Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಠ್ಯಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ’...

ಪಠ್ಯಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಬದಲಿಸುವ NCERT ಶಿಫಾರಸ್ಸಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ26 Oct 2023 11:38 PM IST
share
ಪಠ್ಯಗಳಲ್ಲಿ ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಬದಲಿಸುವ NCERT ಶಿಫಾರಸ್ಸಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅಸಮಾಧಾನ

ಶಿವಮೊಗ್ಗ(ಅ.26): ಶಾಲೆ ಪಠ್ಯದಲ್ಲಿ ದೇಶದ ಹೆಸರನ್ನು ಇಂಡಿಯಾ ಎಂಬುದರ ಬದಲಾಗಿ ಭಾರತ ಎಂದು ಬದಲಿಸುವ ಉನ್ನತ ಮಟ್ಟದ ಶಿಫಾರಸ್ಸಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಷ್ಟು ದಿನ ಇಂಡಿಯಾ,ಭಾರತ ಎನ್ನುವುದು ಸರಿಯಿತ್ತು.ಚುನಾವಣೆ ಬರುವ ಸಮಯಕ್ಕೆ ಈ ರೀತಿಯ ಸುದ್ದಿಗಳ ಲಗಾಮನ್ನು ಕೇಂದ್ರ ಸರ್ಕಾರ ಹಿಡಿಯುತ್ತಿದೆ.ಶಿಕ್ಷಣದಲ್ಲೂ ಕೇಸರಿಕರಣ ಮಾಡಲು ಹೊರಟಿದ್ದಾರೆ.ಭಾವನಾತ್ಮಕ ವಿಚಾರಗಳನ್ನು ಬದಿಗಿಡಬೇಕು.ಮಕ್ಕಳ ಹಿತದೃಷ್ಟಿಯ ಲಗಾಮು ರಾಜ್ಯ ಸರ್ಕಾರದ ಕೈಯಲ್ಲಿದೆ ಎಂದರು.

ಏಕಾಏಕಿ ಈ ರೀತಿ ಚರ್ಚೆ ನಡೆಯುತ್ತಿದೆ.ಇದರಿಂದ ಹೊಟ್ಟೆ ತುಂಬುತ್ತೇನ್ರಿ.ಭಾರತವನ್ನು ಒಪ್ಪೋಣ,ಇಂಡಿಯಾವನ್ನು ಒಪ್ಪೋಣ.ಆದರೆ ಇಷ್ಟು ದಿನ ಬಂದಾಗಿದೆ.ಇದು ಆಗಬಾರದು. ಸಂಪ್ರದಾಯ ಇರಬೇಕು.ರಾಜ್ಯ ಶಿಕ್ಷಣ ನೀತಿ ಯಾಕೆ ಬೇಕು ಅಂದರೆ ಒಂದು ವ್ಯವಸ್ಥೆ.ನಮ್ಮ ಸಂಸ್ಕೃತಿ.ನಾವು ಮಾತೃಭಾಷೆ ಬಿಟ್ಟುಕೊಡಲ್ಲ.ನೀವು ಹೇರುವ ವಿಚಾರಗಳನ್ನು ಕಾನೂನು ಮಾಡಿಬಿಟ್ಟರೆ,ನಾವು ತಲೆಬಾಗಬೇಕಾಗುತ್ತದೆ.ಕಾನೂನುಗಳನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಾರೆ.ಈ ರೀತಿಯ ಚರ್ಚೆ ಅನಾವಶ್ಯಕ ಎಂದರು.

ಮಕ್ಕಳಿಗೆ ಅವಶ್ಯಕತೆ ಇದ್ದರೆ ಸ್ವಾಗತಿಸುತ್ತೇನೆ.ಮಕ್ಕಳಿಗೆ ಗೊಂದಲ ಸೃಷ್ಟಿ ಮಾಡುತ್ತಿರುವುದು,ಧಾರ್ಮಿಕ ಬೇಧಭಾವ ತರುವುದು,ಸಮಾಜದಲ್ಲಿ ಅಸುರಕ್ಷತೆ ತರುವುದನ್ನು ದಿಕ್ಕರಿಸುತ್ತೇವೆ.ಮಕ್ಕಳು ಬೆಳೆಯುವವರಿಗೆ ಶುದ್ದವಾಗಿ ಬೆಳೆಸುವ ಮನೋಭಾವನೆಯನ್ನು ದೇವರು ಬಿಜೆಪಿಯವರಿಗೆ ಕಲಿಸಲಿ ಎಂದರು.

ಹುಲಿ ಉಗುರು ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ಕಾನೂನಿನ ಪರಿಜ್ಣಾನ ಇಟ್ಟುಕೊಳ್ಳಬೇಕು.ದೊಡ್ಡವರಾಗಲಿ ಚಿಕ್ಕವರಾಗಲಿ ಸೂಕ್ಷ್ಮವಾಗಿರಬೇಕು.ಕಾನೂನು ಎಲ್ಲರಿಗೂ ಒಂದೇ ಎಂದರು.

ಬರಗಾಲ ಇದೇ ಅಂತ ಹೇಳಿ ಅನ್ನ ತಿನ್ನುವುದನ್ನು ಕಡಿಮೆ ಮಾಡಲು ಆಗುತ್ತದೆಯಾ.ಅತಿವೃಷ್ಟಿಯಾದಾಗ ಬಿಜೆಪಿಯವರು ಯಾವ ರೀತಿ ಓಡಾಡಿದ್ರು.ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಬೇಕು.ಸರ್ಕಾರದ ಕೆಲಸ ಬಗ್ಗೆ ಪ್ರಶ್ನಿಸಬೇಕು.ಸರ್ಕಾರವನ್ನು ಟೀಕಿಸುವ ಮುಂಚೆ ಬಿಜೆಪಿಯವರು ಈ ಸ್ಥಾನದಲ್ಲಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಬೇಕು ಎಂದರು.

ಬಿಜೆಪಿಯವರು ಸರ್ಕಾರವನ್ನು ಟೀಕಿಸುವ ಮುಂಚೆ,ಮಾನ ಮಾರ್ಯಾದೆ ಇದ್ದರೆ ರಾಜ್ಯದ ಜಿಎಸ್‌ಟಿ ಪಾಲನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ.ಕಾವೇರಿ ವಿಚಾರ ಮಾತನಾಡಲ್ಲ,ಬರಗಾಲದಿಂದ ನಷ್ಟ ಪರಿಹಾರ ಕೊಡಿಸುವ ಬಗ್ಗೆ ಚಕಾರ ಎತ್ತಲ್ಲ,ಬಗರ್ ಹುಕುಂ ರೈತರ ಬಗ್ಗೆ ಮಾತನಾಡಲ್ಲ,ರಾಜ್ಯಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X