದರೂ ಇನ್ನೂ ಮನೆಯ ಅಡಿಸ್ಥಳವನ್ನು ದಲಿತರ ಹೆಸರಿಗೆ ಹಕ್ಕು ಪತ್ರ ನೀಡಲಾಗಿಲ್ಲ. ಸ್ವಚ್ಚತಾ ಕಾರ್ಮಿಕರು ಕುಸಿದಿರುವ, ತೂತಾಗಿರುವ ಮನೆಗಳಲ್ಲಿ ಹೀನಾಯ ಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ. ಸ್ವಚ್ಚತಾ ಕಾರ್ಯ ಮಾಡುವ ದಲಿತರಿಗೆ ಮಾತ್ರ ಕಾರ್ಮಿಕ ಕಾಯ್ದೆಯ ಪ್ರಕಾರ ಕನಿಷ್ಠ ಸಂಬಳವನ್ನೂ ನೀಡುತ್ತಿಲ್ಲ. ಧರ್ಮಸ್ಥಳ ಅಶೋಕನಗರದ 128 ದಲಿತ ಕುಟುಂಬಗಳು, ಮುಂಡ್ರುಪಾಡಿಯ 42 ದಲಿತ ಕುಟುಂಬಗಳು ಮತ್ತು ಗ್ರಾಮದ ಇತರ ದಲಿತ ಕುಟುಂಬಗಳಿಗೆ ತಲಾ ಒಂದು ಎಕ್ರೆ ಸರಕಾರಿ ಭೂಮಿಯನ್ನು ನೀಡಬೇಕು ಎಂದು ಆಗ್ರಹಿಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X