Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹ ರಕ್ಷಕ ದಳದ ಸಿಬ್ಬಂದಿಯ ಕರ್ತವ್ಯ...

ಗೃಹ ರಕ್ಷಕ ದಳದ ಸಿಬ್ಬಂದಿಯ ಕರ್ತವ್ಯ ಭತ್ಯೆ ಪರಿಷ್ಕರಣೆಗೆ ಕ್ರಮ: ಸಚಿವ ಜಿ. ಪರಮೇಶ್ವರ್ ಭರವಸೆ

ʼಪೊಲೀಸ್ ಸಿಬ್ಬಂದಿಗಳಿಗೆ ಶೇ.80ರಷ್ಟು ವಸತಿ ಗೃಹ ನಿರ್ಮಿಸಲು ಆದ್ಯತೆʼ

ವಾರ್ತಾಭಾರತಿವಾರ್ತಾಭಾರತಿ12 Dec 2023 1:21 PM IST
share
ಗೃಹ ರಕ್ಷಕ ದಳದ ಸಿಬ್ಬಂದಿಯ ಕರ್ತವ್ಯ ಭತ್ಯೆ ಪರಿಷ್ಕರಣೆಗೆ ಕ್ರಮ: ಸಚಿವ ಜಿ. ಪರಮೇಶ್ವರ್ ಭರವಸೆ

ಬೆಳಗಾವಿ: ‘ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹ ರಕ್ಷಕದಳದ ಸಿಬ್ಬಂದಿಯ ಕರ್ತವ್ಯ ಭತ್ಯೆಯನ್ನು ಪರಿಷ್ಕರಣೆಗೆ ಸರಕಾರ ತಕ್ಷಣವೇ ಕ್ರಮ ವಹಿಸಲಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶಿಕಲಾ ಜೊಲ್ಲೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 25,882 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ದಿನದ ಭತ್ಯೆ ಪೊಲೀಸ್ ಇಲಾಖೆ ಬಂದೋಬಸ್ತ್‌ ಗೆ 750 ರೂ.ಗಳನ್ನು ನೀಡಲಾಗುತ್ತಿದೆ. ಅನ್ಯ ಇಲಾಖೆಗಳ ಕೊರಿಕೆ ಮೇರೆಗೆ ನಿಯೋಜಿಸುವ ಸಿಬ್ಬಂದಿಗೆ ದಿನಕ್ಕೆ 600 ರೂ. ನೀಡಲಾಗುತ್ತದೆ.

ಪಹರೆ ನಿರ್ವಹಿಸುವವರಿಗೆ ನಗರದಲ್ಲಿ ದಿನಕ್ಕೆ 455 ರೂ. ಹಾಗೂ ಇತರೆ ಸ್ಥಳಗಳಲ್ಲಿ ದಿನಕ್ಕೆ 380 ರೂ.ನಂತೆ ಭತ್ಯೆ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ. ರಾಜ್ಯದಲ್ಲಿ ಒಟ್ಟು 426 ಘಟಕಗಳಲ್ಲಿ 21 ಸಾವಿರಕ್ಕೂ ಅಧಿಕ ಪುರುಷ ಮತ್ತು 4500ಕ್ಕೂ ಅಧಿಕ ಮಹಿಳಾ ಗೃಹ ರಕ್ಷಕ ದಳದ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಇತರೆ ರಾಜ್ಯಗಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಗೃಹ ರಕ್ಷಕ ದಳದ ಸಿಬ್ಬಂದಿ ಕರ್ತವ್ಯ ಭತ್ಯೆ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಶಶಿಕಲಾ ಜೊಲ್ಲೆ, ಅತ್ಯಂತ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹ ರಕ್ಷಕ ದಳದ ಸಿಬ್ಬಂದಿ ಸಂಕಷ್ಟದ ಸ್ಥಿತಿಯಲ್ಲಿದ್ದು, ಅವರಿಗೆ ಕರ್ತವ್ಯ ಭತ್ಯೆ ಹೆಚ್ಚಳ ಮಾಡಬೇಕು. ಜೊತೆಗೆ ಅವರನ್ನು ಪೊಲೀಸ್ ಸಿಬ್ಬಂದಿ ನೇಮಕಾತಿಯಲ್ಲಿ ಆದ್ಯತೆ ನೀಡಿಲು ಆಗ್ರಹಿಸಿದರು.

ಪೊಲೀಸ್ ಸಿಬ್ಬಂದಿಗಳಿಗೆ ಶೇ.80ರಷ್ಟು ವಸತಿ ಗೃಹ ನಿರ್ಮಿಸಲು ಆದ್ಯತೆ

ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗೆ ಶೇ.40ರಷ್ಟು ವಸತಿ ಗೃಹಗಳನ್ನು ನಿರ್ಮಿಸಿದ್ದು, ಅದನ್ನು ಶೇ.80ರಷ್ಟಕ್ಕೆ ಹೆಚ್ಚಿಸಲು ಸರಕಾರ ಕ್ರಮ ವಹಿಸಲಿದ್ದು, ಎಲ್ಲ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಶಾಂತನಗೌಡ ಡಿ.ಜಿ. ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಈ ಹಿಂದೆ ಪೊಲೀಸ್ ಗೃಹ-2020 ಯೋಜನೆ ರೂಪಿಸಿದ್ದು, 15ಸಾವಿರ ವಸತಿ ಗೃಹ ನಿರ್ಮಿಸಲಾಗಿತ್ತು. ಇದೀಗ ಆದೇ ಯೋಜನೆಯನ್ನು ‘ಪೊಲೀಸ್ ಗೃಹ-2025’ರ ವರೆಗೆ ಮುಂದುವರಿಸಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X