Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಸಸಿ...

ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಸಸಿ ನೆಡುವ ಗುರಿ : ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ10 Nov 2025 6:47 PM IST
share
ವಿಜಯಪುರ ಜಿಲ್ಲೆಯಲ್ಲಿ 5 ಕೋಟಿ ಸಸಿ ನೆಡುವ ಗುರಿ : ಎಂ.ಬಿ.ಪಾಟೀಲ್
‘ಕೋಟಿ ವೃಕ್ಷ ಅಭಿಯಾನ: ಹಸಿರು ಹೊದಿಕೆ ಶೇ.0.17ರಿಂದ ಶೇ.2.4ಕ್ಕೆ ಏರಿಕೆ’

ಬೆಂಗಳೂರು : ವಿಜಯಪುರ ಜಿಲ್ಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆಯುತ್ತಿರುವ ʼಕೋಟಿ ವೃಕ್ಷ ಅಭಿಯಾನ’ದಡಿ 9 ವರ್ಷಗಳಲ್ಲಿ ಒಂದೂವರೆ ಕೋಟಿ ಸಸಿಗಳನ್ನು ನೆಡಲಾಗಿದೆ. 2030ರ ವೇಳೆಗೆ ಇನ್ನೂ 3.50ಕೋಟಿ ಸಸಿಗಳನ್ನು ನೆಟ್ಟು, 5ಕೋಟಿ ಸಸಿಗಳ ಗುರಿ ಸಾಧಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ‘ವೃಕ್ಷೋಥಾನ್-2025’ ಓಟದ ಭಿತ್ತಿಪತ್ರ, ಟೀ ಶರ್ಟ್ ಬಿಡುಗಡೆ ಮಾಡಿದ ಅವರು ಮಾತನಾಡಿದ ಅವರು, 2016ರಲ್ಲಿ ಜಿಲ್ಲೆಯಲ್ಲಿ ಶೇ.0.17ರಷ್ಟು ಮಾತ್ರ ಅರಣ್ಯವಿತ್ತು. ಆಗ ಜಿಲ್ಲಾಡಳಿತ ಹಾಗೂ ಪಕ್ಷಾತೀತವಾಗಿ ಹಲವು ಸಂಘ-ಸಂಸ್ಥೆಗಳು, ಬಿಎಲ್‍ಡಿಇ ಅಸೋಸಿಯೇಷನ್ ಮೂಲಕ ಕೋಟಿ ವೃಕ್ಷ ಅಭಿಯಾನ ರೂಪಿಸಲಾಯಿತು.

ಹೀಗಾಗಿ ಇದೀಗ ಜಿಲ್ಲೆಯಲ್ಲಿ ಹಸಿರು ಹೊದಿಕೆಯು ಶೇ.2.4ರಷ್ಟಕ್ಕೆ ವೃದ್ಧಿಸಿದೆ. ಜೊತೆಗೆ ಶುದ್ಧ ಗಾಳಿಯ ಗುಣಮಟ್ಟದಲ್ಲಿ ಇಡೀ ದೇಶದಲ್ಲಿ ವಿಜಯಪುರ ಜಿಲ್ಲೆಯು ತೃತೀಯ ಸ್ಥಾನದಲ್ಲಿದೆ. ಅಂರ್ತಜಲ ಮಟ್ಟ ವೃದ್ಧಿಸಿದ್ದು, ಮಣ್ಣಿನ ಸವಕಳಿ ಮತ್ತು ಮರು ಅರಣ್ಯೀಕರಣ ಸಾಧ್ಯವಾಗಿದೆ. ಅಲ್ಲದೆ, ಬಿಸಿಲಿನ ತಾಪಮಾನ ಮೊದಲಿಗಿಂತ 0.5ಡಿಗ್ರಿ ಸೆಲ್ಸಿಯಷ್ಟು ಕಡಿಮೆಯಾಗಿದ್ದು, ಮಳೆಯ ಪ್ರಮಾಣವು 550ಮಿ.ಮೀ. ಇದ್ದಿದ್ದು ಈಗ 650 ಮಿ.ಮೀ.ವರೆಗೂ ಹೆಚ್ಚಳ ಕಂಡಿದೆ ಎಂದು ಅವರು ವಿವರಿಸಿದರು.

ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಕ ಸಿಎಸ್‍ಆರ್ ನಿಧಿಯಡಿ ಮೊದಲ ಐದು ವರ್ಷ ತಲಾ 10ಲಕ್ಷ ಸಸಿಗಳನ್ನು ವಿತರಿಸಲಾಯಿತು. ರೈತರಿಗೆ ತಮಗೆ ಬೇಕಾದ ಗಿಡಗಳನ್ನು ಉಚಿತವಾಗಿ ಹಂಚಲಾಗುತ್ತಿದೆ. ಇದಕ್ಕಾಗಿ 2016ರಲ್ಲಿ ಸರಕಾರದ ವಿಶೇಷ ಅನುದಾನವನ್ನೂ ಪಡೆದುಕೊಳ್ಳಲಾಗಿತ್ತು. ಇಂತಹ ಸೌಲಭ್ಯವನ್ನು ಮುಂದಿನ 5-10 ವರ್ಷಗಳಿಗೆ ವಿಸ್ತರಿಸಿಕೊಂಡು, 5 ಕೋಟಿ ಗಿಡ ನೆಡುವ ಮಹದಾಸೆ ನಮ್ಮದಾಗಿದೆ. ಈಗ ವಾರ್ಷಿಕ ಮಳೆಯ ದಿನಗಳು ಮೊದಲಿದ್ದ 20-30 ದಿನಗಳಿಂದ 40 ದಿನಗಳಿಗೆ ಹಿಗ್ಗಿದೆ ಎಂದು ಅವರು ನುಡಿದಿದರು.

ಕೋಟಿ ವೃಕ್ಷ ಅಭಿಯಾನದಿಂದ ವಿಜಯಪುರ ಜಿಲ್ಲೆಯಲ್ಲಿ ಜೀವವೈವಿಧ್ಯ ಪೋಷಣೆ ಸಾಧ್ಯವಾಗಿದ್ದು, 180ಕ್ಕೂ ಹೆಚ್ಚು ಬಗೆಯ ಗಿಡಗಳನ್ನು ನೆಡಲಾಗಿದೆ. ಇವುಗಳಿಗೆ ಹನಿ ನೀರಾವರಿ ಮತ್ತು ಸೌರವಿದ್ಯುತ್ ಮೂಲಕ ನೀರು ಪೂರೈಸಲಾಗುತ್ತಿದೆ. ವಿಜಯಪುರಕ್ಕೆ ನೀರು ಒದಗಿಸುವ ಭೂತನಾಳ ಕೆರೆಯ ಸುತ್ತಮುತ್ತ ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ. ಜೊತೆಗೆ ಮಮದಾಪುರ ಕೆರೆಯ ಪ್ರದೇಶದಲ್ಲಿ 1,600 ಎಕರೆಯಲ್ಲಿ 1.27ಲಕ್ಷ ಗಿಡ ನೆಟ್ಟು ಹಸಿರು ಹೊದಿಕೆಯನ್ನು ಸೃಷ್ಟಿಸಲಾಗಿದೆ. ಇಲ್ಲಿ ಇನ್ನೂ 20ಸಾವಿರಕ್ಕೂ ಹೆಚ್ಚು ಗಿಡ ನೆಡಲಾಗುವುದು. ಇದು ಉಳಿದ ಜಿಲ್ಲೆಗಳಿಗೆ ಮೇಲ್ಪಂಕ್ತಿಯಾಗುವಂತಿದೆ ಎಂದು ಪಾಟೀಲ್ ಹೇಳಿದರು.

