Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ,...

ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ17 Dec 2024 11:53 AM IST
share
ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ

ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ (ಡಿ.16) ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾದ ವಿಧಾನಸಭೆ ಕಲಾಪ ತಡರಾತ್ರಿಯವರೆಗೂ ನಡೆಯಿತು. ರಾತ್ರಿ 1 ಗಂಟೆ ಬಳಿಕವೂ ಅದು ಮುಂದುವರಿದಿತ್ತು. ಸುಮಾರು 15 ಗಂಟೆಗಳ ಕಾಲ ಕಲಾಪ ನಡೆದಿದೆ.

ಪ್ರಶ್ನೋತ್ತರ ಕಲಾಪ, ಗಮನ ಸೆಳೆಯುವ ಸೂಚನೆ, ವಿಧೇಯಕ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಚೆರ್ಚೆ ನಡೆಯಿತು. ಮಧ್ಯರಾತ್ರಿಯವರೆಗೂ ನಡೆದ ಕಲಾಪದಲ್ಲಿ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಮೂವರು ಸಚಿವರು, 7 ಕಾಂಗ್ರೆಸ್ ಶಾಸಕರು, 4 ಜೆಡಿಎಸ್ ಶಾಸಕರು, ಓರ್ವ ಬಿಜೆಪಿ ಶಾಸಕ ಮತ್ತು 1 ಪಕ್ಷೇತರ ಶಾಸಕ ಹಾಜರಿದ್ದರು.

ಮೊದಲ ಬಾರಿಗೆ ಆಯ್ಕೆಯಾಗಿರುವ ಜೆಡಿಎಸ್ ಸದಸ್ಯೆ ಕರೆಮ್ಮ ಅವರು ಮಧ್ಯರಾತ್ರಿಯ ವರೆಗೂ ಕಲಾಪದಲ್ಲಿ ಭಾಗಿಯಾಗಿ ತಮ್ಮ ಗಮನ ಸೆಳೆಯುವ ಸೂಚನೆಗೆ ಸರಕಾರದಿಂದ ಉತ್ತರ ಪಡೆದರು.

ಮಧ್ಯರಾತ್ರಿ 12.55ರ ವರೆಗೆ ನಡೆಸಿ ವಿಧಾನ ಮಂಡಲ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಬಿಜೆಪಿ ಸದಸ್ಯರಾದ ಗುರುರಾಜ್ ಗಂಟಿಹೊಳೆ, ಬೈರತಿ ಬಸವರಾಜ್, ವಿ.ಸುನೀಲ್ ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಅಭಿನಂದಿಸಿದರು

ಸೋಮವಾರ ಬೆಳಿಗ್ಗೆ 10ಕ್ಕೆ ಆರಂಭವಾಗಿ ಮಧ್ಯಾಹ್ನದ ಭೋಜನ ವಿರಾಮ, ಸಂಜೆಯಲ್ಲಿ 10 ನಿಮಿಷ ಮುಂದೂಡಿಕೆ ಬಳಿಕ ತಡರಾತ್ರಿ 12.55ರ ತನಕ ನಡೆದ ಕಲಾಪ ದಾಖಲೆ ಬರೆದಿದೆ.

ನಿನ್ನೆಯ ಕಲಾಪದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್, ವಕ್ಫ್ ವಿಚಾರ, ಮುನಿರತ್ನ ಪ್ರಕರಣ ಸದನದಲ್ಲಿ ಹೆಚ್ಚು ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಈ ಎಲ್ಲಾ ಗದ್ದಲಗಳ ಮಧ್ಯೆಯೂ ಹಲವು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ ಆಗಿದೆ.

Tags

Belgaum session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X