ಕೋಟಿ ವೃಕ್ಷ ಅಭಿಯಾನದ ಮೂಲಕ ಹುಟ್ಟುಹಬ್ಬಕ್ಕೊಂದು ಗಿಡ, ರಕ್ಷಾಬಂಧನದಂದು ವೃಕ್ಷಬಂಧನ, ಏಪ್ರಿಲ್ ಕೂಲ್, ಸಮಾರಂಭಗಳಲ್ಲಿ ಸಸಿಗಳ ಕೊಡುಗೆ ಮುಂತಾದ ಹೆಜ್ಜೆಗಳನ್ನು ಪರಿಚಯಿಸಲಾಗಿದೆ. ಅಭಿಯಾನದ ಸಂಚಾಲಕರಾದ ಮುರುಗೇಶ್ ಪಟ್ಟಣ ಶೆಟ್ಟಿ, ಪದಾಧಿಕಾರಿಗಳಾದ ವೀರೇಂದ್ರ ಗುಚ್ಚಟ್ಟಿ, ಡಾ. ರಾಜುಯಲಗೊಂಡ, ಸೋಮು ಮಠ ಗುರೂಜಿ, ನಂದೀಶ್ ಹುಂಡೇಕರ್ ಅವರು ಉಪಸ್ಥಿತರಿದ್ದರು.

ಡಿ.7ಕ್ಕೆ ವೃಕ್ಷೋಥಾನ್: ವೃಕ್ಷೋಥಾನ್-2025 ಈ ಬಾರಿ ಡಿ.7ರ ರವಿವಾರ ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು, 15ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇದರಲ್ಲಿ ವಿದ್ಯಾರ್ಥಿಗಳು, ಪೊಲೀಸ್, ಸೇನಾ ಸಿಬ್ಬಂದಿ, ವಿಜಯಪುರ ಸೈಕ್ಲಿಂಗ್ ಗ್ರೂಪ್, ಅರಣ್ಯ ಇಲಾಖೆ ಸಹಿತ 50ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ತೊಡಗಿಕೊಳ್ಳಲಿವೆ. ಇದರಲ್ಲಿ ಒಟ್ಟು 10ಲಕ್ಷ ರೂ.ಮೊತ್ತದ ಬಹುಮಾನ ನೀಡಲಾಗುವುದು. ವೃಕ್ಷೋಥಾನ್ ಯಾವುದೇ ವಯೋಮಿತಿಯ ನಿರ್ಬಂಧವಿಲ್ಲದೆ 5ಕಿ.ಮೀ, 10ಕಿ.ಮೀ. ಮತ್ತು 21ಕಿ.ಮೀ. ವಿಭಾಗದಲ್ಲಿ ನಡೆಯಲಿದೆ. ಆಸಕ್ತರು www.vrukhothon.co.in ಮೂಲಕ ನೋಂದಾಯಿಸಿಕೊಳ್ಳಬಹುದು.

ಈ ಬಾರಿ ವೃಕ್ಷೋಥಾನ್ ಮೂಲಕ ವಿಜಯಪುರದ ಚಾರಿತ್ರಿಕ ತಾಣಗಳನ್ನೂ ಬೆಸೆಯಲಾಗಿದೆ. ಇದರಂತೆ ಗೋಲ್ ಗುಂಬಝ್, ಗಗನ್ ಮಹಲ್ ಸುಂದರೇಶ್ವರ ದೇವಸ್ಥಾನ, ಸೈನಿಕ್ ಸ್ಕೂಲ್, ನರಸಿಂಹಸ್ವಾಮಿ ದೇವಸ್ಥಾನ, ಸಿದ್ಧೇಶ್ವರ ದೇವಸ್ಥಾನ, ಇಬ್ರಾಹೀಂ ರೋಜಾ, ಬಾರಾ ಕಾಮಾನ್‍ಗಳನ್ನು ಇದು ಹಾದು ಹೋಗಲಿದೆ. ‘ಸ್ವಚ್ಚ, ಸುಂದರ, ಹಸಿರು ವಿಜಯಪುರಕ್ಕಾಗಿ ಓಡಿ’ ಈ ಬಾರಿಯೂ ವೃಕ್ಷೋಥಾನ್ ಹೆರಿಟೇಜ್ ರನ್ ಘೋಷ ವಾಕ್ಯವಾಗಿದೆ’

-ಎಂ.ಬಿ.ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವ ವಿಜಯಪುರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X